<p>ನವದೆಹಲಿ (ಪಿಟಿಐ): 2ಜಿ ತರಂಗಾಂತರ ಹಗರಣಕ್ಕೆ ಸಂಬಂಧಿಸಿದಂತೆ ರಚಿಸಿರುವ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಅವಧಿಯನ್ನು ಮುಂದಿನ ಬಜೆಟ್ ಅಧಿವೇಶನದವರೆಗೆ ವಿಸ್ತರಿಸಬೇಕೆಂದು ಕೋರಿ ಸೋಮವಾರ ಲೋಕಸಭೆಯಲ್ಲಿ ಗೊತ್ತುವಳಿಯೊಂದನ್ನು ಮಂಡಿಸಲಾಗುತ್ತದೆ.<br /> <br /> ಮುಂಗಾರು ಅಧಿವೇಶನದ ಕೊನೆಯ ದಿನ ಈ ಸಮಿತಿಯ ಅವಧಿ ಮುಗಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸಲು ಕೋರಿ ಗೊತ್ತುವಳಿ ಮಂಡಳಿಸಲು ನಿರ್ಧರಿಸಲಾಗಿದೆ. <br /> <br /> 1998 ರಿಂದ 2009 ರವರೆಗೆ ಹಂಚಿಕೆ, ದೂರಸಂಪರ್ಕ ಹಾಗೂ ಸ್ಪೆಕ್ಟ್ರಂ ಪರವಾನಗಿ ದರಕ್ಕೆ ಸಂಬಂಧಪಟ್ಟ ವಿಷಯಗಳನ್ನು ಪರಿಶೀಲಿಸಲೆಂದು ಕಳೆದ ಮಾರ್ಚ್ 4ರಂದು ಈ ಸಮಿತಿ ರಚಿಸಲಾಗಿದೆ.<br /> <br /> `ಇದೊಂದು ಸುದೀರ್ಘ ಪ್ರಕ್ರಿಯೆ. ಅನೇಕರನ್ನು ವಿಚಾರಣೆಗೊಳಪಡಿಸಬೇಕು. ಆದ ಕಾರಣ ನಾವು ಸಮಿತಿಯ ಅವಧಿ ವಿಸ್ತರಿಸಬೇಕೆಂದು ಕೋರಲು ನಿರ್ಧರಿಸಿದ್ದೇವೆ. ಈ ಸಂಬಂಧ ಸೋಮವಾರ ಲೋಕಸಭೆಯಲ್ಲಿ ಗೊತ್ತುವಳಿ ಮಂಡಿಸಲಿದ್ದೇವೆ~ಎಂದು ಮೂಲಗಳು ತಿಳಿಸಿವೆ.<br /> <br /> ಲೋಕಸಭೆಯ 20 ಹಾಗೂ ರಾಜ್ಯಸಭೆಯ 10 ಸದಸ್ಯರನ್ನು ಒಳಗೊಂಡ ಸಮಿತಿಯು ಈವರೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಸಿಬಿಐ ಹಾಗೂ ದೂರಸಂಪರ್ಕ ಇಲಾಖೆಯ ಕೆಲವು ಮಾಜಿ ಕಾರ್ಯದರ್ಶಿಗಳನ್ನು ಮಾತ್ರ ವಿಚಾರಣೆಗೊಳಪಡಿಸಿದೆ.<br /> <br /> ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ(ಟಿಆರ್ಎಐ) ಮಾಜಿ ಅಟಾರ್ನಿ ಜನರಲ್ ಸೋಲಿ ಸೊರಾಬ್ಜಿ, ದೂರಸಂಪರ್ಕ ಖಾತೆ ಮಾಜಿ ಸಚಿವರು, ಕಾರ್ಯದರ್ಶಿಗಳನ್ನು ಸಮಿತಿಯು ವಿಚಾರಣೆಗೆ ಒಳಪಡಿಸಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): 2ಜಿ ತರಂಗಾಂತರ ಹಗರಣಕ್ಕೆ ಸಂಬಂಧಿಸಿದಂತೆ ರಚಿಸಿರುವ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಅವಧಿಯನ್ನು ಮುಂದಿನ ಬಜೆಟ್ ಅಧಿವೇಶನದವರೆಗೆ ವಿಸ್ತರಿಸಬೇಕೆಂದು ಕೋರಿ ಸೋಮವಾರ ಲೋಕಸಭೆಯಲ್ಲಿ ಗೊತ್ತುವಳಿಯೊಂದನ್ನು ಮಂಡಿಸಲಾಗುತ್ತದೆ.<br /> <br /> ಮುಂಗಾರು ಅಧಿವೇಶನದ ಕೊನೆಯ ದಿನ ಈ ಸಮಿತಿಯ ಅವಧಿ ಮುಗಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸಲು ಕೋರಿ ಗೊತ್ತುವಳಿ ಮಂಡಳಿಸಲು ನಿರ್ಧರಿಸಲಾಗಿದೆ. <br /> <br /> 1998 ರಿಂದ 2009 ರವರೆಗೆ ಹಂಚಿಕೆ, ದೂರಸಂಪರ್ಕ ಹಾಗೂ ಸ್ಪೆಕ್ಟ್ರಂ ಪರವಾನಗಿ ದರಕ್ಕೆ ಸಂಬಂಧಪಟ್ಟ ವಿಷಯಗಳನ್ನು ಪರಿಶೀಲಿಸಲೆಂದು ಕಳೆದ ಮಾರ್ಚ್ 4ರಂದು ಈ ಸಮಿತಿ ರಚಿಸಲಾಗಿದೆ.<br /> <br /> `ಇದೊಂದು ಸುದೀರ್ಘ ಪ್ರಕ್ರಿಯೆ. ಅನೇಕರನ್ನು ವಿಚಾರಣೆಗೊಳಪಡಿಸಬೇಕು. ಆದ ಕಾರಣ ನಾವು ಸಮಿತಿಯ ಅವಧಿ ವಿಸ್ತರಿಸಬೇಕೆಂದು ಕೋರಲು ನಿರ್ಧರಿಸಿದ್ದೇವೆ. ಈ ಸಂಬಂಧ ಸೋಮವಾರ ಲೋಕಸಭೆಯಲ್ಲಿ ಗೊತ್ತುವಳಿ ಮಂಡಿಸಲಿದ್ದೇವೆ~ಎಂದು ಮೂಲಗಳು ತಿಳಿಸಿವೆ.<br /> <br /> ಲೋಕಸಭೆಯ 20 ಹಾಗೂ ರಾಜ್ಯಸಭೆಯ 10 ಸದಸ್ಯರನ್ನು ಒಳಗೊಂಡ ಸಮಿತಿಯು ಈವರೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಸಿಬಿಐ ಹಾಗೂ ದೂರಸಂಪರ್ಕ ಇಲಾಖೆಯ ಕೆಲವು ಮಾಜಿ ಕಾರ್ಯದರ್ಶಿಗಳನ್ನು ಮಾತ್ರ ವಿಚಾರಣೆಗೊಳಪಡಿಸಿದೆ.<br /> <br /> ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ(ಟಿಆರ್ಎಐ) ಮಾಜಿ ಅಟಾರ್ನಿ ಜನರಲ್ ಸೋಲಿ ಸೊರಾಬ್ಜಿ, ದೂರಸಂಪರ್ಕ ಖಾತೆ ಮಾಜಿ ಸಚಿವರು, ಕಾರ್ಯದರ್ಶಿಗಳನ್ನು ಸಮಿತಿಯು ವಿಚಾರಣೆಗೆ ಒಳಪಡಿಸಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>