<p><strong>ಬೆಂಗಳೂರು:</strong> ಹೈಕೋರ್ಟ್ಗೆ ಇದೇ 20ರಿಂದ 31ರವರೆಗೆ ಚಳಿಗಾಲದ ರಜೆ ಘೋಷಿಸಲಾಗಿದೆ. ಆದರೆ, 21, 23, 28 ಹಾಗೂ 30ರಂದು ರಜಾಕಾಲದ ಪೀಠ ಕಾರ್ಯ ನಿರ್ವಹಿಸಲಿದೆ. ಅಂದು ತುರ್ತಾಗಿ ನಡೆಯಬೇಕಿರುವ ಪ್ರಕರಣಗಳ ವಿಚಾರಣೆಯನ್ನು ಮಾತ್ರ ನ್ಯಾಯಮೂರ್ತಿಗಳು ಕೈಗೆತ್ತಿಕೊಳ್ಳಲಿದ್ದಾರೆ.<br /> <br /> ಆದರೆ ಈ ಅವಧಿಯಲ್ಲಿ ಧಾರವಾಡ ಹಾಗೂ ಗುಲ್ಬರ್ಗ ಸಂಚಾರಿ ಪೀಠಗಳು ಕಾರ್ಯ ನಿರ್ವಹಿಸುವುದಿಲ್ಲ. ಈ ಪೀಠದ ವ್ಯಾಪ್ತಿಯಲ್ಲಿನ ತುರ್ತು ಪ್ರಕರಣಗಳ ವಿಚಾರಣೆಯನ್ನು ಬೆಂಗಳೂರಿನ ಪ್ರಧಾನ ಪೀಠದಲ್ಲಿಯೇ ನಡೆಸಲಾಗುವುದು. <br /> <br /> <strong>ವಿಶೇಷ ಕಲಾಪ:</strong> ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ನೇತೃತ್ವದ ವಿಭಾಗೀಯ ಪೀಠವು ಶುಕ್ರವಾರ (ಡಿ.17) ವಿಶೇಷ ಕಲಾಪ ನಡೆಸಲಿದೆ. ಕಳೆದ ವಾರ ನ್ಯಾ. ಕೇಹರ್ ಅವರು ನಾಲ್ಕು ದಿನಗಳ ಕಾಲ ಸಂಚಾರಿ ಪೀಠಗಳಲ್ಲಿ ಕಲಾಪ ನಡೆಸಿದ್ದ ಹಿನ್ನೆಲೆಯಲ್ಲಿ ಅದಕ್ಕೆ ಬದಲಾಗಿ ಈ ಕಲಾಪ ನಡೆಸುವುದಾಗಿ ಅವರು ತಿಳಿಸಿದ್ದಾರೆ. <br /> <br /> ‘ವಕೀಲರು ಶುಕ್ರವಾರ ಕಲಾಪಕ್ಕೆ ಹಾಜರಾಗುವುದು ಕಡ್ಡಾಯವೇನಲ್ಲ. ಒಂದು ವೇಳೆ ಯಾವುದಾದರೂ ಕಾರಣಕ್ಕೆ ಬರಲು ಆಗದಿದ್ದರೆ, ಅಂತಹ ಪ್ರಕರಣಗಳ ವಿಚಾರಣೆಯನ್ನು ಮುಂದೂಡಲಾಗುವುದು. ವಕೀಲರು ಹಾಗೂ ಕಕ್ಷಿದಾರರು ಹೆದರಬೇಕಾದ ಅಗತ್ಯವಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹೈಕೋರ್ಟ್ಗೆ ಇದೇ 20ರಿಂದ 31ರವರೆಗೆ ಚಳಿಗಾಲದ ರಜೆ ಘೋಷಿಸಲಾಗಿದೆ. ಆದರೆ, 21, 23, 28 ಹಾಗೂ 30ರಂದು ರಜಾಕಾಲದ ಪೀಠ ಕಾರ್ಯ ನಿರ್ವಹಿಸಲಿದೆ. ಅಂದು ತುರ್ತಾಗಿ ನಡೆಯಬೇಕಿರುವ ಪ್ರಕರಣಗಳ ವಿಚಾರಣೆಯನ್ನು ಮಾತ್ರ ನ್ಯಾಯಮೂರ್ತಿಗಳು ಕೈಗೆತ್ತಿಕೊಳ್ಳಲಿದ್ದಾರೆ.<br /> <br /> ಆದರೆ ಈ ಅವಧಿಯಲ್ಲಿ ಧಾರವಾಡ ಹಾಗೂ ಗುಲ್ಬರ್ಗ ಸಂಚಾರಿ ಪೀಠಗಳು ಕಾರ್ಯ ನಿರ್ವಹಿಸುವುದಿಲ್ಲ. ಈ ಪೀಠದ ವ್ಯಾಪ್ತಿಯಲ್ಲಿನ ತುರ್ತು ಪ್ರಕರಣಗಳ ವಿಚಾರಣೆಯನ್ನು ಬೆಂಗಳೂರಿನ ಪ್ರಧಾನ ಪೀಠದಲ್ಲಿಯೇ ನಡೆಸಲಾಗುವುದು. <br /> <br /> <strong>ವಿಶೇಷ ಕಲಾಪ:</strong> ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ನೇತೃತ್ವದ ವಿಭಾಗೀಯ ಪೀಠವು ಶುಕ್ರವಾರ (ಡಿ.17) ವಿಶೇಷ ಕಲಾಪ ನಡೆಸಲಿದೆ. ಕಳೆದ ವಾರ ನ್ಯಾ. ಕೇಹರ್ ಅವರು ನಾಲ್ಕು ದಿನಗಳ ಕಾಲ ಸಂಚಾರಿ ಪೀಠಗಳಲ್ಲಿ ಕಲಾಪ ನಡೆಸಿದ್ದ ಹಿನ್ನೆಲೆಯಲ್ಲಿ ಅದಕ್ಕೆ ಬದಲಾಗಿ ಈ ಕಲಾಪ ನಡೆಸುವುದಾಗಿ ಅವರು ತಿಳಿಸಿದ್ದಾರೆ. <br /> <br /> ‘ವಕೀಲರು ಶುಕ್ರವಾರ ಕಲಾಪಕ್ಕೆ ಹಾಜರಾಗುವುದು ಕಡ್ಡಾಯವೇನಲ್ಲ. ಒಂದು ವೇಳೆ ಯಾವುದಾದರೂ ಕಾರಣಕ್ಕೆ ಬರಲು ಆಗದಿದ್ದರೆ, ಅಂತಹ ಪ್ರಕರಣಗಳ ವಿಚಾರಣೆಯನ್ನು ಮುಂದೂಡಲಾಗುವುದು. ವಕೀಲರು ಹಾಗೂ ಕಕ್ಷಿದಾರರು ಹೆದರಬೇಕಾದ ಅಗತ್ಯವಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>