<p>ಕುಶಾಲನಗರ: ಪಟ್ಟಣ ಪಂಚಾಯಿತಿಯ 2013–14ನೇ ಸಾಲಿನ ಮುಕ್ತನಿಧಿ ಅನುದಾನದ ಅಡಿಯಲ್ಲಿ ಕಾಯ್ದಿಡಲಾದ ಮೊತ್ತದಲ್ಲಿ ವಿವಿಧ 20 ಕಾಮಗಾರಿಗಳಿಗೆ ಶುಕ್ರವಾರ ನಡೆದ ಪಟ್ಟಣ ಪಂಚಾಯಿತಿ ವಿಶೇಷ ಸಭೆಯಲ್ಲಿ ಅನುಮೋದನೆ ನೀಡಲಾಯಿತು.<br /> <br /> ಪಂಚಾಯಿತಿ ಅಧ್ಯಕ್ಷ ಡಿ.ಕೆ. ತಿಮ್ಮಪ್ಪ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಭೆಯಲ್ಲಿ ಮಾರುಕಟ್ಟೆ ಅಭಿವೃದ್ಧಿ, ರಸ್ತೆಗೆ ಕಾಂಕ್ರೀಟ್ ಹಾಕುವುದು, ಚರಂಡಿ ನಿರ್ಮಾಣ, ಚರಂಡಿಗೆ ಸ್ಲ್ಯಾಬ್ ಅಳವಡಿಕೆ, ಸಮುದಾಯ ಭವನ ನಿರ್ಮಾಣ ಸೇರಿದಂತೆ ಒಟ್ಟು 20 ಕಾಮಗಾರಿಗಳಿಗೆ ಅನುಮೋದನೆ ನೀಡಲಾಯಿತು.<br /> <br /> ಕಡಿಮೆ ಕಮಿಷನ್ ನಮೂದಿಸಿರುವವರಿಗೆ ಕಾಮಗಾರಿಗಳನ್ನು ಗುತ್ತಿಗೆ ನೀಡಲು ತೀರ್ಮಾನಿಸಲಾಗಿದೆ ಎಂದು ಅಧ್ಯಕ್ಷ ಡಿ.ಕೆ. ತಿಮ್ಮಪ್ಪ ತಿಳಿಸಿದರು. ಈ ಕುರಿತು ಸದಸ್ಯ ಶರವಣ್ಕುಮಾರ್ ಮಾತನಾಡಿ ಕಡಿಮೆ ವೆಚ್ಚಕ್ಕೆ ಕೆಲಸ ಮಾಡಲು ಕಾಮಗಾರಿ ಗುತ್ತಿಗೆ ಕೊಟ್ಟು ನಂತರ ಕಳಪೆ ಕಾಮಗಾರಿ ನಡೆಯುವಂತೆ ಆಗಬಾರದು ಎಂದರು. ಇದಕ್ಕೆ ದನಿಗೂಡಿಸಿದ ಆಡಳಿತ ಪಕ್ಷದ ಸದಸ್ಯ ಚರಣ್, ಈ ಹಿಂದೆ ಒಂದು ಕಾಮಗಾರಿಯಲ್ಲಿ ಅತ್ಯಂತ ಕಳಪೆ ಗುಣಮಟ್ಟದ ಸಿಮೆಂಟ್ ಬಳಸಿರುವುದು ಕಂಡುಬಂದಿದೆ ಎಂದರು.<br /> <br /> ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಡಿ. ಚಂದ್ರು ಮಾತನಾಡಿ ಕಾಮಗಾರಿಗಳನ್ನು ನಡೆಸುವಾಗ ಆಯಾ ವಾರ್ಡುಗಳ ಸದಸ್ಯರ ಗಮನಕ್ಕೆ ತರಬೇಕು ಎಂದರು. ಕಾಮಗಾರಿಗಳು ನಡೆಯುವ ಸಂದರ್ಭದಲ್ಲಿ ವಾರ್ಡ್ ಸದಸ್ಯರು ಹಾಜರಿದ್ದು ಅವುಗಳ ಗುಣಮಟ್ಟ ಕಾಪಾಡುವಂತೆ ಎಚ್ಚರ ವಹಿಸಲು ಸಹಕರಿಸಬೇಕು ಎಂದರು.<br /> <br /> ಈಚೆಗೆ ನಿಧನರಾದ ಶ್ರೀಕಂಠದತ್ತ ಒಡೆಯರ್ ಮತ್ತು ನೆಲ್ಸನ್ ಮಂಡೇಲಾ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಉಪಾಧ್ಯಕ್ಷೆ ಪಾರ್ವತಿ, ಕರಿಯಪ್ಪ, ಸುರೇಯಾ ಭಾನು, ಪ್ರಮೋದ್ ಮುತ್ತಪ್ಪ, ರಶ್ಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಶಾಲನಗರ: ಪಟ್ಟಣ ಪಂಚಾಯಿತಿಯ 2013–14ನೇ ಸಾಲಿನ ಮುಕ್ತನಿಧಿ ಅನುದಾನದ ಅಡಿಯಲ್ಲಿ ಕಾಯ್ದಿಡಲಾದ ಮೊತ್ತದಲ್ಲಿ ವಿವಿಧ 20 ಕಾಮಗಾರಿಗಳಿಗೆ ಶುಕ್ರವಾರ ನಡೆದ ಪಟ್ಟಣ ಪಂಚಾಯಿತಿ ವಿಶೇಷ ಸಭೆಯಲ್ಲಿ ಅನುಮೋದನೆ ನೀಡಲಾಯಿತು.