ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

24, 25ರಂದು ನಗರಕ್ಕೆ ನೀರಿಲ್ಲ

Last Updated 18 ಸೆಪ್ಟೆಂಬರ್ 2013, 19:42 IST
ಅಕ್ಷರ ಗಾತ್ರ

ಬೆಂಗಳೂರು: ಕಾವೇರಿ ನೀರು ಪೂರೈಕೆ ಯೋಜನೆಗೆ ಸಂಬಂಧಿಸಿ­ದಂತೆ ವಿವಿಧ ವಿದ್ಯುತ್ ಕಾಮಗಾರಿ­ಗಳು ನಡೆಯಲಿರುವ ಹಿನ್ನೆಲೆಯಲ್ಲಿ ಇದೇ 24ರಂದು ಕಾವೇರಿ ಎಲ್ಲಾ ಹಂತದ ನೀರು ಪೂರೈಕೆ ಯೋಜನೆ­ಗಳು ಆರು ಗಂಟೆಗಳ ಕಾಲ ಕಾರ್ಯಾಚರಣೆ ಸ್ಥಗಿತಗೊಳಿಸ­ಲಿವೆ. ಇದರಿಂದಾಗಿ 24ರ ಮಧ್ಯಾಹ್ನ ಹಾಗೂ 25ರಂದು ನಗರದಾದ್ಯಂತ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಕಾವೇರಿ 4ನೇ ಹಂತ 2ನೇ ಘಟ್ಟದ ಯೋಜನೆಗೆ ಅಗತ್ಯವಾದ ವಿದ್ಯುತ್ ಪೂರೈಸುವ ಸಲುವಾಗಿ ಹಾರೋಹಳ್ಳಿಯ ಬಳಿ 66/11 ಕೆ.ವಿ.ಯ ಎರಡು ಟ್ರಾನ್ಸ್‌­ಫಾರ್ಮರ್‌ಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿತ್ತು. ಇದರಲ್ಲಿ ಒಂದು ಮಾತ್ರ ಅಳವಡಿಕೆಯಾಗಿದ್ದು, ಎರಡನೇ ಟ್ರಾನ್ಸ್‌ಫಾರ್ಮರ್‌ ಅಳವಡಿಸಬೇಕಿದೆ.

ಅದೇ ರೀತಿ ಹಾರೋಹಳ್ಳಿ ಬಳಿ ಕಾವೇರಿ ನಾಲ್ಕನೇ ಹಂತ 2ನೇ ಘಟ್ಟದ ಯೋಜನೆಗೆ ಕೆಪಿಟಿಸಿಎಲ್‌ನ 220 ಕೆವಿ ಮಾರ್ಗದಿಂದ ಪಡೆಯಲಾಗಿರುವ ಸಂಪರ್ಕ  ಸ್ಥಗಿತಗೊಳಿಸಿ ಹೊಸದಾಗಿ  ಸ್ಥಾಪಿಸಲಾಗಿರುವ 220 ಕೆ. ವಿ.ಯ ಜಾಲಕ್ಕೆ ಸಂಪರ್ಕಿಸಬೇಕಿದೆ.

ತಾತಗುಣಿಯಲ್ಲಿ ಕಾವೇರಿ 1,2 ಮತ್ತು 3ನೇ ಹಂತದ ಯೋಜನೆಯ ಓವರ್ ಹೆಡ್ ಮಾರ್ಗಗಳನ್ನು 66 ಕೆ. ವಿ,  ಯು. ಜಿ ಕೇಬಲ್ ಮಾರ್ಗಕ್ಕೆ ಸಂಪರ್ಕಿಸುವಕಾರ್ಯ ಕೈಗೊಳ್ಳಬೇಕಾಗಿದ್ದು  ಈ ಎಲ್ಲ ಉದ್ದೇಶಗಳಿಗಾಗಿ 6 ಗಂಟೆಗಳ ಕಾಲ ನೀರು ಪೂರೈಕೆ ಸ್ಥಗಿತ ಮಾಡ­ಲಾಗು­ವುದು. ಸಾರ್ವಜನಿಕರು ಸಹಕರಿಸಬೇಕು ಎಂದು ಜಲಮಂಡಳಿ ವಿನಂತಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT