<p><strong>ಬೆಂಗಳೂರು: </strong>ದರೋಡೆ, ಕಳವು ಮತ್ತಿತರ ಅಪರಾಧ ಪ್ರಕರಣಗಳನ್ನು ಭೇದಿಸಿರುವ ನಗರದ ಪೂರ್ವ ವಿಭಾಗದ ಪೊಲೀಸರು ಎರಡೂವರೆ ಕೆ.ಜಿ ಚಿನ್ನಾಭರಣ ಸೇರಿದಂತೆ ಸುಮಾರು ಎರಡು ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.<br /> <br /> `ಸಿಬ್ಬಂದಿ ಒಟ್ಟು 130 ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಿ 84 ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಎರಡೂವರೆ ಕೆ.ಜಿ ಚಿನ್ನಾಭರಣ, ಒಂದೂವರೆ ಕೆ.ಜಿ ಬೆಳ್ಳಿ ವಸ್ತುಗಳು, 21 ಕಾರು ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ~ ಎಂದು ಅಪರಾಧ (ಪೂರ್ವ) ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಬಿ.ದಯಾನಂದ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.<br /> <br /> ಕನ್ನಕಳವು, ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳನ್ನು ಬಂಧಿಸಿರುವ ಮಹದೇವಪುರ ಪೊಲೀಸರು 35.51 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ ಎಂದರು.<br /> <br /> ವಂಚನೆ ಪ್ರಕರಣದಲ್ಲಿ ಗೋಪಿಕೃಷ್ಣ, ಕಿಶನ್ಪಾಲ್ ಸಿಂಗ್ ಮತ್ತು ಮಂಜುನಾಥ್ ಎಂಬುವರನ್ನು ಬಂಧಿಸಿರುವ ಇಂದಿರಾನಗರ ಪೊಲೀಸರು 2 ಕಾರು ಹಾಗೂ 480 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.<br /> <br /> ಆರೋಪಿ ಗೋಪಿಕೃಷ್ಣ ಕಡಿಮೆ ಬೆಲೆಗೆ ಚಿನ್ನದ ಬಿಸ್ಕತ್ ಕೊಡಿಸುವುದಾಗಿ ನಂಬಿಸಿ ಪರಿಚಿತ ವ್ಯಕ್ತಿಗಳಿಂದ ಹಣ ಪಡೆದು ವಂಚಿಸಿದ್ದ. ಮತ್ತೊಬ್ಬ ಆರೋಪಿ ಕಿಶನ್ಪಾಲ್, `ಖಾಸಗಿ ಕಂಪೆನಿಯ ಸ್ಪರ್ಧೆಯಲ್ಲಿ ನಗದು ಬಹುಮಾನ ಬಂದಿದೆ. ಬಹುಮಾನದ ಹಣ ಪಡೆಯಲು ತೆರಿಗೆ ಪಾವತಿಸಬೇಕು~ ಎಂದು ಸಾರ್ವಜನಿಕರ ಮೊಬೈಲ್ಗೆ ಕರೆ ಮಾಡಿ ಬ್ಯಾಂಕ್ ಖಾತೆಯೊಂದರ ವಿವರ ನೀಡುತ್ತಿದ್ದ. ಸಾರ್ವಜನಿಕರು, ಆತ ನೀಡಿದ್ದ ಖಾತೆಗಳಿಗೆ ಹಣ ಸಂದಾಯ ಮಾಡಿ ವಂಚನೆಗೊಳಗಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಕೆ.ಆರ್.ಪುರ ಪೊಲೀಸರು ಲ್ಯಾಪ್ಟಾಪ್ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಲಕ್ಷ್ಮಣರಾಮ್ (28) ಮತ್ತು ಸರವಣಕುಮಾರ್ (22) ಎಂಬುವರನ್ನು ಬಂಧಿಸಿ ಎಂಟು ಲ್ಯಾಪ್ಟಾಪ್ ಜಪ್ತಿ ಮಾಡಿದ್ದಾರೆ.<br /> <br /> ಪೂರ್ವ ವಿಭಾಗದ ಡಿಸಿಪಿ ಎಂ.ಚಂದ್ರಶೇಖರ್ ಅವರ ಮಾರ್ಗದರ್ಶನದಲ್ಲಿ ಎಸಿಪಿಗಳಾದ ಡಾ.ಡಿ.ನಾರಾಯಣಸ್ವಾಮಿ, ಶಿವಮೂರ್ತಿ, ಇನ್ಸ್ಪೆಕ್ಟರ್ಗಳಾದ ಟಿ. ರಂಗಪ್ಪ, ವಿ.ಕೆ.ವಾಸುದೇವ, ಎಚ್.ಕೆ.ಮಹಾನಂದ, ಕೆ. ಎಸ್.ನಾಗರಾಜ್, ಕಿಶೋರ್ ಭರಣಿ, ಕೆ.ಎಸ್.ವೆಂಕಟೇಶನಾಯ್ಡು ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ದರೋಡೆ, ಕಳವು ಮತ್ತಿತರ ಅಪರಾಧ ಪ್ರಕರಣಗಳನ್ನು ಭೇದಿಸಿರುವ ನಗರದ ಪೂರ್ವ ವಿಭಾಗದ ಪೊಲೀಸರು ಎರಡೂವರೆ ಕೆ.ಜಿ ಚಿನ್ನಾಭರಣ ಸೇರಿದಂತೆ ಸುಮಾರು ಎರಡು ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.<br /> <br /> `ಸಿಬ್ಬಂದಿ ಒಟ್ಟು 130 ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಿ 84 ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಎರಡೂವರೆ ಕೆ.ಜಿ ಚಿನ್ನಾಭರಣ, ಒಂದೂವರೆ ಕೆ.ಜಿ ಬೆಳ್ಳಿ ವಸ್ತುಗಳು, 21 ಕಾರು ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ~ ಎಂದು ಅಪರಾಧ (ಪೂರ್ವ) ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಬಿ.ದಯಾನಂದ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.<br /> <br /> ಕನ್ನಕಳವು, ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳನ್ನು ಬಂಧಿಸಿರುವ ಮಹದೇವಪುರ ಪೊಲೀಸರು 35.51 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ ಎಂದರು.<br /> <br /> ವಂಚನೆ ಪ್ರಕರಣದಲ್ಲಿ ಗೋಪಿಕೃಷ್ಣ, ಕಿಶನ್ಪಾಲ್ ಸಿಂಗ್ ಮತ್ತು ಮಂಜುನಾಥ್ ಎಂಬುವರನ್ನು ಬಂಧಿಸಿರುವ ಇಂದಿರಾನಗರ ಪೊಲೀಸರು 2 ಕಾರು ಹಾಗೂ 480 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.<br /> <br /> ಆರೋಪಿ ಗೋಪಿಕೃಷ್ಣ ಕಡಿಮೆ ಬೆಲೆಗೆ ಚಿನ್ನದ ಬಿಸ್ಕತ್ ಕೊಡಿಸುವುದಾಗಿ ನಂಬಿಸಿ ಪರಿಚಿತ ವ್ಯಕ್ತಿಗಳಿಂದ ಹಣ ಪಡೆದು ವಂಚಿಸಿದ್ದ. ಮತ್ತೊಬ್ಬ ಆರೋಪಿ ಕಿಶನ್ಪಾಲ್, `ಖಾಸಗಿ ಕಂಪೆನಿಯ ಸ್ಪರ್ಧೆಯಲ್ಲಿ ನಗದು ಬಹುಮಾನ ಬಂದಿದೆ. ಬಹುಮಾನದ ಹಣ ಪಡೆಯಲು ತೆರಿಗೆ ಪಾವತಿಸಬೇಕು~ ಎಂದು ಸಾರ್ವಜನಿಕರ ಮೊಬೈಲ್ಗೆ ಕರೆ ಮಾಡಿ ಬ್ಯಾಂಕ್ ಖಾತೆಯೊಂದರ ವಿವರ ನೀಡುತ್ತಿದ್ದ. ಸಾರ್ವಜನಿಕರು, ಆತ ನೀಡಿದ್ದ ಖಾತೆಗಳಿಗೆ ಹಣ ಸಂದಾಯ ಮಾಡಿ ವಂಚನೆಗೊಳಗಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಕೆ.ಆರ್.ಪುರ ಪೊಲೀಸರು ಲ್ಯಾಪ್ಟಾಪ್ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಲಕ್ಷ್ಮಣರಾಮ್ (28) ಮತ್ತು ಸರವಣಕುಮಾರ್ (22) ಎಂಬುವರನ್ನು ಬಂಧಿಸಿ ಎಂಟು ಲ್ಯಾಪ್ಟಾಪ್ ಜಪ್ತಿ ಮಾಡಿದ್ದಾರೆ.<br /> <br /> ಪೂರ್ವ ವಿಭಾಗದ ಡಿಸಿಪಿ ಎಂ.ಚಂದ್ರಶೇಖರ್ ಅವರ ಮಾರ್ಗದರ್ಶನದಲ್ಲಿ ಎಸಿಪಿಗಳಾದ ಡಾ.ಡಿ.ನಾರಾಯಣಸ್ವಾಮಿ, ಶಿವಮೂರ್ತಿ, ಇನ್ಸ್ಪೆಕ್ಟರ್ಗಳಾದ ಟಿ. ರಂಗಪ್ಪ, ವಿ.ಕೆ.ವಾಸುದೇವ, ಎಚ್.ಕೆ.ಮಹಾನಂದ, ಕೆ. ಎಸ್.ನಾಗರಾಜ್, ಕಿಶೋರ್ ಭರಣಿ, ಕೆ.ಎಸ್.ವೆಂಕಟೇಶನಾಯ್ಡು ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>