<br /> <br /> ಪಂಚಾಯಿತಿ ಅಧ್ಯಕ್ಷ ಡಿ.ಕೆ. ತಿಮ್ಮಪ್ಪ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಭೆಯಲ್ಲಿ ಮಾರುಕಟ್ಟೆ ಅಭಿವೃದ್ಧಿ, ರಸ್ತೆಗೆ ಕಾಂಕ್ರೀಟ್ ಹಾಕುವುದು, ಚರಂಡಿ ನಿರ್ಮಾಣ, ಚರಂಡಿಗೆ ಸ್ಲ್ಯಾಬ್ ಅಳವಡಿಕೆ, ಸಮುದಾಯ ಭವನ ನಿರ್ಮಾಣ ಸೇರಿದಂತೆ ಒಟ್ಟು 20 ಕಾಮಗಾರಿಗಳಿಗೆ ಅನುಮೋದನೆ ನೀಡಲಾಯಿತು.<br /> <br /> ಕಡಿಮೆ ಕಮಿಷನ್ ನಮೂದಿಸಿರುವವರಿಗೆ ಕಾಮಗಾರಿಗಳನ್ನು ಗುತ್ತಿಗೆ ನೀಡಲು ತೀರ್ಮಾನಿಸಲಾಗಿದೆ ಎಂದು ಅಧ್ಯಕ್ಷ ಡಿ.ಕೆ. ತಿಮ್ಮಪ್ಪ ತಿಳಿಸಿದರು. ಈ ಕುರಿತು ಸದಸ್ಯ ಶರವಣ್ಕುಮಾರ್ ಮಾತನಾಡಿ ಕಡಿಮೆ ವೆಚ್ಚಕ್ಕೆ ಕೆಲಸ ಮಾಡಲು ಕಾಮಗಾರಿ ಗುತ್ತಿಗೆ ಕೊಟ್ಟು ನಂತರ ಕಳಪೆ ಕಾಮಗಾರಿ ನಡೆಯುವಂತೆ ಆಗಬಾರದು ಎಂದರು. ಇದಕ್ಕೆ ದನಿಗೂಡಿಸಿದ ಆಡಳಿತ ಪಕ್ಷದ ಸದಸ್ಯ ಚರಣ್, ಈ ಹಿಂದೆ ಒಂದು ಕಾಮಗಾರಿಯಲ್ಲಿ ಅತ್ಯಂತ ಕಳಪೆ ಗುಣಮಟ್ಟದ ಸಿಮೆಂಟ್ ಬಳಸಿರುವುದು ಕಂಡುಬಂದಿದೆ ಎಂದರು.<br /> <br /> ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಡಿ. ಚಂದ್ರು ಮಾತನಾಡಿ ಕಾಮಗಾರಿಗಳನ್ನು ನಡೆಸುವಾಗ ಆಯಾ ವಾರ್ಡುಗಳ ಸದಸ್ಯರ ಗಮನಕ್ಕೆ ತರಬೇಕು ಎಂದರು. ಕಾಮಗಾರಿಗಳು ನಡೆಯುವ ಸಂದರ್ಭದಲ್ಲಿ ವಾರ್ಡ್ ಸದಸ್ಯರು ಹಾಜರಿದ್ದು ಅವುಗಳ ಗುಣಮಟ್ಟ ಕಾಪಾಡುವಂತೆ ಎಚ್ಚರ ವಹಿಸಲು ಸಹಕರಿಸಬೇಕು ಎಂದರು.<br /> <br /> ಈಚೆಗೆ ನಿಧನರಾದ ಶ್ರೀಕಂಠದತ್ತ ಒಡೆಯರ್ ಮತ್ತು ನೆಲ್ಸನ್ ಮಂಡೇಲಾ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಉಪಾಧ್ಯಕ್ಷೆ ಪಾರ್ವತಿ, ಕರಿಯಪ್ಪ, ಸುರೇಯಾ ಭಾನು, ಪ್ರಮೋದ್ ಮುತ್ತಪ್ಪ, ರಶ್ಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>