ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

18ಕ್ಕೆ ಪರಿಶಿಷ್ಟ ಮೋರ್ಚಾ ಸಮಾವೇಶ

Last Updated 8 ಮೇ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಪರಿಶಿಷ್ಟ ಜಾತಿಗಳ ಮೋರ್ಚಾ ವತಿಯಿಂದ ಇದೇ 18ರಂದು ಮೈಸೂರಿನಲ್ಲಿ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿದೆ.  

 ರಾಜ್ಯದ ಪ್ರತಿ ಬೂತ್ ಮಟ್ಟದಿಂದ ಒಟ್ಟು 50 ಸಾವಿರ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೋರ್ಚಾದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಮೌರ್ಯ ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ವಿಜಾಪುರ,  ಬೀದರ್  ಹಾಗೂ ಬೆಂಗಳೂರಿನಿಂದ ಇದೇ 11ರಂದು ರಥಯಾತ್ರೆ ಆರಂಭವಾಗಲಿದೆ. ಎಲ್ಲ ರಥಗಳು ಎಂಟರಿಂದ ಹತ್ತು ಜಿಲ್ಲೆಗಳಲ್ಲಿ ಸಂಚರಿಸಿ 17ರಂದು ಮೈಸೂರು ತಲುಪಲಿವೆ ಎಂದರು. ಮೋರ್ಚಾದ ರಾಜ್ಯ ಘಟಕದ ಉಪಾಧ್ಯಕ್ಷ ಚಿ.ನಾ. ರಾಮು ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT