ನವದೆಹಲಿ (ಪಿಟಿಐ): 1984ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿ ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ವಿರುದ್ಧದ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ದೆಹಲಿ ನ್ಯಾಯಾಲಯ ಆದೇಶಿಸಿದೆ.
ಟೈಟ್ಲರ್ ಅವರನ್ನು ದೋಷಮುಕ್ತಗೊಳಿಸಿ ಸಿಬಿಐ ಸಲ್ಲಿಸಿದ್ದ ಅಂತಿಮ ತನಿಖಾ ವರದಿಯನ್ನು ಕೋರ್ಟ್ ತಳ್ಳಿಹಾಕಿದೆ.
ಈ ಪ್ರಕರಣದಲ್ಲಿ ಪ್ರತ್ಯಕ್ಷ ಸಾಕ್ಷಿಗಳು ಹಾಗೂ ಗಲಭೆ ಬಗ್ಗೆ ಮಾಹಿತಿ ಗೊತ್ತಿದ್ದ ವ್ಯಕ್ತಿಗಳನ್ನು ಪ್ರಶ್ನಿಸುವಂತೆ ಸಿಬಿಐಗೆ ಕೋರ್ಟ್ ನಿರ್ದೆಶಿಸಿದೆ.
ಸಿಬಿಐ ಅಂತಿಮ ತನಿಖಾ ವರದಿ ಅಂಗೀಕರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿದ್ದ ಆದೇಶವನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ಅನುರಾಧಾ ಶುಕ್ಲಾ ಭಾರದ್ವಾಜ್ ತಳ್ಳಿಹಾಕಿದರು.