<p>ನವದೆಹಲಿ (ಪಿಟಿಐ): ಬಹುಕೋಟಿ 2ಜಿ ಹಗರಣದ ತನಿಖೆಗೆ ಅಡ್ಡಿಯಾಗಿರುವ ಅಡೆತಡೆಗಳನ್ನು ನಿವಾರಿಸಿ, ತನಿಖೆ ಚುರುಕುಗೊಳಿಸಲು ಕೇಂದ್ರ ಜಾಗೃತ ಆಯೋಗ (ಸಿವಿಸಿ) ನಿರ್ಧರಿಸಿದೆ. <br /> <br /> ಈ ಸಂಬಂಧ ಸಿಬಿಐ, ಜಾರಿ ನಿರ್ದೇಶನಾಲಯ ಹಾಗೂ ವರಮಾನ ತೆರಿಗೆ ಇಲಾಖೆಗಳು ನಡೆಸಿದ ತನಿಖೆಯ ಪ್ರಗತಿಯನ್ನು ಸಿವಿಸಿ ಪರಿಶೀಲಿಸಿದೆ. ತನಿಖೆಯ ಸಂದರ್ಭದಲ್ಲಿ ಈ ಸಂಸ್ಥೆಗಳು ಎದುರಿಸುತ್ತಿರುವ ಅಡಚಣೆಗಳು ಏನು ಎಂಬುದನ್ನು ಅರಿಯಲು ಸಿವಿಸಿ ಈ ಕ್ರಮ ಕೈಗೊಂಡಿದೆ.<br /> <br /> ಕೇಂದ್ರ ಜಾಗೃತ ಆಯುಕ್ತ ಪ್ರದೀಪ್ ಕುಮಾರ್ ಅವರು ಈ ಮೂರು ತನಿಖಾ ಸಂಸ್ಥೆಗಳ ಅಧಿಕಾರಿಗಳನ್ನು ಭೇಟಿ ಮಾಡಿ ತನಿಖೆಯ ವಿವರ ಪಡೆದಿದ್ದಾರೆ. ಸಂಬಂಧಿಸಿದ ದಾಖಲೆಗಳನ್ನೂ ಸಹ ಪರಿಶೀಲಿಸಿದ್ದಾರೆ ಎಂದು ಸಿವಿಸಿ ಮೂಲಗಳು ತಿಳಿಸಿವೆ.<br /> <br /> ದೇಶದೊಳಗೆ ಹಾಗೂ ವಿದೇಶದ ಕೆಲವೆಡೆ ತನಿಖೆ ನಡೆಸಲು ತಮಗೆ ಅಡ್ಡಿಯಾಗಿರುವ ಸಂಗತಿಗಳ ಕುರಿತು ಈ ಅಧಿಕಾರಿಗಳು ಪ್ರದೀಪ್ ಕುಮಾರ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.ತನಿಖೆ ಚುರುಕುಗೊಳಿಸುವಂತೆ ಸಿವಿಸಿ ಈ ಸಂಸ್ಥೆಗಳಿಗೆ ಸೂಚಿಸಿದೆ ಎನ್ನಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಬಹುಕೋಟಿ 2ಜಿ ಹಗರಣದ ತನಿಖೆಗೆ ಅಡ್ಡಿಯಾಗಿರುವ ಅಡೆತಡೆಗಳನ್ನು ನಿವಾರಿಸಿ, ತನಿಖೆ ಚುರುಕುಗೊಳಿಸಲು ಕೇಂದ್ರ ಜಾಗೃತ ಆಯೋಗ (ಸಿವಿಸಿ) ನಿರ್ಧರಿಸಿದೆ. <br /> <br /> ಈ ಸಂಬಂಧ ಸಿಬಿಐ, ಜಾರಿ ನಿರ್ದೇಶನಾಲಯ ಹಾಗೂ ವರಮಾನ ತೆರಿಗೆ ಇಲಾಖೆಗಳು ನಡೆಸಿದ ತನಿಖೆಯ ಪ್ರಗತಿಯನ್ನು ಸಿವಿಸಿ ಪರಿಶೀಲಿಸಿದೆ. ತನಿಖೆಯ ಸಂದರ್ಭದಲ್ಲಿ ಈ ಸಂಸ್ಥೆಗಳು ಎದುರಿಸುತ್ತಿರುವ ಅಡಚಣೆಗಳು ಏನು ಎಂಬುದನ್ನು ಅರಿಯಲು ಸಿವಿಸಿ ಈ ಕ್ರಮ ಕೈಗೊಂಡಿದೆ.<br /> <br /> ಕೇಂದ್ರ ಜಾಗೃತ ಆಯುಕ್ತ ಪ್ರದೀಪ್ ಕುಮಾರ್ ಅವರು ಈ ಮೂರು ತನಿಖಾ ಸಂಸ್ಥೆಗಳ ಅಧಿಕಾರಿಗಳನ್ನು ಭೇಟಿ ಮಾಡಿ ತನಿಖೆಯ ವಿವರ ಪಡೆದಿದ್ದಾರೆ. ಸಂಬಂಧಿಸಿದ ದಾಖಲೆಗಳನ್ನೂ ಸಹ ಪರಿಶೀಲಿಸಿದ್ದಾರೆ ಎಂದು ಸಿವಿಸಿ ಮೂಲಗಳು ತಿಳಿಸಿವೆ.<br /> <br /> ದೇಶದೊಳಗೆ ಹಾಗೂ ವಿದೇಶದ ಕೆಲವೆಡೆ ತನಿಖೆ ನಡೆಸಲು ತಮಗೆ ಅಡ್ಡಿಯಾಗಿರುವ ಸಂಗತಿಗಳ ಕುರಿತು ಈ ಅಧಿಕಾರಿಗಳು ಪ್ರದೀಪ್ ಕುಮಾರ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.ತನಿಖೆ ಚುರುಕುಗೊಳಿಸುವಂತೆ ಸಿವಿಸಿ ಈ ಸಂಸ್ಥೆಗಳಿಗೆ ಸೂಚಿಸಿದೆ ಎನ್ನಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>