ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

18ರಿಂದ ಉಡುಪಿ- ಸೊಲ್ಲಾಪುರಕ್ಕೆ ಬಸ್

Last Updated 15 ಜನವರಿ 2012, 19:55 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮವು ಬೆಂಗಳೂರಿನಿಂದ ಉಡುಪಿ ಮತ್ತು ಸೊಲ್ಲಾಪುರಕ್ಕೆ ಇದೇ 18ರಿಂದ ಹೊಸ ಬಸ್ ಸೇವೆ ಆರಂಭಿಸಲಿದೆ. ಉಡುಪಿಗೆ ಸಾಗುವ ಬಸ್ಸು ಹಾಸನ, ಧರ್ಮಸ್ಥಳ, ಕಾರ್ಕಳ ಮಾರ್ಗವಾಗಿ ಸಾಗಲಿದೆ. ಸೊಲ್ಲಾಪುರಕ್ಕೆ ಹೋಗುವ ಬಸ್ಸು ಚಿತ್ರದುರ್ಗ, ಹೊಸಪೇಟೆ, ವಿಜಾಪುರ ಮಾರ್ಗವಾಗಿ ತೆರಳಲಿದೆ.

ಮೂವತ್ತು ದಿನ ಮುಂಚಿತವಾಗಿ ಟಿಕೆಟ್ ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದ್ದು, ವಿವರಗಳಿಗೆ 7760990562, 7760990561 ಅಥವಾ 080-22870099  ಸಂಖ್ಯೆಗಳಿಗೆ ಕರೆ ಮಾಡಬಹುದು ಎಂದು ನಿಗಮದ ಪ್ರಕಟಣೆ ತಿಳಿಸಿದೆ.

ದಂಡ ವಸೂಲಿ: ವಿವಿಧ ಮಾರ್ಗಗಳಲ್ಲಿ ಸಾಗುವ ನಿಗಮದ ಬಸ್ಸುಗಳಲ್ಲಿ ಟಿಕೆಟ್ ಇಲ್ಲದೆ ಸಂಚರಿಸುತ್ತಿದ್ದ 8,351 ಮಂದಿ ಪ್ರಯಾಣಿಕರಿಂದ 7,33,518 ರೂಪಾಯಿಗಳನ್ನು ಅಧಿಕಾರಿಗಳು ಡಿಸೆಂಬರ್ ತಿಂಗಳಲ್ಲಿ ವಸೂಲು ಮಾಡಿದ್ದಾರೆ. ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT