<p><strong>ಬೆಂಗಳೂರು:</strong> ಕೃಷಿ ವಿಶ್ವವಿದ್ಯಾಲಯವು ಇದೇ 21ರ ಬುಧವಾರ ಬೆಂಗಳೂರು ಉತ್ತರ ಜಿಲ್ಲೆಯ ಜಾಲಾ ಹೋಬಳಿ ಬಾಗಲೂರು ಗ್ರಾಮದಲ್ಲಿ ರೈತ ಮತ್ತು ರೈತ ಮಹಿಳೆಯರ ಅಭಿವೃದ್ಧಿ ಕಾರ್ಯಕ್ರಮ `ಕೃಷಿ ಯುಗಾದಿ~ ಮೇಳ ಮತ್ತು ಕೃಷಿ ವಸ್ತುಪ್ರದರ್ಶನ ಹಮ್ಮಿಕೊಂಡಿದೆ. <br /> <br /> ದಕ್ಷಿಣ ಕರ್ನಾಟಕದ 17 ಜಿಲ್ಲೆಗಳ ಆಯ್ದ ಗ್ರಾಮಗಳಲ್ಲಿ ಸಮಗೃ ಕೃಷಿ ಪದ್ದತಿಗಳ ಮೂಲಕ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡ ರೈತರ ಅಭಿವೃದ್ಧಿಕಾರ್ಯಕ್ರಮ ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದೆ. ಮೇಳದಲ್ಲಿ ಅರಣ್ಯ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಜಲಾನಯನ ಅಭಿವೃದ್ಧಿ , ಕೃಷಿ ಮಾರುಕಟ್ಟೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತೆಂಗು ಮಂಡಳಿ, ಹೆಸರಘಟ್ಟದ ತೋಟಗಾರಿಕಾ ಸಂಶೋಧನ ಕೇಂದ್ರ, ಎಂ.ಪಿ.ಸಿ.ಎಸ್, ಸ್ಥಳೀಯ ಗ್ರಾಮ ಪಂಚಾಯತಿಗಳು, ರಾಷ್ಟ್ರೀಕೃತ ಬ್ಯಾಂಕಗಳು ಮತ್ತು ಖಾಸಗಿ ಸಂಸ್ಥೆಗಳ ಕೃಷಿ ತಜ್ಞರಿಂದ ಮಾಹಿತಿ ತಿಳಿಯಬಹುದಾಗಿದೆ. <br /> <br /> ಮೇಳದಲ್ಲಿ ಸುಮಾರು ಹತ್ತು ಸಾವಿರ ಜನ ವಸ್ತು ಪ್ರರ್ದಶನವನ್ನು ವೀಕ್ಷಿಸಲಿದ್ದು, ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವರು, ಲೋಕಸಭಾ ಮತ್ತು ವಿಧಾನಸಭಾ ಸದಸ್ಯರು, ಕುಲಪತಿಗಳು, ವಿಜ್ಞಾನಿಗಳು ಮತ್ತು ಅಧಿಕಾರಿಗಳು ಭಾಗವಹಿಸುವರು.<br /> <br /> ಮೇಳದಲ್ಲಿ ಬೆಳಿಗ್ಗೆ 8 ಗಂಟೆಗೆ ಪಶುಚಿಕಿತ್ಸಾ ಶಿಬಿರ, ಬೆಳಿಗ್ಗೆ 10 ಗಂಟೆಗೆ ರೈತರೊಡನೆ ಸಂವಾದ, ಕೃಷಿ ವಸ್ತು ಪ್ರದರ್ಶನ, ಬೆಳಿಗ್ಗೆ 11 ಗಂಟೆಗೆ ಮಹಿಳೆಯರಿಗೆ ತರಬೇತಿ ಕಾರ್ಯಕ್ರಮ ಮಧ್ಯಾಹ್ನ 2 ಗಂಟೆಗೆ ರೈತರ ಸಮಾವೇಶ ಎಸ್.ಸಿ ಮತ್ತು ಎಸ್.ಟಿ ರೈತ ಫಲಾನುಭವಿಗಳಿಗೆ ಪರಿಕರ ವಿತರಣೆ ವಿವಿಧ ವಿಷಯಗಳಲ್ಲಿ ತರಬೇತಿ, ಸಮ್ಮೇಳನದಲ್ಲಿ ಭಾಗವಹಿಸುವ ಪ್ರತಿ ಸಂಸ್ಥೆಗಳಿಗೆ ಮಳಿಗೆ ತೆರೆಯಲು ಅವಕಾಶವನ್ನು ಕಲ್ಪಿಸಲಾಗುವುದು. ಆಸಕ್ತ ರೈತರು ಈ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮೇಳದ ಪ್ರಯೋಜನ ಪಡೆದುಕೊಳ್ಳಬಹುದು.<br /> <br /> ಸಮ್ಮೇಳನದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಡಾ.ಕೆ.ಜಗದೀಶ್ವರ್ 98449 98799 ಅಥವಾ ಡಾ.ಕೆ.