<p><strong>ದಾವಣಗೆರೆ: </strong>ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ನಗರಕ್ಕೆ ಶನಿವಾರ ಆಗಮಿಸಿದ್ದ ಜಗದೀಶ ಶೆಟ್ಟರ್ ಅವರಿಗೆ ಎದುರಾಗಿದ್ದು ಮಾತ್ರ ಪ್ರತಿಭಟನೆ ಹಾಗೂ ಮನವಿಗಳ ಮಹಾಪೂರ!</p>.<p>ಜಿಲ್ಲಾಡಳಿತ ಭನವದ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ಶೆಟ್ಟರ್ ತಮ್ಮ ಭಾಷಣ ಆರಂಭ ಮಾಡುತ್ತಿದ್ದಂತೆಯೇ ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಘಟಕದ ಕಾರ್ಯಕರ್ತರು ವೇದಿಕೆಯ ಮುಂಭಾಗದಲ್ಲಿ ಕಪ್ಪುಪಟ್ಟಿ ಪ್ರದರ್ಶಿಸಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದರು. <br /> <br /> ಸ್ಥಳದಲ್ಲಿದ್ದ ಪೊಲೀಸರು ಮನವೊಲಿಸಲು ಪ್ರಯತ್ನಿಸಿದರು. ಆದರೂ, ಕಾರ್ಯಕರ್ತರು ಸಿಎಂ ವಿರುದ್ಧ ಧಿಕ್ಕಾರ ಕೂಗಿದರು. ಬಳಿಕ 18 ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದರು.<br /> ಎ.ಜೆ. ಸದಾಶಿವ ಆಯೋಗ ಸಲ್ಲಿಸಿದ ವರದಿಯನ್ನು ಸದನದಲ್ಲಿ ಅನುಮೋದಿಸಿ, ಅನುಷ್ಠಾನಗೊಳಿಸುವಂತೆ ಕೇಂದ್ರಕ್ಕೆ ವರದಿ ಕಳುಹಿಸಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.<br /> <br /> ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇಷ್ಟು ವರ್ಷ ಕಳೆದರೂ ಒಳಮೀಸಲಾತಿಯ ವರ್ಗೀಕರಣ ವಿಚಾರವಾಗಿ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ರಾಜ್ಯದ ಪರಿಶಿಷ್ಟರಿಗೆ ಮಾಡಿದ ದೊಡ್ಡ ಅನ್ಯಾಯ. ಆಯೋಗದ ವರದಿಯನ್ನು ಸದನದಲ್ಲಿ ಮಂಡಿಸದೇ ಹೋದರೆ ರಾಜ್ಯದಲ್ಲಿ ತೀವ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.<br /> <br /> ಗುಡಿಸಲು ನಿವಾಸಿಗಳಿಗೆ ಈ ಕೂಡಲೇ ಹಕ್ಕುಪತ್ರ ವಿತರಣೆ ಮಾಡಬೇಕು. ಬಗರ್ಹುಕುಂ ಸಾಗುವಳಿ ರೈತರಿಗೆ ಸಾಗುವಳಿ ಪತ್ರ ನೀಡಲು ಆದೇಶ ನೀಡಬೇಕು. ನನೆಗುದಿಗೆ ಬಿದ್ದಿರುವ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನ ರಾಂ ಭವನದ ಜಾಗವನ್ನು ನಗರದ ಮಧ್ಯಭಾಗಕ್ಕೆ ಸ್ಥಳಾಂತರಿಸಿ ಕಾಮಗಾರಿ ಪ್ರಾರಂಭಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ರಾಜ್ಯ ಸಂಘಟನಾ ಸಂಚಾಲಕ ಆಲೂರು ನಿಂಗರಾಜ್, ಬಿ. ದುಗ್ಗಪ್ಪ, ಕೆ.