<p><strong>ನವದೆಹಲಿ (ಪಿಟಿಐ):</strong> 2ಜಿ ತರಂಗಾಂತರ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ನಲ್ಲಿ ಸಲ್ಲಿಸಲಾಗಿರುವ ಎಲ್ಲ ಅರ್ಜಿಗಳ ವಿಚಾರಣೆಗೂ ಸುಪ್ರೀಂಕೋರ್ಟ್ ತಡೆ ನೀಡಿದೆ.<br /> <br /> ಸಿಬಿಐ ಸಲ್ಲಿಸಿರುವ ಮನವಿ ಮೇರೆಗೆ ನ್ಯಾಯಮೂರ್ತಿ ಜಿ. ಎಸ್. ಸಿಂಘ್ವಿ ಹಾಗೂ ಕೆ. ಎಸ್. ರಾಧಾಕೃಷ್ಣನ್ ಅವರನ್ನೊಳಗೊಂಡ ನ್ಯಾಯಪೀಠ ಈ ತಡೆಯಾಜ್ಞೆ ಹೊರಡಿಸಿದೆ.<br /> <br /> 2ಜಿ ಹಗರಣಕ್ಕೆ ಸಂಬಂಧಿಸಿದಂತೆ 2011ರ ಏಪ್ರಿಲ್ 11ರಂದು ಹೊರಡಿಸಿದ್ದ ಆದೇಶದಲ್ಲಿ ಸುಪ್ರೀಂಕೋರ್ಟ್, ತನ್ನ ಹೊರತಾಗಿ ಬೇರೆ ನ್ಯಾಯಾಲಯಗಳು ಈ ಪ್ರಕರಣದ ವಿಚಾರಣೆ ನಡೆಸುವಂತಿಲ್ಲ ಎಂದು ಹೇಳಿತ್ತು. ಸಿಬಿಐ ಸಲ್ಲಿಸಿದ ಅರ್ಜಿಯಲ್ಲಿ ಈ ವಿಚಾರ ಪ್ರಸ್ತಾಪಿಸಲಾಗಿದೆ. <br /> <br /> 2ಜಿ ಹಗರಣದಲ್ಲಿ ಆರೋಪ ಪಟ್ಟಿ ಸಲ್ಲಿಸಿದ ನಂತರವೂ ದೆಹಲಿ ಹೈಕೋರ್ಟ್ ಮುಂದೆ 20 ಅರ್ಜಿಗಳು ಇವೆ ಎಂದು ಸಿಬಿಐ, ಸುಪ್ರೀಂಕೋರ್ಟ್ ಪೀಠಕ್ಕೆ ತಿಳಿಸಿತು.<br /> <br /> ಈ ಹಗರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಕೆಳ ನ್ಯಾಯಾಲಯಗಳು ನಡೆಸಬಾರದು ಎಂಬ ಸೂಚನೆ ಇ್ದ್ದದರೂ ಹೈಕೋರ್ಟ್ ಈ ರೀತಿ ನಡೆದುಕೊಂಡಿದ್ದು ಅಚ್ಚರಿಯ ವಿಷಯ ಎಂದು ನ್ಯಾಯಮೂರ್ತಿಗಳು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> 2ಜಿ ತರಂಗಾಂತರ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ನಲ್ಲಿ ಸಲ್ಲಿಸಲಾಗಿರುವ ಎಲ್ಲ ಅರ್ಜಿಗಳ ವಿಚಾರಣೆಗೂ ಸುಪ್ರೀಂಕೋರ್ಟ್ ತಡೆ ನೀಡಿದೆ.<br /> <br /> ಸಿಬಿಐ ಸಲ್ಲಿಸಿರುವ ಮನವಿ ಮೇರೆಗೆ ನ್ಯಾಯಮೂರ್ತಿ ಜಿ. ಎಸ್. ಸಿಂಘ್ವಿ ಹಾಗೂ ಕೆ. ಎಸ್. ರಾಧಾಕೃಷ್ಣನ್ ಅವರನ್ನೊಳಗೊಂಡ ನ್ಯಾಯಪೀಠ ಈ ತಡೆಯಾಜ್ಞೆ ಹೊರಡಿಸಿದೆ.<br /> <br /> 2ಜಿ ಹಗರಣಕ್ಕೆ ಸಂಬಂಧಿಸಿದಂತೆ 2011ರ ಏಪ್ರಿಲ್ 11ರಂದು ಹೊರಡಿಸಿದ್ದ ಆದೇಶದಲ್ಲಿ ಸುಪ್ರೀಂಕೋರ್ಟ್, ತನ್ನ ಹೊರತಾಗಿ ಬೇರೆ ನ್ಯಾಯಾಲಯಗಳು ಈ ಪ್ರಕರಣದ ವಿಚಾರಣೆ ನಡೆಸುವಂತಿಲ್ಲ ಎಂದು ಹೇಳಿತ್ತು. ಸಿಬಿಐ ಸಲ್ಲಿಸಿದ ಅರ್ಜಿಯಲ್ಲಿ ಈ ವಿಚಾರ ಪ್ರಸ್ತಾಪಿಸಲಾಗಿದೆ. <br /> <br /> 2ಜಿ ಹಗರಣದಲ್ಲಿ ಆರೋಪ ಪಟ್ಟಿ ಸಲ್ಲಿಸಿದ ನಂತರವೂ ದೆಹಲಿ ಹೈಕೋರ್ಟ್ ಮುಂದೆ 20 ಅರ್ಜಿಗಳು ಇವೆ ಎಂದು ಸಿಬಿಐ, ಸುಪ್ರೀಂಕೋರ್ಟ್ ಪೀಠಕ್ಕೆ ತಿಳಿಸಿತು.<br /> <br /> ಈ ಹಗರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಕೆಳ ನ್ಯಾಯಾಲಯಗಳು ನಡೆಸಬಾರದು ಎಂಬ ಸೂಚನೆ ಇ್ದ್ದದರೂ ಹೈಕೋರ್ಟ್ ಈ ರೀತಿ ನಡೆದುಕೊಂಡಿದ್ದು ಅಚ್ಚರಿಯ ವಿಷಯ ಎಂದು ನ್ಯಾಯಮೂರ್ತಿಗಳು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>