<p><strong>ಶನಿವಾರಸಂತೆ:</strong> ಸಮೀಪದ ಕಿರಿಬಿಳಾಹ ಗ್ರಾಮದ ರಾಮೇಗೌಡ ಅವರ ಜಮೀನಿನಲ್ಲಿ ಬೀಟೆ ಮರವನ್ನು ಅಕ್ರಮ ವಾಗಿ ಸಾಗಿಸುತ್ತಿದ್ದಾಗ ಮಡಿಕೇರಿ ಅರಣ್ಯ ಸಂಚಾರಿದಳದ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.<br /> <br /> 2 ಲಕ್ಷ ರೂಪಾಯಿ ಬೆಲೆ ಬಾಳುವ ಬೀಟೆ ಮರವನ್ನು ಎರಡು ತುಂಡು ಗಳಾಗಿ ಕತ್ತರಿಸಿ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದಾಗ ಮಾಹಿತಿ ಅರಿತ ಉಪನಿರೀಕ್ಷಕ ಹರಿಶ್ಚಂದ್ರ, ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಅರಣ್ಯ ಇಲಾಖೆಯವರು ದಾಳಿ ನಡೆಸಿ ಬೀಟೆ ಮರವನ್ನು ವಶಪಡಿಸಿ ಕೊಂಡಿದ್ದಾರೆ. <br /> <br /> ಆರೋಪಿಗಳಾದ ಕಿರಿಬಿಳಾಹ ಗ್ರಾಮದ ರಾಮೇಗೌಡರ ಮಗ ಚಂದ್ರಪ್ಪ, ಹಾಸನ ಜಿಲ್ಲೆಯ ಹೆತ್ತೂರು ಗ್ರಾಮದ ಸುದೀಪ್ ಹಾಗೂ ಶನಿವಾರಸಂತೆ ಪೊಲೀಸ್ ಪೇದೆ ಕುಮಾರ್ ತಲೆ ಮರೆಸಿಕೊಂಡಿದ್ದಾರೆ. ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.<br /> <br /> ಈ ಕಾರ್ಯಾಚರಣೆಯಲ್ಲಿ ಶನಿವಾರಸಂತೆ ಅರಣ್ಯ ವಲಯಾಧಿಕಾರಿ ಜಯಪ್ರಕಾಶ್, ಸಿಬ್ಬಂದಿಗಳಾದ ಗುಣಶೇಖರ್, ಕೆ.ಎಸ್.ಮೇದಪ್ಪ, ತಮ್ಮಯ್ಯ, ಟಿ.ಆರ್.ರಾಜು, ಎಚ್.ರಾಜಪ್ಪ, ಗೋವಿಂದರಾಜ್, ಶರಣರಮೇಶ್, ಕಾಳಿಂಗಪ್ಪ, ಶಿವರಾಂ ಹಾಗೂ ಶರಣಬಸಪ್ಪ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶನಿವಾರಸಂತೆ:</strong> ಸಮೀಪದ ಕಿರಿಬಿಳಾಹ ಗ್ರಾಮದ ರಾಮೇಗೌಡ ಅವರ ಜಮೀನಿನಲ್ಲಿ ಬೀಟೆ ಮರವನ್ನು ಅಕ್ರಮ ವಾಗಿ ಸಾಗಿಸುತ್ತಿದ್ದಾಗ ಮಡಿಕೇರಿ ಅರಣ್ಯ ಸಂಚಾರಿದಳದ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.<br /> <br /> 2 ಲಕ್ಷ ರೂಪಾಯಿ ಬೆಲೆ ಬಾಳುವ ಬೀಟೆ ಮರವನ್ನು ಎರಡು ತುಂಡು ಗಳಾಗಿ ಕತ್ತರಿಸಿ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದಾಗ ಮಾಹಿತಿ ಅರಿತ ಉಪನಿರೀಕ್ಷಕ ಹರಿಶ್ಚಂದ್ರ, ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಅರಣ್ಯ ಇಲಾಖೆಯವರು ದಾಳಿ ನಡೆಸಿ ಬೀಟೆ ಮರವನ್ನು ವಶಪಡಿಸಿ ಕೊಂಡಿದ್ದಾರೆ. <br /> <br /> ಆರೋಪಿಗಳಾದ ಕಿರಿಬಿಳಾಹ ಗ್ರಾಮದ ರಾಮೇಗೌಡರ ಮಗ ಚಂದ್ರಪ್ಪ, ಹಾಸನ ಜಿಲ್ಲೆಯ ಹೆತ್ತೂರು ಗ್ರಾಮದ ಸುದೀಪ್ ಹಾಗೂ ಶನಿವಾರಸಂತೆ ಪೊಲೀಸ್ ಪೇದೆ ಕುಮಾರ್ ತಲೆ ಮರೆಸಿಕೊಂಡಿದ್ದಾರೆ. ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.<br /> <br /> ಈ ಕಾರ್ಯಾಚರಣೆಯಲ್ಲಿ ಶನಿವಾರಸಂತೆ ಅರಣ್ಯ ವಲಯಾಧಿಕಾರಿ ಜಯಪ್ರಕಾಶ್, ಸಿಬ್ಬಂದಿಗಳಾದ ಗುಣಶೇಖರ್, ಕೆ.ಎಸ್.ಮೇದಪ್ಪ, ತಮ್ಮಯ್ಯ, ಟಿ.ಆರ್.ರಾಜು, ಎಚ್.ರಾಜಪ್ಪ, ಗೋವಿಂದರಾಜ್, ಶರಣರಮೇಶ್, ಕಾಳಿಂಗಪ್ಪ, ಶಿವರಾಂ ಹಾಗೂ ಶರಣಬಸಪ್ಪ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>