<p>ನವದೆಹಲಿ (ಪಿಟಿಐ): 2ಜಿ ತರಂಗಾಂತರ ಪ್ರಕರಣದ ವಿವಾದಾತ್ಮಕ ಟಿಪ್ಪಣಿಗೆ ಸಂಬಂಧಿಸಿದಂತೆ ಪಿ.ಚಿದಂಬರಂ ಮತ್ತು ಪ್ರಣವ್ ಮುಖರ್ಜಿ ಅವರ ಮಧ್ಯೆ ~ಕಾರ್ಯ ನಿರ್ವಹಣಾ ಭಿನ್ನಾಭಿಪ್ರಾಯ~ ಇದ್ದದ್ದು ಹೌದು ಎಂದು ಭಾನುವಾರ ಇಲ್ಲಿ ಒಪ್ಪಿಕೊಂಡ ಕೇಂದ್ರ ಕಾನೂನು ಸಚಿವ ಸಲ್ಮಾನ್ ಖುರ್ಷಿದ್ ಅವರು, ಆದರೆ ಆಗ ಹಣಕಾಸು ಸಚಿವರಾಗಿದ್ದ ಚಿದಂಬರಂ ಅವರು ಸಂಪುಟ ನಿರ್ಧಾರಕ್ಕೆ ವಿರುದ್ಧವಾಗಿ ಏನೂ ಮಾಡುವಂತಿರಲಿಲ್ಲ ಎಂದು ಪ್ರತಿಪಾದಿಸಿದರು.<br /> <br /> ಮೊದಲು ಬಂದವರಿಗೆ ಮೊದಲ ಅವಕಾಶ ನೀತಿಯ ವಿಚಾರದಲ್ಲಿ, ಹರಾಜು ಹಾಕುವುದಕ್ಕೆ ವಿರುದ್ಧವಾಗಿ ಸಂಪುಟ ನಿರ್ಧರಿಸಿದ ಬಳಿಕ ಈ ಕುರಿತು ಒತ್ತಾಯಗಳು ಬಂದಿದ್ದರೂ ಆಗ ಹಣಕಾಸು ಸಚಿವರಾಗಿದ್ದ ಚಿದಂಬರಂ ಅವರು ಸಚಿವ ಸಂಪುಟ ನಿರ್ಧಾರಕ್ಕೆ ವಿರುದ್ಧವಾಗಿ ಏನನ್ನೂ ಮಾಡಲು ಸಾಧ್ಯವಿರಲಿಲ್ಲ ಎಂದು ಅವರು ಹೇಳಿದರು.<br /> <br /> ಸಂಪುಟದ ನಿರ್ಧಾರವನ್ನು ಚಿದಂಬರಂ ಒಬ್ಬರೇ ಬದಲಾಯಿಸಲು ಸಾಧ್ಯವಿತ್ತೇ? ಹರಾಜು ಹಾಕುವುದರ ವಿರುದ್ಧ ಸಂಪುಟ ಒಮ್ಮೆ ನಿರ್ಧಾರ ಕೈಗೊಂಡ ಬಳಿಕ ಅವರಿಗೆ ಬೇರೆ ಯಾವ ಮಾರ್ಗವಿತ್ತು? ಎಂದು ಖುರ್ಷಿದ್ ಪ್ರಶ್ನಿಸಿದರು.<br /> <br /> ಸಂಪುಟ ಕೈಗೊಂಡ ನಿರ್ಧಾರಕ್ಕೆ ಸಂಬಂಧಿಸಿದಂತೆ ದೊಡ್ಡ ಸಂಖ್ಯೆಯ ಸಚಿವರು ಮತ್ತು ಒಂದಿಬ್ಬರು ಸಚಿವರ ಮಧ್ಯೆ ಭಿನ್ನಾಭಿಪ್ರಾಯಗಳು ಇದ್ದಾಗ ಇತರರು ಹೇಳಿದ್ದಕ್ಕೆ ನೀವು ಒಪ್ಪಿಗೆ ನೀಡಲೇಬೇಕಾಗುತ್ತದೆ ಎಂದು ಅವರು ಹೇಳಿದರು.