ಎಂ. ಅಂಜಿನಪ್ಪ, ಪುಣಬಗಟ್ಟಿ ನಿಂಗಪ್ಪ, ಹೂವಿನಮಡು ಅಂಜಿನಪ್ಪ, ಎಂ. ರವಿ, ಕಬ್ಬಳ್ಳಿ ಮೈಲಪ್ಪ, ಚಿಕ್ಕನಹಳ್ಳಿ ಬಿ. ಹನುಮಂತಪ್ಪ, ಸಮೀವುಲ್ಲಾ, ವಾಸುದೇವ್, ಆನಗೋಡು ಸುರೇಶ್, ಬೆಳವನೂರು ದೇವೇಂದ್ರಪ್ಪ, ಅಳಗವಾಡಿ ನಿಂಗರಾಜ್ ನೇತೃತ್ವ ವಹಿಸಿದ್ದರು.<br /> <br /> <strong>ಅಸಂಘಟಿತ ವಲಯಕ್ಕೆ ಸೇರಿಸಿ...</strong><br /> ಮಂಡಕ್ಕಿಭಟ್ಟಿ ಕಾರ್ಮಿಕರನ್ನು ಅಸಂಘಟಿತ ವಲಯಕ್ಕೆ ಸೇರಿಸುವ ಮೂಲಕ ಅವರ ಕಲ್ಯಾಣ ಮಂಡಳಿ ಸ್ಥಾಪಿಸಬೇಕು ಎಂದು ಒತ್ತಾಯಿಸಿ ರಾಜ್ಯ ಮಂಡಕ್ಕಿಭಟ್ಟಿ ಕಾರ್ಮಿಕರ ಫೆಡರೇಷನ್ ಕಾರ್ಯಕರ್ತರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.<br /> <br /> ಕಾರ್ಮಿಕರಿಗೆ ಅಪಘಾತ ಪರಿಹಾರ ವಿಮೆ ನೀಡಬೇಕು. ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು. ಆಶ್ರಯಮನೆ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮನವಿ ಸಲ್ಲಿಸಿದರು.<br /> ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ. ರಾಮಚಂದ್ರಪ್ಪ, ಮಹ್ಮದ್ ಶೌಖತ್, ಸೈಯದ್, ಖಾಜಾಪೀರ್, ಆವರಗೆರೆ ವಾಸು, ಬಿ.ಎಸ್. ಅಬ್ದುಲ್ ರೆಹಮಾನ್ ಇದ್ದರು.<br /> <br /> ಕನಿಷ್ಠ ಕೂಲಿ ನೀಡಿ: ಸರ್ಕಾರ ಆಶಾ ಕಾರ್ಯಕರ್ತರಿಗೆ ರೂ. 500 ಭತ್ಯೆ ಬಜೆಟ್ನಲ್ಲಿ ಪ್ರಕಟಿಸಿತ್ತು. ಅದು ಕೂಡಲೇ ಕಾರ್ಯಕರ್ತೆಯರಿಗೆ ಸಿಗುವಂತೆ ಕ್ರಮ ಕೈಗೊಂಡು ಆದೇಶ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಆಶಾ ಕಾರ್ಯಕರ್ತೆಯರ ಫೆಡರೇಷನ್ನ ಕಾರ್ಯಕರ್ತರು ಸಿಎಂಗೆ ಮನವಿ ಸಲ್ಲಿಸಿದರು.<br /> <br /> ಪ್ರತಿಯೊಬ್ಬ ಆಶಾ ಕಾರ್ಯಕರ್ತೆಯರಿಗೂ ಒಂದೇ ರೀತಿಯ ಸಮವಸ್ತ್ರ ಮತ್ತು ಔಷಧಿ ಕಿಟ್ ಕೊಡಬೇಕು. ಕಾರ್ಯಕರ್ತೆಯರನ್ನು ಸರ್ಕಾರಿ ಆರೋಗ್ಯ ಇಲಾಖೆ ನೌಕರರು ಎಂದು ಪರಿಗಣಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.<br /> <br /> ಆವರಗೆರೆ ವಾಸು, ಐರಣಿ ಚಂದ್ರು, ಎಚ್.ಕೆ. ರಾಮಚಂದ್ರಪ್ಪ, ಯಶೋದಮ್ಮ, ರೂಪಾ, ಹಾಲಮ್ಮ, ಗೀತಾ, ಮಂಜುಳಾ ಇದ್ದರು.<br /> <br /> <strong>ಭಾರತ ಕಮ್ಯುನಿಸ್ಟ್ ಪಕ್ಷ</strong><br /> ನಗರದಲ್ಲಿ ಟೆಕ್ಸ್ಟೈಲ್ ಪಾರ್ಕ್ಗಾಗಿ ಮೀಸಲಿಟ್ಟ ಪ್ರದೇಶದಲ್ಲಿ ಕೂಡಲೇ ಟೆಕ್ಸ್ಟೈಲ್ಗೆ ಸಂಬಂಧಿಸಿದ ಉದ್ಯಮ ಸ್ಥಾಪಿಸಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಸಿಎಂಗೆ ಮನವಿ ಸಲ್ಲಿಸಿದರು.<br /> <br /> ಜಿಲ್ಲೆಯಲ್ಲಿ ವಿಮಾನನಿಲ್ದಾಣ ನಿರ್ಮಿಸಬೇಕು. ನಗರದಲ್ಲಿ ರಸ್ತೆ ವಿಸ್ತರಣೆ ಕಾರ್ಯವನ್ನು ಜಿಲ್ಲಾಡಳಿತ ಮುಂದೂಡುತ್ತಿದೆ. ತಕ್ಷಣ ಕ್ರಮ ಕೈಗೊಂಡು ರಸ್ತೆ ವಿಸ್ತರಣೆ ಮಾಡಬೇಕು. ದಾವಣಗೆರೆಯನ್ನು ಎರಡನೇ ರಾಜಧಾನಿಯಾಗಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ನಗರಕ್ಕೆ ಶನಿವಾರ ಆಗಮಿಸಿದ್ದ ಜಗದೀಶ ಶೆಟ್ಟರ್ ಅವರಿಗೆ ಎದುರಾಗಿದ್ದು ಮಾತ್ರ ಪ್ರತಿಭಟನೆ ಹಾಗೂ ಮನವಿಗಳ ಮಹಾಪೂರ!</p>.<p>ಜಿಲ್ಲಾಡಳಿತ ಭನವದ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ಶೆಟ್ಟರ್ ತಮ್ಮ ಭಾಷಣ ಆರಂಭ ಮಾಡುತ್ತಿದ್ದಂತೆಯೇ ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಘಟಕದ ಕಾರ್ಯಕರ್ತರು ವೇದಿಕೆಯ ಮುಂಭಾಗದಲ್ಲಿ ಕಪ್ಪುಪಟ್ಟಿ ಪ್ರದರ್ಶಿಸಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದರು. <br /> <br /> ಸ್ಥಳದಲ್ಲಿದ್ದ ಪೊಲೀಸರು ಮನವೊಲಿಸಲು ಪ್ರಯತ್ನಿಸಿದರು. ಆದರೂ, ಕಾರ್ಯಕರ್ತರು ಸಿಎಂ ವಿರುದ್ಧ ಧಿಕ್ಕಾರ ಕೂಗಿದರು. ಬಳಿಕ 18 ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದರು.<br /> ಎ.