<p><strong>ದಾವಣಗೆರೆ: </strong>ಜಿಲ್ಲಾ ಬಿಎಸ್ಆರ್ ಕಾಂಗ್ರೆಸ್ ಘಟಕ ಮಾರ್ಚ್ 24ರಂದು ಬಿಜೆಪಿಯಲ್ಲಿ ವಿಲೀನಗೊಳ್ಳಲಿದೆ ಎಂದು ಬಿಎಸ್ಆರ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಮಲ್ಲೇಶ್ ತಿಳಿಸಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ನರೇಂದ್ರ ಮೋದಿ ಅವರನ್ನು ಈ ದೇಶದ ಪ್ರಧಾನಿ ಮಾಡಬೇಕು ಎಂಬ ಉದ್ದೇಶದಿಂದ ಬಿಎಸ್ಆರ್ ಕಾಂಗ್ರೆಸ್ ಸಂಸ್ಥಾಪಕ ಶ್ರೀ ರಾಮುಲು ಬಿಜೆಪಿಗೆ ಸೇರಿದ್ದಾರೆ. ಅವರ ಆದೇಶದಂತೆ ಜಿಲ್ಲಾ ಬಿಎಸ್ಆರ್ ಕಾಂಗ್ರೆಸ್ನ ಕಾರ್ಯಕರ್ತರು, ಪದಾಧಿಕಾರಿಗಳು ಬಿಜೆಪಿಗೆ ಸೇರುತ್ತೇವೆ ಎಂದು ಅವರು ತಿಳಿಸಿದರು.<br /> <br /> ವಿಲೀನ ಪ್ರಕ್ರಿಯೆಯಿಂದ ಜಿಲ್ಲಾಮಟ್ಟದಲ್ಲಿ ಬಿಜೆಪಿ ಮತ್ತಷ್ಟು ಬಲಗೊಳ್ಳಲಿದೆ. ಹಾಗಾಗಿ ಮಾರ್ಚ್ 24 ರಂದು ಜಿಲ್ಲಾ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಬಿಎಸ್ಆರ್ ಕಾಂಗ್ರೆಸ್ ಕಾರ್ಯಕರ್ತರು ಸೇರ್ಪಡೆಯಾಗಲಿದ್ದೇವೆ ಅವರು ಎಂದು ತಿಳಿಸಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ರವಿಕುಮಾರ್, ಕುಮಾರಿ ಮುಂತಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಜಿಲ್ಲಾ ಬಿಎಸ್ಆರ್ ಕಾಂಗ್ರೆಸ್ ಘಟಕ ಮಾರ್ಚ್ 24ರಂದು ಬಿಜೆಪಿಯಲ್ಲಿ ವಿಲೀನಗೊಳ್ಳಲಿದೆ ಎಂದು ಬಿಎಸ್ಆರ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಮಲ್ಲೇಶ್ ತಿಳಿಸಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ನರೇಂದ್ರ ಮೋದಿ ಅವರನ್ನು ಈ ದೇಶದ ಪ್ರಧಾನಿ ಮಾಡಬೇಕು ಎಂಬ ಉದ್ದೇಶದಿಂದ ಬಿಎಸ್ಆರ್ ಕಾಂಗ್ರೆಸ್ ಸಂಸ್ಥಾಪಕ ಶ್ರೀ ರಾಮುಲು ಬಿಜೆಪಿಗೆ ಸೇರಿದ್ದಾರೆ. ಅವರ ಆದೇಶದಂತೆ ಜಿಲ್ಲಾ ಬಿಎಸ್ಆರ್ ಕಾಂಗ್ರೆಸ್ನ ಕಾರ್ಯಕರ್ತರು, ಪದಾಧಿಕಾರಿಗಳು ಬಿಜೆಪಿಗೆ ಸೇರುತ್ತೇವೆ ಎಂದು ಅವರು ತಿಳಿಸಿದರು.<br /> <br /> ವಿಲೀನ ಪ್ರಕ್ರಿಯೆಯಿಂದ ಜಿಲ್ಲಾಮಟ್ಟದಲ್ಲಿ ಬಿಜೆಪಿ ಮತ್ತಷ್ಟು ಬಲಗೊಳ್ಳಲಿದೆ. ಹಾಗಾಗಿ ಮಾರ್ಚ್ 24 ರಂದು ಜಿಲ್ಲಾ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಬಿಎಸ್ಆರ್ ಕಾಂಗ್ರೆಸ್ ಕಾರ್ಯಕರ್ತರು ಸೇರ್ಪಡೆಯಾಗಲಿದ್ದೇವೆ ಅವರು ಎಂದು ತಿಳಿಸಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ರವಿಕುಮಾರ್, ಕುಮಾರಿ ಮುಂತಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>