<p>ನವದೆಹಲಿ (ಐಎಎನ್ಎಸ್): ತಮ್ಮ ವಿರುದ್ಧ 1984ರ ಸಿಖ್ ವಿರೋಧಿ ದಂಗೆ ಕಾಲದಲ್ಲಿ ಇಲ್ಲಿನ ಸುಲ್ತಾನಪುರಿ ಪ್ರದೇಶದಲ್ಲಿ ನಡೆದ 6 ಮಂದಿಯ ಕೊಲೆಗೆ ಸಂಬಂಧಿಸಿದಂತೆ ದೋಷಾರೋಪ ಹೊರಿಸಲು ವಿಚಾರಣಾ ನ್ಯಾಯಾಲಯ ಮಾಡಿದ್ದ ಆಜ್ಞೆಯನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾ ಮಾಡಿತು.<br /> <br /> ನ್ಯಾಯಮೂರ್ತಿ ಸುರೇಶ್ ಕೈಟ್ ಅವರು ಸಜ್ಜನ್ ಕುಮಾರ್ ಮನವಿಯನ್ನು ವಜಾ ಮಾಡಿ, ಪ್ರಕರಣದಲ್ಲಿ ಅವರ ವಿರುದ್ಧ ನ್ಯಾಯಾಂಗ ವಿಚಾರಣೆಗೆ ಅನುವು ಮಾಡಿಕೊಟ್ಟರು. ಸಜ್ಜನ್ ಕುಮಾರ್ ವಿರುದ್ಧ ದಂಗೆ, ಕೊಲೆ, ಆಸ್ತಿಪಾಸ್ತಿ ಹಾನಿ ಆರೋಪಗಳನ್ನು ಹೊರಿಸಲಾಗಿತ್ತು.<br /> <br /> ವಿಚಾರಣಾ ನ್ಯಾಯಾಲಯವು 2010ರ ಜುಲೈ ತಿಂಗಳಲ್ಲಿ ಸಜ್ಜನ್ ಕುಮಾರ್ ಸೇರಿದಂತೆ ಐವರು ಆರೋಪಿಗಳ ವಿರುದ್ಧ ಆರು ಮಂದಿಯ ಕೊಲೆ ಪ್ರಕರಣದಲ್ಲಿ ದೋಷಾರೋಪ ಹೊರಿಸುವಂತೆ ಆಜ್ಞಾಪಿಸಿತ್ತು. 1984ರಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿ ಹತ್ಯೆಯ ಬಳಿಕ ಸಂಭವಿಸಿದ ಸಿಖ್ ವಿರೋಧಿ ದಂಗೆ ಕಾಲದಲ್ಲಿ ಈ ಹತ್ಯೆ ನಡೆದಿತ್ತು.<br /> <br /> ಕುಮಾರ್ ಮತ್ತು ಇತರರ ವಿರುದ್ಧ ಮಾಡಲಾಗಿದ್ದ ಕ್ರಿಮಿನಲ್ ಸಂಚು ಆರೋಪಗಳನ್ನು ಕೈಬಿಡುವಂತೆ ಕೋರಿ ಅರ್ಜಿದಾರರಾದ ಶೀಲಾ ಕೌರ್ ಅವರು ಸಲ್ಲಿಸಿದ್ದ ಮನವಿಯನ್ನೂ ನ್ಯಾಯಮೂರ್ತಿ ಕೈಟ್ ವಜಾ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಐಎಎನ್ಎಸ್): ತಮ್ಮ ವಿರುದ್ಧ 1984ರ ಸಿಖ್ ವಿರೋಧಿ ದಂಗೆ ಕಾಲದಲ್ಲಿ ಇಲ್ಲಿನ ಸುಲ್ತಾನಪುರಿ ಪ್ರದೇಶದಲ್ಲಿ ನಡೆದ 6 ಮಂದಿಯ ಕೊಲೆಗೆ ಸಂಬಂಧಿಸಿದಂತೆ ದೋಷಾರೋಪ ಹೊರಿಸಲು ವಿಚಾರಣಾ ನ್ಯಾಯಾಲಯ ಮಾಡಿದ್ದ ಆಜ್ಞೆಯನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾ ಮಾಡಿತು.<br /> <br /> ನ್ಯಾಯಮೂರ್ತಿ ಸುರೇಶ್ ಕೈಟ್ ಅವರು ಸಜ್ಜನ್ ಕುಮಾರ್ ಮನವಿಯನ್ನು ವಜಾ ಮಾಡಿ, ಪ್ರಕರಣದಲ್ಲಿ ಅವರ ವಿರುದ್ಧ ನ್ಯಾಯಾಂಗ ವಿಚಾರಣೆಗೆ ಅನುವು ಮಾಡಿಕೊಟ್ಟರು. ಸಜ್ಜನ್ ಕುಮಾರ್ ವಿರುದ್ಧ ದಂಗೆ, ಕೊಲೆ, ಆಸ್ತಿಪಾಸ್ತಿ ಹಾನಿ ಆರೋಪಗಳನ್ನು ಹೊರಿಸಲಾಗಿತ್ತು.<br /> <br /> ವಿಚಾರಣಾ ನ್ಯಾಯಾಲಯವು 2010ರ ಜುಲೈ ತಿಂಗಳಲ್ಲಿ ಸಜ್ಜನ್ ಕುಮಾರ್ ಸೇರಿದಂತೆ ಐವರು ಆರೋಪಿಗಳ ವಿರುದ್ಧ ಆರು ಮಂದಿಯ ಕೊಲೆ ಪ್ರಕರಣದಲ್ಲಿ ದೋಷಾರೋಪ ಹೊರಿಸುವಂತೆ ಆಜ್ಞಾಪಿಸಿತ್ತು. 1984ರಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿ ಹತ್ಯೆಯ ಬಳಿಕ ಸಂಭವಿಸಿದ ಸಿಖ್ ವಿರೋಧಿ ದಂಗೆ ಕಾಲದಲ್ಲಿ ಈ ಹತ್ಯೆ ನಡೆದಿತ್ತು.<br /> <br /> ಕುಮಾರ್ ಮತ್ತು ಇತರರ ವಿರುದ್ಧ ಮಾಡಲಾಗಿದ್ದ ಕ್ರಿಮಿನಲ್ ಸಂಚು ಆರೋಪಗಳನ್ನು ಕೈಬಿಡುವಂತೆ ಕೋರಿ ಅರ್ಜಿದಾರರಾದ ಶೀಲಾ ಕೌರ್ ಅವರು ಸಲ್ಲಿಸಿದ್ದ ಮನವಿಯನ್ನೂ ನ್ಯಾಯಮೂರ್ತಿ ಕೈಟ್ ವಜಾ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>