<p><strong>ಹೊಳಲ್ಕೆರೆ:</strong> ಒಂದು ವರ್ಷದಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ 20 ಸಾವಿರ ಸ್ವಸಹಾಯ ಸಂಘ ರಚಿಸುವ ಗುರಿ ಹೊಂದಲಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧಾರವಾಡ ಪ್ರಾದೇಶಿಕ ನಿರ್ದೇಶಕ ಜಯಶಂಕರ ಶರ್ಮ ತಿಳಿಸಿದರು.</p>.<p>ತಾಲ್ಲೂಕಿನ ದುಮ್ಮಿಯಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 101 ನೇ ಸ್ವಸಹಾಯ ಸಂಘ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಯೋಜನೆಯ ಅನುಷ್ಠಾನಕ್ಕೆ ಜಿಲ್ಲೆಯಲ್ಲಿ ಸುಮಾರು ರೂ. 10 ಕೋಟಿ ಮೀಸಲಿಡುವ ಗುರಿ ಇದೆ. 1982ರಲ್ಲಿ ಗ್ರಾಮೀಣರ ಸಬಲೀಕರಣದ ಉದ್ದೇಶದಿಂದ ಈ ಯೋಜನೆ ಆರಂಭಿಸಲಾಗಿದ್ದು, ಅನುಷ್ಠಾನಗೊಂಡ ಎಲ್ಲಾ ಜಿಲ್ಲೆಗಳಲ್ಲಿ ಯಶಸ್ಸು ಕಂಡಿದ್ದೇವೆ. ನೈರ್ಮಲ್ಯ, ಸ್ವಾವಲಂಬನೆ, ಕೃಷಿ, ಸಣ್ಣ ಕೈಗಾರಿಕೆ, ಬಡತನ ನಿರ್ಮೂಲನೆ ಮೊದಲಾದ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದ್ದೇವೆ. ಸರ್ಕಾರದೊಂದಿಗೆ ಸಂಘ ಸಂಸ್ಥೆಗಳು ಕೈಜೋಡಿಸಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದರು.</p>.<p>ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಭಾರತಿ ಕಲ್ಲೇಶ್ ಮಾತನಾಡಿ, ಮಹಿಳೆಯರು ಸ್ವಾವಲಂಬಿಗಳಾದಾಗ ಮಾತ್ರ ಕುಟುಂಬ, ಸಮಾಜ ಅಭಿವೃದ್ಧಿ ಆಗುತ್ತದೆ. ಸರ್ಕಾರ ಮತ್ತು ಸಂಘ ಸಂಸ್ಥೆಗಳ ನೆರವು ಪಡೆದು ಆರ್ಥಿಕವಾಗಿ ಸದೃಢರಾಗಲು ಪ್ರಯತ್ನಿಸಬೇಕು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಹಲವು ಕಾರ್ಯಕ್ರಮಗಳಿದ್ದು, ಉಪಯೋಗ ಪಡೆಯಬೇಕು ಎಂದರು.</p>.<p>ಜಿಲ್ಲಾ ಪಂಚಾಯ್ತಿ ಸದಸ್ಯ ಪಿ.ಆರ್. ಶಿವಕುಮಾರ್, ನಬಾರ್ಡ್ ಡಿಡಿಎಂ ಪ್ರಕಾಶ್ ಭಂಡಾರಿ, ತಾಲ್ಲೂಕು ಪಂಚಾಯ್ತಿ ಸದಸ್ಯ ರವಿ, ಎಸ್. ವೇದಮೂರ್ತಿ, ಹೊಲದಪ್ಪ, ಜಿಲ್ಲಾ ನಿರ್ದೇಶಕ ಸುಬ್ರಹ್ಮಣ್ಯ ಪ್ರಸಾದ್, ಮಹಾಂತೇಶ್ ಇದ್ದರು.