<p>ನವದೆಹಲಿ (ಪಿಟಿಐ): 2 ಜಿ ತರಂಗಾಂತರ ಹಂಚಿಕೆ ಪ್ರಕರಣದಲ್ಲಿ ದೋಷಾರೋಪ ಹೊರಿಸಿದ ಎರಡು ದಿನಗಳ ಬಳಿಕ ಡಿಎಂಕೆ ಸಂಸತ್ ಸದಸ್ಯೆ ಕನಿಮೋಳಿ ಅವರು ಜಾಮೀನಿಗಾಗಿ ವಿಶೇಷ ನ್ಯಾಯಾಲಯದಲ್ಲಿ ಸೊಮವಾರ ಹೊಸದಾಗಿ ಅರ್ಜಿ ಸಲ್ಲಿಸಿದರು.<br /> <br /> ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಅವರ ಪುತ್ರಿ 43ರ ಹರೆಯದ ಕನಿಮೋಳಿ ಅವರು ಮೇ 20ರಂದು ಬಂಧಿತರಾದ ಬಳಿಕ ಕಳೆದ 5 ತಿಂಗಳುಗಳಿಂದ ಸೆರೆಮನೆಯಲ್ಲಿದ್ದಾರೆ.<br /> <br /> ದೋಷಾರೋಪ ಹೊರಿಸುವ ಪ್ರಕ್ರಿಯೆ ಪೂರ್ಣಗೊಂಡಿರುವುದರಿಂದ 22ನೇ ದಿನಾಂಕದ ಸುಪ್ರೀಂಕೋರ್ಟ್ ಆದೇಶದಂತೆ ಜಾಮೀನಿಗಾಗಿ ವಿಶೇಷ ನ್ಯಾಯಾಲಯಕ್ಕೆ ತಾವು ಹೊಸದಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕನಿಮೋಳಿ ಹೇಳಿದರು.<br /> <br /> ಜೂನ್ 22ರ ಸುಪ್ರೀಂಕೋರ್ಟ್ ಆದೇಶದಂತೆ ಕನಿಮೋಳಿ ಮತ್ತು ಕಲೈಞ್ಞರ್ ಟಿವಿಯ ಆಡಳಿತ ನಿರ್ದೇಶಕ ಶರದ್ ಕುಮಾರ್ ಅವರು ದೋಷಾರೋಪ ಹೊರಿಸಿದ ಬಳಿಕ ಜಾಮೀನು ಸಲ್ಲಿಕೆಗಾಗಿ ವಿಶೇಷ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲು ಅನುಮತಿ ನೀಡಲಾಗಿದೆ ಎಂದು ಹಿರಿಯ ವಕೀಲ ಅಲ್ತಾಫ್ ಅಹಮದ್ ಅವರು ವಿಶೇಷ ನ್ಯಾಯಾಧೀಶ ಒ.ಪಿ. ಸೈನಿ ಅವರಿಗೆ ತಿಳಿಸಿದರು.<br /> <br /> ಜಾಮೀನು ನೀಡುವಂತೆ ನ್ಯಾಯಾಲಯವನ್ನು ಒತ್ತಾಯಿಸಿದ ಅಹಮದ್, ನ್ಯಾಯಾಲಯವು ಕರೆದಾಗ ಹಾಜರಾಗುವಂತೆ ಖಾತರಿಗಾಗಿ ಕನಿಮೋಳಿ ಅವರಿಗೆ ಯಾವುದೇ ಷರತ್ತುಗಳನ್ನು ವಿಧಿಸಬಹುದು ಎಂದು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): 2 ಜಿ ತರಂಗಾಂತರ ಹಂಚಿಕೆ ಪ್ರಕರಣದಲ್ಲಿ ದೋಷಾರೋಪ ಹೊರಿಸಿದ ಎರಡು ದಿನಗಳ ಬಳಿಕ ಡಿಎಂಕೆ ಸಂಸತ್ ಸದಸ್ಯೆ ಕನಿಮೋಳಿ ಅವರು ಜಾಮೀನಿಗಾಗಿ ವಿಶೇಷ ನ್ಯಾಯಾಲಯದಲ್ಲಿ ಸೊಮವಾರ ಹೊಸದಾಗಿ ಅರ್ಜಿ ಸಲ್ಲಿಸಿದರು.<br /> <br /> ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಅವರ ಪುತ್ರಿ 43ರ ಹರೆಯದ ಕನಿಮೋಳಿ ಅವರು ಮೇ 20ರಂದು ಬಂಧಿತರಾದ ಬಳಿಕ ಕಳೆದ 5 ತಿಂಗಳುಗಳಿಂದ ಸೆರೆಮನೆಯಲ್ಲಿದ್ದಾರೆ.<br /> <br /> ದೋಷಾರೋಪ ಹೊರಿಸುವ ಪ್ರಕ್ರಿಯೆ ಪೂರ್ಣಗೊಂಡಿರುವುದರಿಂದ 22ನೇ ದಿನಾಂಕದ ಸುಪ್ರೀಂಕೋರ್ಟ್ ಆದೇಶದಂತೆ ಜಾಮೀನಿಗಾಗಿ ವಿಶೇಷ ನ್ಯಾಯಾಲಯಕ್ಕೆ ತಾವು ಹೊಸದಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕನಿಮೋಳಿ ಹೇಳಿದರು.<br /> <br /> ಜೂನ್ 22ರ ಸುಪ್ರೀಂಕೋರ್ಟ್ ಆದೇಶದಂತೆ ಕನಿಮೋಳಿ ಮತ್ತು ಕಲೈಞ್ಞರ್ ಟಿವಿಯ ಆಡಳಿತ ನಿರ್ದೇಶಕ ಶರದ್ ಕುಮಾರ್ ಅವರು ದೋಷಾರೋಪ ಹೊರಿಸಿದ ಬಳಿಕ ಜಾಮೀನು ಸಲ್ಲಿಕೆಗಾಗಿ ವಿಶೇಷ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲು ಅನುಮತಿ ನೀಡಲಾಗಿದೆ ಎಂದು ಹಿರಿಯ ವಕೀಲ ಅಲ್ತಾಫ್ ಅಹಮದ್ ಅವರು ವಿಶೇಷ ನ್ಯಾಯಾಧೀಶ ಒ.ಪಿ. ಸೈನಿ ಅವರಿಗೆ ತಿಳಿಸಿದರು.<br /> <br /> ಜಾಮೀನು ನೀಡುವಂತೆ ನ್ಯಾಯಾಲಯವನ್ನು ಒತ್ತಾಯಿಸಿದ ಅಹಮದ್, ನ್ಯಾಯಾಲಯವು ಕರೆದಾಗ ಹಾಜರಾಗುವಂತೆ ಖಾತರಿಗಾಗಿ ಕನಿಮೋಳಿ ಅವರಿಗೆ ಯಾವುದೇ ಷರತ್ತುಗಳನ್ನು ವಿಧಿಸಬಹುದು ಎಂದು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>