ಕೆನಡಾ, ಅಮೆರಿಕ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಮಲೇಷ್ಯ, ಬಾಂಗ್ಲಾದೇಶ ಹಾಗೂ ಭಾರತದ ಹಲವು ಜನ ತಜ್ಞರು ಸಮಾವೇಶದಲ್ಲಿ ಉಪನ್ಯಾಸ ನೀಡಲಿದ್ದಾರೆ. ರಾಜ್ಯ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ಔಷಧಿ ನಿಯಂತ್ರಣ ಇಲಾಖೆ ಪ್ರತಿನಿಧಿಗಳು ಮಾಹಿತಿ ನೀಡಲಿದ್ದಾರೆ. ಗಿಡಮೂಲಿಕೆ ಆಧಾರಿತ ಔಷಧಿ ತಯಾರಿಕೆಯೂ ಸಮಾವೇಶದ ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.