<p><strong>ತುಮಕೂರು:</strong> ಆಮ್ ಆದ್ಮಿ ಪಕ್ಷದ ನಿಯೋಜಿತ ಅಭ್ಯರ್ಥಿ ಎ.ಎಸ್.ಡಿಸಿಲ್ವಾ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.<br /> <br /> ಡಿಸಿಲ್ವಾ ಅವರಿಗೆ ಪಕ್ಷದ ಟಿಕೆಟ್ ಘೋಷಣೆಯಾದ ನಂತರ ನಗರಕ್ಕೆ ಆಗಮಿಸಿದ ಅವರು ಮಧುಗಿರಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಬೆಂಬಲಿಗರ ಸಭೆ ನಡೆಸಿ, ಮುಂದಿನ ನಡೆ ಬಗ್ಗೆ ಚರ್ಚಿಸಿದರು.<br /> <br /> <strong>ಮತದಾನ ಜಾಗೃತಿ ಸಭೆ<br /> ತುಮಕೂರು:</strong> ಮಾದಿಗ ಸಮುದಾಯ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಸಾಮಾಜಿಕ ನ್ಯಾಯ ಕಾಪಾಡುವಂತಹ ವ್ಯಕ್ತಿಗೆ ಮತ ಹಾಕಬೇಕೆಂದು ಡಿಎಸ್ಎಸ್ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಎನ್.ರಾಮಯ್ಯ ಹೇಳಿದರು.<br /> <br /> ನಗರದಲ್ಲಿ ಈಚೆಗೆ ನಡೆದ ರಾಜಕೀಯ ಸವಾಲು ಮತ್ತು ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಇದುವರೆಗೆ ಮಾದಿಗ ಸಮುದಾಯವನ್ನು ರಾಜಕಾರಣಿಗಳು ಕಡೆಗಣಿಸುತ್ತಾ ಬಂದಿದ್ದಾರೆ. ಈಗಲಾದರೂ ಸಮುದಾಯದ ಅಭಿವೃದ್ಧಿಗೆ ಶ್ರಮಿಸುವಂತಹ ವ್ಯಕ್ತಿಗೆ ಮತ ನೀಡಬೇಕು ಎಂದರು.<br /> <br /> ಮುಖಂಡರಾದ ಗಂಗಣ್ಣ, ಎ.ನಾಗೇಶ್್, ಎ.ಕೃಷ್ಣಮೂರ್ತಿ, ಮಂಜುನಾಥ್್, ಚಂದ್ರಶೇಖರ್, ಭೀಮಣ್ಣ, ಮಂಜುನಾಥ್, ಮದ್ಲಟಪ್ಪ, ಲಕ್ಷ್ಮೀನರಸಯ್ಯ, ಗೋವಿಂದರಾಜ್ ಇತರರು ಭಾಗವಹಿಸಿದ್ದರು.<br /> <br /> <strong>ಬಿ ಫಾರಂಗೆ ಹಣ</strong><br /> ಬಿ ಫಾರಂ ನೀಡಲು ಅಭ್ಯರ್ಥಿಗಳಿಂದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ₨ 10ರಿಂದ 20 ಕೋಟಿ ಹಣ ವಸೂಲಿ ಮಾಡುತ್ತಿವೆ ಎಂದು ಬಿಎಸ್ಪಿಯ ಮಾರಸಂದ್ರ ಮುನಿಯಪ್ಪ ಆರೋಪಿಸಿದರು.<br /> <br /> ರಾಷ್ಟ್ರೀಯ ಪಕ್ಷಗಳ ಸಾಧನೆ ಏನೆಂಬುದು ಜನರಿಗೆ ಮನವರಿಕೆ ಆಗಿದೆ. ಭ್ರಷ್ಟಾಚಾರ, ಸ್ವಜನಪಕ್ಷಪಾತ ತುಂಬಿರುವ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ಬಗ್ಗೆ ಜನರಲ್ಲಿ ತಿರಸ್ಕಾರ ಮನೋಭಾವವಿದೆ. ಭ್ರಷ್ಟಾಚಾರ, ಗಣಿ ಅಕ್ರಮ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಆಮ್ ಆದ್ಮಿ ಪಕ್ಷದ ನಿಯೋಜಿತ ಅಭ್ಯರ್ಥಿ ಎ.ಎಸ್.ಡಿಸಿಲ್ವಾ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.<br /> <br /> ಡಿಸಿಲ್ವಾ ಅವರಿಗೆ ಪಕ್ಷದ ಟಿಕೆಟ್ ಘೋಷಣೆಯಾದ ನಂತರ ನಗರಕ್ಕೆ ಆಗಮಿಸಿದ ಅವರು ಮಧುಗಿರಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಬೆಂಬಲಿಗರ ಸಭೆ ನಡೆಸಿ, ಮುಂದಿನ ನಡೆ ಬಗ್ಗೆ ಚರ್ಚಿಸಿದರು.<br /> <br /> <strong>ಮತದಾನ ಜಾಗೃತಿ ಸಭೆ<br /> ತುಮಕೂರು:</strong> ಮಾದಿಗ ಸಮುದಾಯ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಸಾಮಾಜಿಕ ನ್ಯಾಯ ಕಾಪಾಡುವಂತಹ ವ್ಯಕ್ತಿಗೆ ಮತ ಹಾಕಬೇಕೆಂದು ಡಿಎಸ್ಎಸ್ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಎನ್.ರಾಮಯ್ಯ ಹೇಳಿದರು.<br /> <br /> ನಗರದಲ್ಲಿ ಈಚೆಗೆ ನಡೆದ ರಾಜಕೀಯ ಸವಾಲು ಮತ್ತು ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಇದುವರೆಗೆ ಮಾದಿಗ ಸಮುದಾಯವನ್ನು ರಾಜಕಾರಣಿಗಳು ಕಡೆಗಣಿಸುತ್ತಾ ಬಂದಿದ್ದಾರೆ. ಈಗಲಾದರೂ ಸಮುದಾಯದ ಅಭಿವೃದ್ಧಿಗೆ ಶ್ರಮಿಸುವಂತಹ ವ್ಯಕ್ತಿಗೆ ಮತ ನೀಡಬೇಕು ಎಂದರು.<br /> <br /> ಮುಖಂಡರಾದ ಗಂಗಣ್ಣ, ಎ.ನಾಗೇಶ್್, ಎ.ಕೃಷ್ಣಮೂರ್ತಿ, ಮಂಜುನಾಥ್್, ಚಂದ್ರಶೇಖರ್, ಭೀಮಣ್ಣ, ಮಂಜುನಾಥ್, ಮದ್ಲಟಪ್ಪ, ಲಕ್ಷ್ಮೀನರಸಯ್ಯ, ಗೋವಿಂದರಾಜ್ ಇತರರು ಭಾಗವಹಿಸಿದ್ದರು.<br /> <br /> <strong>ಬಿ ಫಾರಂಗೆ ಹಣ</strong><br /> ಬಿ ಫಾರಂ ನೀಡಲು ಅಭ್ಯರ್ಥಿಗಳಿಂದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ₨ 10ರಿಂದ 20 ಕೋಟಿ ಹಣ ವಸೂಲಿ ಮಾಡುತ್ತಿವೆ ಎಂದು ಬಿಎಸ್ಪಿಯ ಮಾರಸಂದ್ರ ಮುನಿಯಪ್ಪ ಆರೋಪಿಸಿದರು.<br /> <br /> ರಾಷ್ಟ್ರೀಯ ಪಕ್ಷಗಳ ಸಾಧನೆ ಏನೆಂಬುದು ಜನರಿಗೆ ಮನವರಿಕೆ ಆಗಿದೆ. ಭ್ರಷ್ಟಾಚಾರ, ಸ್ವಜನಪಕ್ಷಪಾತ ತುಂಬಿರುವ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ಬಗ್ಗೆ ಜನರಲ್ಲಿ ತಿರಸ್ಕಾರ ಮನೋಭಾವವಿದೆ. ಭ್ರಷ್ಟಾಚಾರ, ಗಣಿ ಅಕ್ರಮ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>