`ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬಿನ ದರವನ್ನು ಈಗಾಗಲೇ ನಿಗದಿ ಮಾಡಲಾಗಿದೆ. ಅದರಂತೆ ಖಾಸಗಿ ಸಕ್ಕರೆ ಕಾರ್ಖಾನೆಗಳಲ್ಲೂ ಕಬ್ಬಿನ ದರ ನಿಗದಿ ಮಾಡಬೇಕು. ವಿದ್ಯುತ್ ಅಭಾವ ತಲೆದೋರುವಂತೆ ಮಾಡಿ ವಿದ್ಯುತ್ ಖರೀದಿ ಮಾಡುತ್ತಿದ್ದಾರೆ. ಕೋಟ್ಯಂತರ ರೂಪಾಯಿ ಹಣ ಕೊಟ್ಟು ವಿದ್ಯುತ್ ಖರೀದಿ ಮಾಡುವ ಪ್ರಮೇಯ ಏನಿತ್ತು?~ ಎಂದು ಪ್ರಶ್ನಿಸಿದ ಅವರು `ರೈತರ ಪಂಪ್ಸೆಟ್ಗಳಿಗೆ ನಿತ್ಯ 8-10 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು~ ಎಂದು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರುಗಳಾದ ಬಡಗಲಪುರ ನಾಗೇಂದ್ರ, ಹೊಸಕೋಟೆ ಬಸವರಾಜು, ಎಚ್.ಸಿ.ಲೋಕೇಶ್, ವಸಂತಕುಮಾರ್, ಶಿವನಾಗು ಇದ್ದರು.