<p>ಮಂಡ್ಯ: ಕಡು ಬಡತನ ಮತ್ತು ಕೌಟುಂಬಿಕ ಸಮಸ್ಯೆಗಳಿಂದ ಬಳಲಿದ್ದ ತಾಯಿ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಚಿಕ್ಕಬಳ್ಳಿ ಗ್ರಾಮದಲ್ಲಿ ನಡೆದಿದೆ.<br /> <br /> ಮೃತರನ್ನು ಚಿಕ್ಕಬಳ್ಳಿಯ ರಾಜಣ್ಣ ಎಂಬುವರ ಪತ್ನಿ ಪ್ರಮೀಳಾ (43), ಪುತ್ರಿಯರಾದ ರಮ್ಯಾ (18), ರಶ್ಮಿ (16) ಎಂದು ಗುರುತಿಸಲಾಗಿದೆ. ಇವರು ಚಿಕ್ಕಬಳ್ಳಿ ಗ್ರಾಮದ ಬಳಿಯ ಕೆರೆಗೆ ಬಹುಶಃ ಶನಿವಾರ ರಾತ್ರಿ ಹಾರಿದ್ದಾರೆ. ಭಾನುವಾರ ಬೆಳಿಗ್ಗೆ ಶವಗಳು ಪತ್ತೆಯಾಗಿವೆ.<br /> <br /> ರಾಜಣ್ಣ ಈಚೆಗೆ ಅನಾರೋಗ್ಯ ಪೀಡಿತರಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಡತನದ ಜತೆಗೆ ಇದರಿಂದಲೂ ಪ್ರಮೀಳಾ ಬೇಸತ್ತಿದ್ದರು. ಆತ್ಮಹತ್ಯೆಗೆ ಕಾರಣ ಇದೆಂದು ತಿಳಿದುಬಂದಿದೆ. ಕೂಲಿ ಕಾರ್ಮಿಕರಾಗಿದ್ದ ಇವರು ಬೆಂಗಳೂರಿನ ಸೋಮಸುಂದರಪಾಳ್ಯದಲ್ಲಿ ವಾಸಿಸುತ್ತಿದ್ದರು. ಸಂಕ್ರಾಂತಿಗಾಗಿ ಶನಿವಾರವಷ್ಟೇ ಊರಿಗೆ ಬಂದಿದ್ದರು.<br /> <br /> ಮಕ್ಕಳಲ್ಲಿ ಒಬ್ಬಾಕೆ ಚನ್ನಪಟ್ಟಣದ ಅಜ್ಜಿ ಮನೆಯಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದಳು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವಗಳನ್ನು ಹೊರತೆಗೆಸಿ ಮರಣೋತ್ತರ ಪರೀಕ್ಷೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಕಡು ಬಡತನ ಮತ್ತು ಕೌಟುಂಬಿಕ ಸಮಸ್ಯೆಗಳಿಂದ ಬಳಲಿದ್ದ ತಾಯಿ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಚಿಕ್ಕಬಳ್ಳಿ ಗ್ರಾಮದಲ್ಲಿ ನಡೆದಿದೆ.<br /> <br /> ಮೃತರನ್ನು ಚಿಕ್ಕಬಳ್ಳಿಯ ರಾಜಣ್ಣ ಎಂಬುವರ ಪತ್ನಿ ಪ್ರಮೀಳಾ (43), ಪುತ್ರಿಯರಾದ ರಮ್ಯಾ (18), ರಶ್ಮಿ (16) ಎಂದು ಗುರುತಿಸಲಾಗಿದೆ. ಇವರು ಚಿಕ್ಕಬಳ್ಳಿ ಗ್ರಾಮದ ಬಳಿಯ ಕೆರೆಗೆ ಬಹುಶಃ ಶನಿವಾರ ರಾತ್ರಿ ಹಾರಿದ್ದಾರೆ. ಭಾನುವಾರ ಬೆಳಿಗ್ಗೆ ಶವಗಳು ಪತ್ತೆಯಾಗಿವೆ.<br /> <br /> ರಾಜಣ್ಣ ಈಚೆಗೆ ಅನಾರೋಗ್ಯ ಪೀಡಿತರಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಡತನದ ಜತೆಗೆ ಇದರಿಂದಲೂ ಪ್ರಮೀಳಾ ಬೇಸತ್ತಿದ್ದರು. ಆತ್ಮಹತ್ಯೆಗೆ ಕಾರಣ ಇದೆಂದು ತಿಳಿದುಬಂದಿದೆ. ಕೂಲಿ ಕಾರ್ಮಿಕರಾಗಿದ್ದ ಇವರು ಬೆಂಗಳೂರಿನ ಸೋಮಸುಂದರಪಾಳ್ಯದಲ್ಲಿ ವಾಸಿಸುತ್ತಿದ್ದರು. ಸಂಕ್ರಾಂತಿಗಾಗಿ ಶನಿವಾರವಷ್ಟೇ ಊರಿಗೆ ಬಂದಿದ್ದರು.<br /> <br /> ಮಕ್ಕಳಲ್ಲಿ ಒಬ್ಬಾಕೆ ಚನ್ನಪಟ್ಟಣದ ಅಜ್ಜಿ ಮನೆಯಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದಳು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವಗಳನ್ನು ಹೊರತೆಗೆಸಿ ಮರಣೋತ್ತರ ಪರೀಕ್ಷೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>