<p><strong>ಮೈಸೂರು: </strong>ಸ್ಪಂದನ ಸಂಸ್ಥೆ ವತಿಯಿಂದ `ಸಂಪದ~ (ಸಂಸ್ಕೃತಿ-ಪರಂಪರೆ-ದರ್ಪಣ) ಹೆಸರಿನಲ್ಲಿ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವವನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನ.22ರಿಂದ 25ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಸಭಾ ಸದಸ್ಯೆ ಡಾ.ಬಿ.ಜಯಶ್ರೀ ಹೇಳಿದರು. ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ತಾಂತ್ರಿಕತೆ- ಆಧುನಿಕತೆಗಳನ್ನು ಅಪ್ಪಿಕೊಂಡ ಮನಸ್ಸುಗಳಿಗೆ `ಸಂಪದ~ದ ಮೂಲಕ ನಮ್ಮ ಭಾರತೀಯ ಸಂಸ್ಕೃತಿ-ಪರಂಪರೆಗಳಾದ ಜನಪದ, ಶಾಸ್ತ್ರೀಯ ಹಾಗೂ ಅಪರೂಪದ ಕರಕುಶಲ ಕಲೆಗಳನ್ನು ಪರಿಚಯಿಸಿ, ಮುಂದಿನ ಪೀಳಿಗೆಗೂ ಕೊಂಡೊಯ್ಯುವ ಉದ್ದೇಶ ನಮ್ಮದಾಗಿದೆ ಎಂದರು. ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವದಲ್ಲಿ ದೇಶದ ನಾನಾ ಭಾಗಗಳಿಂದ ನಾಟಕ, ಶಾಸ್ತ್ರೀಯ ಸಂಗೀತ, ಜನಪದ ಕಲಾಪ್ರಕಾರಗಳ ಹೆಸರಾಂತ ಕಲಾವಿದರು ಭಾಗವಹಿಸಲಿದ್ದಾರೆ. ನ.22ರಂದು ಸಂಜೆ 4 ಗಂಟೆಗೆ ಅಂಬಾವಿಲಾಸ ಅರಮನೆ ಮುಂಭಾಗದಿಂದ ಮೆರವಣಿಗೆ ಆರಂಭವಾಗಿ, ದೇವರಾಜ ಅರಸು ರಸ್ತೆ, ಮೆಟ್ರೊಪೋಲ್ ವೃತ್ತದ ಮಾರ್ಗವಾಗಿ ಕಲಾಮಂದಿರ ತಲುಪಲಿದೆ. ಜನಪದ ಕಲಾ ತಂಡಗಳು ಮೆರವಣಿಗೆಗೆ ಮೆರುಗು ನೀಡಲಿವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಸ್ಪಂದನ ಸಂಸ್ಥೆ ವತಿಯಿಂದ `ಸಂಪದ~ (ಸಂಸ್ಕೃತಿ-ಪರಂಪರೆ-ದರ್ಪಣ) ಹೆಸರಿನಲ್ಲಿ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವವನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನ.22ರಿಂದ 25ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಸಭಾ ಸದಸ್ಯೆ ಡಾ.ಬಿ.ಜಯಶ್ರೀ ಹೇಳಿದರು. ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ತಾಂತ್ರಿಕತೆ- ಆಧುನಿಕತೆಗಳನ್ನು ಅಪ್ಪಿಕೊಂಡ ಮನಸ್ಸುಗಳಿಗೆ `ಸಂಪದ~ದ ಮೂಲಕ ನಮ್ಮ ಭಾರತೀಯ ಸಂಸ್ಕೃತಿ-ಪರಂಪರೆಗಳಾದ ಜನಪದ, ಶಾಸ್ತ್ರೀಯ ಹಾಗೂ ಅಪರೂಪದ ಕರಕುಶಲ ಕಲೆಗಳನ್ನು ಪರಿಚಯಿಸಿ, ಮುಂದಿನ ಪೀಳಿಗೆಗೂ ಕೊಂಡೊಯ್ಯುವ ಉದ್ದೇಶ ನಮ್ಮದಾಗಿದೆ ಎಂದರು. ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವದಲ್ಲಿ ದೇಶದ ನಾನಾ ಭಾಗಗಳಿಂದ ನಾಟಕ, ಶಾಸ್ತ್ರೀಯ ಸಂಗೀತ, ಜನಪದ ಕಲಾಪ್ರಕಾರಗಳ ಹೆಸರಾಂತ ಕಲಾವಿದರು ಭಾಗವಹಿಸಲಿದ್ದಾರೆ. ನ.22ರಂದು ಸಂಜೆ 4 ಗಂಟೆಗೆ ಅಂಬಾವಿಲಾಸ ಅರಮನೆ ಮುಂಭಾಗದಿಂದ ಮೆರವಣಿಗೆ ಆರಂಭವಾಗಿ, ದೇವರಾಜ ಅರಸು ರಸ್ತೆ, ಮೆಟ್ರೊಪೋಲ್ ವೃತ್ತದ ಮಾರ್ಗವಾಗಿ ಕಲಾಮಂದಿರ ತಲುಪಲಿದೆ. ಜನಪದ ಕಲಾ ತಂಡಗಳು ಮೆರವಣಿಗೆಗೆ ಮೆರುಗು ನೀಡಲಿವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>