<p><strong>ಸುವರ್ಣಸೌಧ (ಬೆಳಗಾವಿ): </strong>ರಾಯಬಾಗ ತಹಸೀಲ್ದಾರ್ ಕಚೇರಿ ಯಲ್ಲಿ ನಕಲಿ ಚಲನ್ ಸೃಷ್ಟಿಸಿ ₨ ೧೮ ಲಕ್ಷ ಅವ್ಯವಹಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಕೆಲವು ಅಧಿಕಾರಿಗಳನ್ನು ಅಮಾನತು ಮಾಡ ಲಾಗಿದೆ ಎಂದು ಕಂದಾಯ ಸಚಿವ ವಿ.ಶ್ರೀನಿವಾಸ ಪ್ರಸಾದ ಬುಧವಾರ ವಿಧಾನಸಭೆಯಲ್ಲಿ ತಿಳಿಸಿದರು.<br /> <br /> <br /> ಐಹೊಳೆ ಡಿ.ಮಹಾಲಿಂಗಪ್ಪ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ಶಿರಸ್ತೆದಾರ ಎ.ಟಿ.ಪಾಟೀಲ, ಕುಡಚಿ ಆಹಾರ ಶಿರಸ್ತೆದಾರ ಎನ್.ಬಿ.ಗೆಜ್ಜಿ, ಕಂದಾಯ ನಿರೀಕ್ಷಕರಾದ ಡಿ.ಬಿ.ಮಣ್ಣೂರ, ಎ.ಎಸ್.ಪಾಂಡ್ರೆ ಅವರನ್ನು ಅಮಾನತು ಗೊಳಿಸಲಾಗಿದೆ.<br /> <br /> ಉಪ ವಿಭಾಗಾಧಿಕಾರಿಗಳ ನೇತೃತ್ವದ ತನಿಖಾ ತಂಡ ಅವ್ಯವಹಾರಕ್ಕೆ ಸಂಬಂಧ ಪಟ್ಟಂತೆ ದಾಖಲೆಗಳನ್ನು ಪರಿಶೀಲಿಸು ತ್ತಿದ್ದು, ವರದಿ ಬಂದ ನಂತರ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.<br /> <br /> ಈ ಪ್ರಕರಣ ಕ್ರಿಮಿನಲ್ ಹಾಗೂ ವಂಚನೆ ಸ್ವರೂಪದ್ದಾಗಿದೆ. ಇದರಲ್ಲಿ ಅಧಿಕಾರಿಗಳು, ಸಿಬ್ಬಂದಿ, ಮಧ್ಯವರ್ತಿ ಗಳು ಭಾಗಿಯಾಗಿರುವ ಕುರಿತು ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗು ವುದು. ನಕಲಿ ಚಲನ್ ಗಳನ್ನು ಭೌತಿಕ ವಾಗಿ ಪರಿಶೀಲನೆ ನಡೆಸಿದ್ದು, ೧೮೨೧ ನಕಲಿ ಚಲನ್ ದೊರಕಿವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುವರ್ಣಸೌಧ (ಬೆಳಗಾವಿ): </strong>ರಾಯಬಾಗ ತಹಸೀಲ್ದಾರ್ ಕಚೇರಿ ಯಲ್ಲಿ ನಕಲಿ ಚಲನ್ ಸೃಷ್ಟಿಸಿ ₨ ೧೮ ಲಕ್ಷ ಅವ್ಯವಹಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಕೆಲವು ಅಧಿಕಾರಿಗಳನ್ನು ಅಮಾನತು ಮಾಡ ಲಾಗಿದೆ ಎಂದು ಕಂದಾಯ ಸಚಿವ ವಿ.ಶ್ರೀನಿವಾಸ ಪ್ರಸಾದ ಬುಧವಾರ ವಿಧಾನಸಭೆಯಲ್ಲಿ ತಿಳಿಸಿದರು.<br /> <br /> <br /> ಐಹೊಳೆ ಡಿ.ಮಹಾಲಿಂಗಪ್ಪ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ಶಿರಸ್ತೆದಾರ ಎ.ಟಿ.ಪಾಟೀಲ, ಕುಡಚಿ ಆಹಾರ ಶಿರಸ್ತೆದಾರ ಎನ್.ಬಿ.ಗೆಜ್ಜಿ, ಕಂದಾಯ ನಿರೀಕ್ಷಕರಾದ ಡಿ.ಬಿ.ಮಣ್ಣೂರ, ಎ.ಎಸ್.ಪಾಂಡ್ರೆ ಅವರನ್ನು ಅಮಾನತು ಗೊಳಿಸಲಾಗಿದೆ.<br /> <br /> ಉಪ ವಿಭಾಗಾಧಿಕಾರಿಗಳ ನೇತೃತ್ವದ ತನಿಖಾ ತಂಡ ಅವ್ಯವಹಾರಕ್ಕೆ ಸಂಬಂಧ ಪಟ್ಟಂತೆ ದಾಖಲೆಗಳನ್ನು ಪರಿಶೀಲಿಸು ತ್ತಿದ್ದು, ವರದಿ ಬಂದ ನಂತರ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.<br /> <br /> ಈ ಪ್ರಕರಣ ಕ್ರಿಮಿನಲ್ ಹಾಗೂ ವಂಚನೆ ಸ್ವರೂಪದ್ದಾಗಿದೆ. ಇದರಲ್ಲಿ ಅಧಿಕಾರಿಗಳು, ಸಿಬ್ಬಂದಿ, ಮಧ್ಯವರ್ತಿ ಗಳು ಭಾಗಿಯಾಗಿರುವ ಕುರಿತು ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗು ವುದು. ನಕಲಿ ಚಲನ್ ಗಳನ್ನು ಭೌತಿಕ ವಾಗಿ ಪರಿಶೀಲನೆ ನಡೆಸಿದ್ದು, ೧೮೨೧ ನಕಲಿ ಚಲನ್ ದೊರಕಿವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>