<p><strong>ಚಾಮರಾಜನಗರ:‘</strong>ಮಠಗಳು ಕಪ್ಪುಹಣ ಇಡುವ ಕೇಂದ್ರಸ್ಥಾನಗಳಾಗುತ್ತಿದ್ದು, ಅಕ್ರಮವಾಗಿ ಜಮೀನು ಒತ್ತುವರಿ ಕೂಡ ಮಾಡುತ್ತಿವೆ. ಹೀಗಾದರೆ, ನ್ಯಾಯ-ಧರ್ಮ ಉಳಿಯುತ್ತದೆಯೇ?’ ಎಂದು ಸಾಹಿತಿ ದೇವನೂರು ಮಹದೇವ ಪ್ರಶ್ನಿಸಿದರು.ನಗರದಲ್ಲಿ ಸೋಮವಾರ ಆರಂಭವಾದ 2ನೇ ದಲಿತ ಸಾಹಿತ್ಯ ಸಾಂಸ್ಕೃತಿಕ ಕಲಾ ಸಪ್ತಾಹದಲ್ಲಿ ಅವರು ಮಾತನಾಡಿದರು.<br /> <br /> ಅನ್ಯಾಯ, ದರೋಡೆ ತಾಂಡವವಾಡುತ್ತಿವೆ. ಇದನ್ನು ಪ್ರಶ್ನಿಸಬೇಕಾದ ಸಾಮಾಜಿಕ ಪ್ರಜ್ಞೆಗೆ ಕುಷ್ಠರೋಗ ಬಂದಿದೆ. ಚುನಾವಣೆಯಲ್ಲಿ ಹಣದ ಥೈಲಿ ಹೆಚ್ಚಿದೆ. ಜನಪ್ರತಿನಿಧಿ ಈಗ ಮನುಷ್ಯನಾಗಿ ಉಳಿದಿಲ್ಲ. ಪ್ರತಿಯೊಬ್ಬರ ಮೇಲೂ ಸಾಲದ ಹೊರೆ ಏರುತ್ತಿದೆ. ಯಾರೊಬ್ಬರಿಗೂ ಮಾತನಾಡಲು ಅವಕಾಶವಿಲ್ಲದಂತಾಗಿದೆ ಎಂದು ವಿಷಾದಿಸಿದರು. <br /> <br /> ಗಣಿ ಧಣಿಗಳು ರಾಜ್ಯದ ಗಡಿಕಲ್ಲು ಕಿತ್ತು ಹಾಕಿದ್ದಾರೆ. ಅಧಿಕಾರಿಗಳೇ ಜಪ್ತಿ ಮಾಡಿದ್ದ ಅಕ್ರಮ ಅದಿರು ದಾಸ್ತಾನು ಮಂಗಮಾಯವಾಗಿದೆ. ರಾಜ್ಯ ಸರ್ಕಾರ ಜೀವಂತವಾಗಿ ಇದೆಯೇ? ಎಂದು ವ್ಯಂಗ್ಯವಾಡಿದರು. <br /> <br /> ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಸಪ್ತಾಹಕ್ಕೆ ಚಾಲನೆ ನೀಡಿದರು. ಮಂಟೇಸ್ವಾಮಿ ಪ್ರತಿಷ್ಠಾನದ ಅಧ್ಯಕ್ಷ ಪ್ರಭುದೇವರಾಜೇ ಅರಸ್, ಸಾಹಿತಿಗಳಾದ ಅರವಿಂದ ಮಾಲಗತ್ತಿ, ಮೂಡ್ನಾಕೂಡು ಚಿನ್ನಸ್ವಾಮಿ, ಪ್ರೊ.ಮಲೆಯೂರು ಗುರುಸ್ವಾಮಿ, ಸಪ್ತಾಹ ಸಮಿತಿ ಅಧ್ಯಕ್ಷ ವೆಂಕಟರಮಣಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:‘</strong>ಮಠಗಳು ಕಪ್ಪುಹಣ ಇಡುವ ಕೇಂದ್ರಸ್ಥಾನಗಳಾಗುತ್ತಿದ್ದು, ಅಕ್ರಮವಾಗಿ ಜಮೀನು ಒತ್ತುವರಿ ಕೂಡ ಮಾಡುತ್ತಿವೆ. ಹೀಗಾದರೆ, ನ್ಯಾಯ-ಧರ್ಮ ಉಳಿಯುತ್ತದೆಯೇ?’ ಎಂದು ಸಾಹಿತಿ ದೇವನೂರು ಮಹದೇವ ಪ್ರಶ್ನಿಸಿದರು.ನಗರದಲ್ಲಿ ಸೋಮವಾರ ಆರಂಭವಾದ 2ನೇ ದಲಿತ ಸಾಹಿತ್ಯ ಸಾಂಸ್ಕೃತಿಕ ಕಲಾ ಸಪ್ತಾಹದಲ್ಲಿ ಅವರು ಮಾತನಾಡಿದರು.<br /> <br /> ಅನ್ಯಾಯ, ದರೋಡೆ ತಾಂಡವವಾಡುತ್ತಿವೆ. ಇದನ್ನು ಪ್ರಶ್ನಿಸಬೇಕಾದ ಸಾಮಾಜಿಕ ಪ್ರಜ್ಞೆಗೆ ಕುಷ್ಠರೋಗ ಬಂದಿದೆ. ಚುನಾವಣೆಯಲ್ಲಿ ಹಣದ ಥೈಲಿ ಹೆಚ್ಚಿದೆ. ಜನಪ್ರತಿನಿಧಿ ಈಗ ಮನುಷ್ಯನಾಗಿ ಉಳಿದಿಲ್ಲ. ಪ್ರತಿಯೊಬ್ಬರ ಮೇಲೂ ಸಾಲದ ಹೊರೆ ಏರುತ್ತಿದೆ. ಯಾರೊಬ್ಬರಿಗೂ ಮಾತನಾಡಲು ಅವಕಾಶವಿಲ್ಲದಂತಾಗಿದೆ ಎಂದು ವಿಷಾದಿಸಿದರು. <br /> <br /> ಗಣಿ ಧಣಿಗಳು ರಾಜ್ಯದ ಗಡಿಕಲ್ಲು ಕಿತ್ತು ಹಾಕಿದ್ದಾರೆ. ಅಧಿಕಾರಿಗಳೇ ಜಪ್ತಿ ಮಾಡಿದ್ದ ಅಕ್ರಮ ಅದಿರು ದಾಸ್ತಾನು ಮಂಗಮಾಯವಾಗಿದೆ. ರಾಜ್ಯ ಸರ್ಕಾರ ಜೀವಂತವಾಗಿ ಇದೆಯೇ? ಎಂದು ವ್ಯಂಗ್ಯವಾಡಿದರು. <br /> <br /> ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಸಪ್ತಾಹಕ್ಕೆ ಚಾಲನೆ ನೀಡಿದರು. ಮಂಟೇಸ್ವಾಮಿ ಪ್ರತಿಷ್ಠಾನದ ಅಧ್ಯಕ್ಷ ಪ್ರಭುದೇವರಾಜೇ ಅರಸ್, ಸಾಹಿತಿಗಳಾದ ಅರವಿಂದ ಮಾಲಗತ್ತಿ, ಮೂಡ್ನಾಕೂಡು ಚಿನ್ನಸ್ವಾಮಿ, ಪ್ರೊ.ಮಲೆಯೂರು ಗುರುಸ್ವಾಮಿ, ಸಪ್ತಾಹ ಸಮಿತಿ ಅಧ್ಯಕ್ಷ ವೆಂಕಟರಮಣಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>