<br /> ಎಸ್. ಜನಾರ್ದನ್ ಸ್ವಾಗತಿಸಿದರು. ರೇಷ್ಮಾ ಕಾರ್ಯಕ್ರಮ ನಿರೂಪಿಸಿದರು. ಓಂಕಾರಪ್ಪ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳಲ್ಕೆರೆ:</strong> ಒಂದು ವರ್ಷದಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ 20 ಸಾವಿರ ಸ್ವಸಹಾಯ ಸಂಘ ರಚಿಸುವ ಗುರಿ ಹೊಂದಲಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧಾರವಾಡ ಪ್ರಾದೇಶಿಕ ನಿರ್ದೇಶಕ ಜಯಶಂಕರ ಶರ್ಮ ತಿಳಿಸಿದರು.</p>.<p>ತಾಲ್ಲೂಕಿನ ದುಮ್ಮಿಯಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 101 ನೇ ಸ್ವಸಹಾಯ ಸಂಘ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಯೋಜನೆಯ ಅನುಷ್ಠಾನಕ್ಕೆ ಜಿಲ್ಲೆಯಲ್ಲಿ ಸುಮಾರು ರೂ. 10 ಕೋಟಿ ಮೀಸಲಿಡುವ ಗುರಿ ಇದೆ. 1982ರಲ್ಲಿ ಗ್ರಾಮೀಣರ ಸಬಲೀಕರಣದ ಉದ್ದೇಶದಿಂದ ಈ ಯೋಜನೆ ಆರಂಭಿಸಲಾಗಿದ್ದು, ಅನುಷ್ಠಾನಗೊಂಡ ಎಲ್ಲಾ ಜಿಲ್ಲೆಗಳಲ್ಲಿ ಯಶಸ್ಸು ಕಂಡಿದ್ದೇವೆ. ನೈರ್ಮಲ್ಯ, ಸ್ವಾವಲಂಬನೆ, ಕೃಷಿ, ಸಣ್ಣ ಕೈಗಾರಿಕೆ, ಬಡತನ ನಿರ್ಮೂಲನೆ ಮೊದಲಾದ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದ್ದೇವೆ. ಸರ್ಕಾರದೊಂದಿಗೆ ಸಂಘ ಸಂಸ್ಥೆಗಳು ಕೈಜೋಡಿಸಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದರು.</p>.<p>ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಭಾರತಿ ಕಲ್ಲೇಶ್ ಮಾತನಾಡಿ, ಮಹಿಳೆಯರು ಸ್ವಾವಲಂಬಿಗಳಾದಾಗ ಮಾತ್ರ ಕುಟುಂಬ, ಸಮಾಜ ಅಭಿವೃದ್ಧಿ ಆಗುತ್ತದೆ. ಸರ್ಕಾರ ಮತ್ತು ಸಂಘ ಸಂಸ್ಥೆಗಳ ನೆರವು ಪಡೆದು ಆರ್ಥಿಕವಾಗಿ ಸದೃಢರಾಗಲು ಪ್ರಯತ್ನಿಸಬೇಕು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಹಲವು ಕಾರ್ಯಕ್ರಮಗಳಿದ್ದು, ಉಪಯೋಗ ಪಡೆಯಬೇಕು ಎಂದರು.</p>.<p>ಜಿಲ್ಲಾ ಪಂಚಾಯ್ತಿ ಸದಸ್ಯ ಪಿ.ಆರ್. ಶಿವಕುಮಾರ್, ನಬಾರ್ಡ್ ಡಿಡಿಎಂ ಪ್ರಕಾಶ್ ಭಂಡಾರಿ, ತಾಲ್ಲೂಕು ಪಂಚಾಯ್ತಿ ಸದಸ್ಯ ರವಿ, ಎಸ್. ವೇದಮೂರ್ತಿ, ಹೊಲದಪ್ಪ, ಜಿಲ್ಲಾ ನಿರ್ದೇಶಕ ಸುಬ್ರಹ್ಮಣ್ಯ ಪ್ರಸಾದ್, ಮಹಾಂತೇಶ್ ಇದ್ದರು.<br /> ಎಸ್. ಜನಾರ್ದನ್ ಸ್ವಾಗತಿಸಿದರು. ರೇಷ್ಮಾ ಕಾರ್ಯಕ್ರಮ ನಿರೂಪಿಸಿದರು. ಓಂಕಾರಪ್ಪ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>