ಜೆ. ಸದಾಶಿವ ಆಯೋಗ ಸಲ್ಲಿಸಿದ ವರದಿಯನ್ನು ಸದನದಲ್ಲಿ ಅನುಮೋದಿಸಿ, ಅನುಷ್ಠಾನಗೊಳಿಸುವಂತೆ ಕೇಂದ್ರಕ್ಕೆ ವರದಿ ಕಳುಹಿಸಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.<br /> <br /> ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇಷ್ಟು ವರ್ಷ ಕಳೆದರೂ ಒಳಮೀಸಲಾತಿಯ ವರ್ಗೀಕರಣ ವಿಚಾರವಾಗಿ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ರಾಜ್ಯದ ಪರಿಶಿಷ್ಟರಿಗೆ ಮಾಡಿದ ದೊಡ್ಡ ಅನ್ಯಾಯ. ಆಯೋಗದ ವರದಿಯನ್ನು ಸದನದಲ್ಲಿ ಮಂಡಿಸದೇ ಹೋದರೆ ರಾಜ್ಯದಲ್ಲಿ ತೀವ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.<br /> <br /> ಗುಡಿಸಲು ನಿವಾಸಿಗಳಿಗೆ ಈ ಕೂಡಲೇ ಹಕ್ಕುಪತ್ರ ವಿತರಣೆ ಮಾಡಬೇಕು. ಬಗರ್ಹುಕುಂ ಸಾಗುವಳಿ ರೈತರಿಗೆ ಸಾಗುವಳಿ ಪತ್ರ ನೀಡಲು ಆದೇಶ ನೀಡಬೇಕು. ನನೆಗುದಿಗೆ ಬಿದ್ದಿರುವ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನ ರಾಂ ಭವನದ ಜಾಗವನ್ನು ನಗರದ ಮಧ್ಯಭಾಗಕ್ಕೆ ಸ್ಥಳಾಂತರಿಸಿ ಕಾಮಗಾರಿ ಪ್ರಾರಂಭಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ರಾಜ್ಯ ಸಂಘಟನಾ ಸಂಚಾಲಕ ಆಲೂರು ನಿಂಗರಾಜ್, ಬಿ. ದುಗ್ಗಪ್ಪ, ಕೆ.ಎಂ. ಅಂಜಿನಪ್ಪ, ಪುಣಬಗಟ್ಟಿ ನಿಂಗಪ್ಪ, ಹೂವಿನಮಡು ಅಂಜಿನಪ್ಪ, ಎಂ. ರವಿ, ಕಬ್ಬಳ್ಳಿ ಮೈಲಪ್ಪ, ಚಿಕ್ಕನಹಳ್ಳಿ ಬಿ. ಹನುಮಂತಪ್ಪ, ಸಮೀವುಲ್ಲಾ, ವಾಸುದೇವ್, ಆನಗೋಡು ಸುರೇಶ್, ಬೆಳವನೂರು ದೇವೇಂದ್ರಪ್ಪ, ಅಳಗವಾಡಿ ನಿಂಗರಾಜ್ ನೇತೃತ್ವ ವಹಿಸಿದ್ದರು.<br /> <br /> <strong>ಅಸಂಘಟಿತ ವಲಯಕ್ಕೆ ಸೇರಿಸಿ...</strong><br /> ಮಂಡಕ್ಕಿಭಟ್ಟಿ ಕಾರ್ಮಿಕರನ್ನು ಅಸಂಘಟಿತ ವಲಯಕ್ಕೆ ಸೇರಿಸುವ ಮೂಲಕ ಅವರ ಕಲ್ಯಾಣ ಮಂಡಳಿ ಸ್ಥಾಪಿಸಬೇಕು ಎಂದು ಒತ್ತಾಯಿಸಿ ರಾಜ್ಯ ಮಂಡಕ್ಕಿಭಟ್ಟಿ ಕಾರ್ಮಿಕರ ಫೆಡರೇಷನ್ ಕಾರ್ಯಕರ್ತರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.<br /> <br /> ಕಾರ್ಮಿಕರಿಗೆ ಅಪಘಾತ ಪರಿಹಾರ ವಿಮೆ ನೀಡಬೇಕು. ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು. ಆಶ್ರಯಮನೆ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮನವಿ ಸಲ್ಲಿಸಿದರು.<br /> ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ. ರಾಮಚಂದ್ರಪ್ಪ, ಮಹ್ಮದ್ ಶೌಖತ್, ಸೈಯದ್, ಖಾಜಾಪೀರ್, ಆವರಗೆರೆ ವಾಸು, ಬಿ.ಎಸ್. ಅಬ್ದುಲ್ ರೆಹಮಾನ್ ಇದ್ದರು.<br /> <br /> ಕನಿಷ್ಠ ಕೂಲಿ ನೀಡಿ: ಸರ್ಕಾರ ಆಶಾ ಕಾರ್ಯಕರ್ತರಿಗೆ ರೂ. 500 ಭತ್ಯೆ ಬಜೆಟ್ನಲ್ಲಿ ಪ್ರಕಟಿಸಿತ್ತು. ಅದು ಕೂಡಲೇ ಕಾರ್ಯಕರ್ತೆಯರಿಗೆ ಸಿಗುವಂತೆ ಕ್ರಮ ಕೈಗೊಂಡು ಆದೇಶ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಆಶಾ ಕಾರ್ಯಕರ್ತೆಯರ ಫೆಡರೇಷನ್ನ ಕಾರ್ಯಕರ್ತರು ಸಿಎಂಗೆ ಮನವಿ ಸಲ್ಲಿಸಿದರು.<br /> <br /> ಪ್ರತಿಯೊಬ್ಬ ಆಶಾ ಕಾರ್ಯಕರ್ತೆಯರಿಗೂ ಒಂದೇ ರೀತಿಯ ಸಮವಸ್ತ್ರ ಮತ್ತು ಔಷಧಿ ಕಿಟ್ ಕೊಡಬೇಕು. ಕಾರ್ಯಕರ್ತೆಯರನ್ನು ಸರ್ಕಾರಿ ಆರೋಗ್ಯ ಇಲಾಖೆ ನೌಕರರು ಎಂದು ಪರಿಗಣಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.<br /> <br /> ಆವರಗೆರೆ ವಾಸು, ಐರಣಿ ಚಂದ್ರು, ಎಚ್.ಕೆ. ರಾಮಚಂದ್ರಪ್ಪ, ಯಶೋದಮ್ಮ, ರೂಪಾ, ಹಾಲಮ್ಮ, ಗೀತಾ, ಮಂಜುಳಾ ಇದ್ದರು.<br /> <br /> <strong>ಭಾರತ ಕಮ್ಯುನಿಸ್ಟ್ ಪಕ್ಷ</strong><br /> ನಗರದಲ್ಲಿ ಟೆಕ್ಸ್ಟೈಲ್ ಪಾರ್ಕ್ಗಾಗಿ ಮೀಸಲಿಟ್ಟ ಪ್ರದೇಶದಲ್ಲಿ ಕೂಡಲೇ ಟೆಕ್ಸ್ಟೈಲ್ಗೆ ಸಂಬಂಧಿಸಿದ ಉದ್ಯಮ ಸ್ಥಾಪಿಸಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಸಿಎಂಗೆ ಮನವಿ ಸಲ್ಲಿಸಿದರು.<br /> <br /> ಜಿಲ್ಲೆಯಲ್ಲಿ ವಿಮಾನನಿಲ್ದಾಣ ನಿರ್ಮಿಸಬೇಕು. ನಗರದಲ್ಲಿ ರಸ್ತೆ ವಿಸ್ತರಣೆ ಕಾರ್ಯವನ್ನು ಜಿಲ್ಲಾಡಳಿತ ಮುಂದೂಡುತ್ತಿದೆ. ತಕ್ಷಣ ಕ್ರಮ ಕೈಗೊಂಡು ರಸ್ತೆ ವಿಸ್ತರಣೆ ಮಾಡಬೇಕು. ದಾವಣಗೆರೆಯನ್ನು ಎರಡನೇ ರಾಜಧಾನಿಯಾಗಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>