ನಾರಾಯಣ ಗೌಡ 98440 55836 ಸಂಪರ್ಕಿಸಬಹುದು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೃಷಿ ವಿಶ್ವವಿದ್ಯಾಲಯವು ಇದೇ 21ರ ಬುಧವಾರ ಬೆಂಗಳೂರು ಉತ್ತರ ಜಿಲ್ಲೆಯ ಜಾಲಾ ಹೋಬಳಿ ಬಾಗಲೂರು ಗ್ರಾಮದಲ್ಲಿ ರೈತ ಮತ್ತು ರೈತ ಮಹಿಳೆಯರ ಅಭಿವೃದ್ಧಿ ಕಾರ್ಯಕ್ರಮ `ಕೃಷಿ ಯುಗಾದಿ~ ಮೇಳ ಮತ್ತು ಕೃಷಿ ವಸ್ತುಪ್ರದರ್ಶನ ಹಮ್ಮಿಕೊಂಡಿದೆ. <br /> <br /> ದಕ್ಷಿಣ ಕರ್ನಾಟಕದ 17 ಜಿಲ್ಲೆಗಳ ಆಯ್ದ ಗ್ರಾಮಗಳಲ್ಲಿ ಸಮಗೃ ಕೃಷಿ ಪದ್ದತಿಗಳ ಮೂಲಕ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡ ರೈತರ ಅಭಿವೃದ್ಧಿಕಾರ್ಯಕ್ರಮ ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದೆ. ಮೇಳದಲ್ಲಿ ಅರಣ್ಯ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಜಲಾನಯನ ಅಭಿವೃದ್ಧಿ , ಕೃಷಿ ಮಾರುಕಟ್ಟೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತೆಂಗು ಮಂಡಳಿ, ಹೆಸರಘಟ್ಟದ ತೋಟಗಾರಿಕಾ ಸಂಶೋಧನ ಕೇಂದ್ರ, ಎಂ.ಪಿ.ಸಿ.ಎಸ್, ಸ್ಥಳೀಯ ಗ್ರಾಮ ಪಂಚಾಯತಿಗಳು, ರಾಷ್ಟ್ರೀಕೃತ ಬ್ಯಾಂಕಗಳು ಮತ್ತು ಖಾಸಗಿ ಸಂಸ್ಥೆಗಳ ಕೃಷಿ ತಜ್ಞರಿಂದ ಮಾಹಿತಿ ತಿಳಿಯಬಹುದಾಗಿದೆ. <br /> <br /> ಮೇಳದಲ್ಲಿ ಸುಮಾರು ಹತ್ತು ಸಾವಿರ ಜನ ವಸ್ತು ಪ್ರರ್ದಶನವನ್ನು ವೀಕ್ಷಿಸಲಿದ್ದು, ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವರು, ಲೋಕಸಭಾ ಮತ್ತು ವಿಧಾನಸಭಾ ಸದಸ್ಯರು, ಕುಲಪತಿಗಳು, ವಿಜ್ಞಾನಿಗಳು ಮತ್ತು ಅಧಿಕಾರಿಗಳು ಭಾಗವಹಿಸುವರು.<br /> <br /> ಮೇಳದಲ್ಲಿ ಬೆಳಿಗ್ಗೆ 8 ಗಂಟೆಗೆ ಪಶುಚಿಕಿತ್ಸಾ ಶಿಬಿರ, ಬೆಳಿಗ್ಗೆ 10 ಗಂಟೆಗೆ ರೈತರೊಡನೆ ಸಂವಾದ, ಕೃಷಿ ವಸ್ತು ಪ್ರದರ್ಶನ, ಬೆಳಿಗ್ಗೆ 11 ಗಂಟೆಗೆ ಮಹಿಳೆಯರಿಗೆ ತರಬೇತಿ ಕಾರ್ಯಕ್ರಮ ಮಧ್ಯಾಹ್ನ 2 ಗಂಟೆಗೆ ರೈತರ ಸಮಾವೇಶ ಎಸ್.ಸಿ ಮತ್ತು ಎಸ್.ಟಿ ರೈತ ಫಲಾನುಭವಿಗಳಿಗೆ ಪರಿಕರ ವಿತರಣೆ ವಿವಿಧ ವಿಷಯಗಳಲ್ಲಿ ತರಬೇತಿ, ಸಮ್ಮೇಳನದಲ್ಲಿ ಭಾಗವಹಿಸುವ ಪ್ರತಿ ಸಂಸ್ಥೆಗಳಿಗೆ ಮಳಿಗೆ ತೆರೆಯಲು ಅವಕಾಶವನ್ನು ಕಲ್ಪಿಸಲಾಗುವುದು. ಆಸಕ್ತ ರೈತರು ಈ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮೇಳದ ಪ್ರಯೋಜನ ಪಡೆದುಕೊಳ್ಳಬಹುದು.<br /> <br /> ಸಮ್ಮೇಳನದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಡಾ.ಕೆ.ಜಗದೀಶ್ವರ್ 98449 98799 ಅಥವಾ ಡಾ.ಕೆ.ನಾರಾಯಣ ಗೌಡ 98440 55836 ಸಂಪರ್ಕಿಸಬಹುದು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>