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): 2ಜಿ ತರಂಗಾಂತರ ಪ್ರಕರಣದ ವಿವಾದಾತ್ಮಕ ಟಿಪ್ಪಣಿಗೆ ಸಂಬಂಧಿಸಿದಂತೆ ಪಿ.ಚಿದಂಬರಂ ಮತ್ತು ಪ್ರಣವ್ ಮುಖರ್ಜಿ ಅವರ ಮಧ್ಯೆ ~ಕಾರ್ಯ ನಿರ್ವಹಣಾ ಭಿನ್ನಾಭಿಪ್ರಾಯ~ ಇದ್ದದ್ದು ಹೌದು ಎಂದು ಭಾನುವಾರ ಇಲ್ಲಿ ಒಪ್ಪಿಕೊಂಡ ಕೇಂದ್ರ ಕಾನೂನು ಸಚಿವ ಸಲ್ಮಾನ್ ಖುರ್ಷಿದ್ ಅವರು, ಆದರೆ ಆಗ ಹಣಕಾಸು ಸಚಿವರಾಗಿದ್ದ ಚಿದಂಬರಂ ಅವರು ಸಂಪುಟ ನಿರ್ಧಾರಕ್ಕೆ ವಿರುದ್ಧವಾಗಿ ಏನೂ ಮಾಡುವಂತಿರಲಿಲ್ಲ ಎಂದು ಪ್ರತಿಪಾದಿಸಿದರು.<br /> <br /> ಮೊದಲು ಬಂದವರಿಗೆ ಮೊದಲ ಅವಕಾಶ ನೀತಿಯ ವಿಚಾರದಲ್ಲಿ, ಹರಾಜು ಹಾಕುವುದಕ್ಕೆ ವಿರುದ್ಧವಾಗಿ ಸಂಪುಟ ನಿರ್ಧರಿಸಿದ ಬಳಿಕ ಈ ಕುರಿತು ಒತ್ತಾಯಗಳು ಬಂದಿದ್ದರೂ ಆಗ ಹಣಕಾಸು ಸಚಿವರಾಗಿದ್ದ ಚಿದಂಬರಂ ಅವರು ಸಚಿವ ಸಂಪುಟ ನಿರ್ಧಾರಕ್ಕೆ ವಿರುದ್ಧವಾಗಿ ಏನನ್ನೂ ಮಾಡಲು ಸಾಧ್ಯವಿರಲಿಲ್ಲ ಎಂದು ಅವರು ಹೇಳಿದರು.<br /> <br /> ಸಂಪುಟದ ನಿರ್ಧಾರವನ್ನು ಚಿದಂಬರಂ ಒಬ್ಬರೇ ಬದಲಾಯಿಸಲು ಸಾಧ್ಯವಿತ್ತೇ? ಹರಾಜು ಹಾಕುವುದರ ವಿರುದ್ಧ ಸಂಪುಟ ಒಮ್ಮೆ ನಿರ್ಧಾರ ಕೈಗೊಂಡ ಬಳಿಕ ಅವರಿಗೆ ಬೇರೆ ಯಾವ ಮಾರ್ಗವಿತ್ತು? ಎಂದು ಖುರ್ಷಿದ್ ಪ್ರಶ್ನಿಸಿದರು.<br /> <br /> ಸಂಪುಟ ಕೈಗೊಂಡ ನಿರ್ಧಾರಕ್ಕೆ ಸಂಬಂಧಿಸಿದಂತೆ ದೊಡ್ಡ ಸಂಖ್ಯೆಯ ಸಚಿವರು ಮತ್ತು ಒಂದಿಬ್ಬರು ಸಚಿವರ ಮಧ್ಯೆ ಭಿನ್ನಾಭಿಪ್ರಾಯಗಳು ಇದ್ದಾಗ ಇತರರು ಹೇಳಿದ್ದಕ್ಕೆ ನೀವು ಒಪ್ಪಿಗೆ ನೀಡಲೇಬೇಕಾಗುತ್ತದೆ ಎಂದು ಅವರು ಹೇಳಿದರು.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>