ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

23ರಂದು ಬಿಜೆಪಿ ಹಿರಿಯ ನಾಗರಿಕರ ವೇದಿಕೆ ಸಭೆ

Last Updated 20 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು:  ಭಾರತೀಯ ಜನತಾ ಪಕ್ಷದ ಹಿರಿಯ ನಾಗರಿಕರ ವೇದಿಕೆಯ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು ಮತ್ತು ಪ್ರಮುಖರ ಸಭೆಯನ್ನು ಇದೇ 23ರಂದು ನಗರದಲ್ಲಿ ಕರೆಯಲಾಗಿದೆ ಎಂದು ವೇದಿಕೆಯ ಕಾರ್ಯಾಧ್ಯಕ್ಷ ಟಿ.ಗೋವಿಂದಪ್ಪ ಹೇಳಿದ್ದಾರೆ.

ಸದನದಲ್ಲಿ ಅಶ್ಲೀಲ ದೃಶ್ಯ ವೀಕ್ಷಿಸಿದ ಶಾಸಕರನ್ನು ಬಿ.ಎಸ್.ಯಡಿಯೂರಪ್ಪ ಸಮರ್ಥಿಸಿಕೊಂಡಿರುವುದು, ಅವರ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಹೇಳಿರುವುದು ಸೇರಿದಂತೆ ಏಳು ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವೇದಿಕೆಯ ರಾಜ್ಯ ಮಟ್ಟದ ಸಮಾವೇಶ, ಕಾರ್ಯಾಲಯ ಉದ್ಘಾಟನೆ, ಕೆಲ ಸಚಿವರ ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತದೆ. ವೇದಿಕೆ ಎಲ್ಲ ಪದಾಧಿಕಾರಿಗಳು, ಪ್ರಮುಖರು ಸಭೆಗೆ ಹಾಜರಾಗಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT