<p><strong>ಬೆಂಗಳೂರು:</strong> ನಗರ, ಪಟ್ಟಣಗಳಲ್ಲಿ 24x7 (ಹಗಲಿರುಳೂ) ನೀರು ಪೂರೈಸುವ ಯೋಜನೆಗೆ ಕೇಂದ್ರ ಸರ್ಕಾರ ರೂ 7000 ಕೋಟಿ ಮಂಜೂರು ಮಾಡಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಚಾವ್ಲಾ ತಿಳಿಸಿದರು.<br /> <br /> ಗುರುವಾರ ವಿಧಾನಸೌಧದಲ್ಲಿ ನಡೆದ ‘ನಗರಾಡಳಿತದಲ್ಲಿನ ನವೀನ ಅಂಶಗಳು’ ಕುರಿತ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಈ ಅನುದಾನದಲ್ಲಿ 40 ಯೋಜನೆಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ. ಆರಂಭದಲ್ಲಿ ಮೈಸೂರು, ಹುಬ್ಬಳ್ಳಿ–ಧಾರವಾಡ, ಗುಲ್ಬರ್ಗ ಮತ್ತು ಬೆಳಗಾವಿಯಲ್ಲಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.<br /> <br /> ಕೆಲವು ಪಟ್ಟಭದ್ರ ಹಿತಾಸಕ್ತಿಗಳಿಗೆ 24x7 ನೀರು ಪೂರೈಸುವುದು ಬೇಡವಾಗಿದೆ. 24x7 ನೀರು ಪೂರೈಸುವುದು ಸಮಸ್ಯೆಯೇ ಅಲ್ಲ. ತಂತ್ರಜ್ಞಾನದ ಸಮಸ್ಯೆಯೂ ಇಲ್ಲ. ಆದರೆ, ಅಸಮರ್ಥ ಅಧಿಕಾರಿಗಳು, ಭ್ರಷ್ಟಾಚಾರ ಮತ್ತು ಕೆಲವು ಕ್ರಿಮಿನಲ್ ಜನರಿಂದ ಈ ಯೋಜನೆ ಕುಂಠಿತವಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.<br /> <br /> <strong>ನೀರು ಸರಬರಾಜು ದಂಧೆ: </strong>ಸ್ಥಳೀಯ ಸಂಸ್ಥೆಗಳ ಹಲವು ಜನಪ್ರತಿನಿಧಿಗಳು ಕೊಳವೆಬಾವಿ ಮತ್ತು ಟ್ಯಾಂಕರ್ಗಳ ಮೂಲಕ ನೀರು ಪೂರೈಸುವ ದಂಧೆ ನಡೆಸುತ್ತಿದ್ದಾರೆ. ಅವರಿಗೆ ತಮ್ಮ ಹಿತಾಸಕ್ತಿ ಕಾಪಾಡಿಕೊಳ್ಳುವುದೇ ಮುಖ್ಯವಾಗಿದೆ. ಅಧಿಕಾರಿಗಳು ಇಂತಹವರನ್ನು ಎದುರಿಸಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮುಂದಾಗಬೇಕು ಎಂದು ರಾಜೀವ್ ಚಾವ್ಲಾ ಹೇಳಿದರು.<br /> <br /> <strong>4200 ಹುದ್ದೆಗಳ ಭರ್ತಿ</strong></p>.<p>ನಗರಾಭಿವೃದ್ಧಿ ಇಲಾಖೆಯಲ್ಲಿ 4200 ಹುದ್ದೆಗಳನ್ನು ಭರ್ತಿ ಮಾಡಲು ಚಾಲನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ವಿನಯ್ ಕುಮಾರ್ ಸೊರಕೆ ತಿಳಿಸಿದರು.<br /> <br /> ನಗರಾಭಿವೃದ್ಧಿ ಇಲಾಖೆಯ ಯೋಜನೆ ಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಲು ಭೂಬ್ಯಾಂಕ್ ಸ್ಥಾಪಿಸಲು ನಿರ್ಧರಿಸಲಾಗಿದ್ದು, ಮುಖ್ಯಮಂತ್ರಿಗಳು ಇದಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದರು. ಪೌರಾಡಳಿತ ಸಚಿವ ಖಮರುಲ್ ಇಸ್ಲಾಂ, ಪೌರಾಡಳಿತ ನಿರ್ದೇಶಕಿ ಡಾ.ಎನ್. ಮಂಜುಳಾ ಉಪಸ್ಥಿತರಿದ್ದರು.<br /> <br /> <strong>ರಕ್ತ ಕುಡಿಯುತ್ತೀರಿ!</strong><br /> ‘ಯೋಜನೆಗಳ ಯಶಸ್ವಿಗೆ ಅಧಿಕಾರಿಗಳು ಬೆವರು ಮತ್ತು ರಕ್ತ ಹಾಕಬೇಕು. ಆದರೆ, ನೀವು ರಕ್ತ ಮಾತ್ರ ಕುಡಿಯುತ್ತೀರಿ’ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಚಾವ್ಲಾ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.<br /> <br /> ‘ಸ್ಥಳೀಯ ಸಂಸ್ಥೆಗಳು ನೀರಿನ ದರವನ್ನು ಪರಿಷ್ಕರಿಸಬೇಕು ಮತ್ತು ಪೋಲು ತಡೆಯಲು ನೀರಿನ ಲೆಕ್ಕಪತ್ರ ಮಾಡಿಸಬೇಕು. ಅಪಾರ ಪ್ರಮಾಣದಲ್ಲಿ ನೀರು ಬಳಕೆ ಮಾಡುವವರಿಗೆ ಪ್ರೋತ್ಸಾಹ ನೀಡಬಾರದು’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರ, ಪಟ್ಟಣಗಳಲ್ಲಿ 24x7 (ಹಗಲಿರುಳೂ) ನೀರು ಪೂರೈಸುವ ಯೋಜನೆಗೆ ಕೇಂದ್ರ ಸರ್ಕಾರ ರೂ 7000 ಕೋಟಿ ಮಂಜೂರು ಮಾಡಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಚಾವ್ಲಾ ತಿಳಿಸಿದರು.<br /> <br /> ಗುರುವಾರ ವಿಧಾನಸೌಧದಲ್ಲಿ ನಡೆದ ‘ನಗರಾಡಳಿತದಲ್ಲಿನ ನವೀನ ಅಂಶಗಳು’ ಕುರಿತ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಈ ಅನುದಾನದಲ್ಲಿ 40 ಯೋಜನೆಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ. ಆರಂಭದಲ್ಲಿ ಮೈಸೂರು, ಹುಬ್ಬಳ್ಳಿ–ಧಾರವಾಡ, ಗುಲ್ಬರ್ಗ ಮತ್ತು ಬೆಳಗಾವಿಯಲ್ಲಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.<br /> <br /> ಕೆಲವು ಪಟ್ಟಭದ್ರ ಹಿತಾಸಕ್ತಿಗಳಿಗೆ 24x7 ನೀರು ಪೂರೈಸುವುದು ಬೇಡವಾಗಿದೆ. 24x7 ನೀರು ಪೂರೈಸುವುದು ಸಮಸ್ಯೆಯೇ ಅಲ್ಲ. ತಂತ್ರಜ್ಞಾನದ ಸಮಸ್ಯೆಯೂ ಇಲ್ಲ. ಆದರೆ, ಅಸಮರ್ಥ ಅಧಿಕಾರಿಗಳು, ಭ್ರಷ್ಟಾಚಾರ ಮತ್ತು ಕೆಲವು ಕ್ರಿಮಿನಲ್ ಜನರಿಂದ ಈ ಯೋಜನೆ ಕುಂಠಿತವಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.<br /> <br /> <strong>ನೀರು ಸರಬರಾಜು ದಂಧೆ: </strong>ಸ್ಥಳೀಯ ಸಂಸ್ಥೆಗಳ ಹಲವು ಜನಪ್ರತಿನಿಧಿಗಳು ಕೊಳವೆಬಾವಿ ಮತ್ತು ಟ್ಯಾಂಕರ್ಗಳ ಮೂಲಕ ನೀರು ಪೂರೈಸುವ ದಂಧೆ ನಡೆಸುತ್ತಿದ್ದಾರೆ. ಅವರಿಗೆ ತಮ್ಮ ಹಿತಾಸಕ್ತಿ ಕಾಪಾಡಿಕೊಳ್ಳುವುದೇ ಮುಖ್ಯವಾಗಿದೆ. ಅಧಿಕಾರಿಗಳು ಇಂತಹವರನ್ನು ಎದುರಿಸಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮುಂದಾಗಬೇಕು ಎಂದು ರಾಜೀವ್ ಚಾವ್ಲಾ ಹೇಳಿದರು.<br /> <br /> <strong>4200 ಹುದ್ದೆಗಳ ಭರ್ತಿ</strong></p>.<p>ನಗರಾಭಿವೃದ್ಧಿ ಇಲಾಖೆಯಲ್ಲಿ 4200 ಹುದ್ದೆಗಳನ್ನು ಭರ್ತಿ ಮಾಡಲು ಚಾಲನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ವಿನಯ್ ಕುಮಾರ್ ಸೊರಕೆ ತಿಳಿಸಿದರು.<br /> <br /> ನಗರಾಭಿವೃದ್ಧಿ ಇಲಾಖೆಯ ಯೋಜನೆ ಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಲು ಭೂಬ್ಯಾಂಕ್ ಸ್ಥಾಪಿಸಲು ನಿರ್ಧರಿಸಲಾಗಿದ್ದು, ಮುಖ್ಯಮಂತ್ರಿಗಳು ಇದಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದರು. ಪೌರಾಡಳಿತ ಸಚಿವ ಖಮರುಲ್ ಇಸ್ಲಾಂ, ಪೌರಾಡಳಿತ ನಿರ್ದೇಶಕಿ ಡಾ.ಎನ್. ಮಂಜುಳಾ ಉಪಸ್ಥಿತರಿದ್ದರು.<br /> <br /> <strong>ರಕ್ತ ಕುಡಿಯುತ್ತೀರಿ!</strong><br /> ‘ಯೋಜನೆಗಳ ಯಶಸ್ವಿಗೆ ಅಧಿಕಾರಿಗಳು ಬೆವರು ಮತ್ತು ರಕ್ತ ಹಾಕಬೇಕು. ಆದರೆ, ನೀವು ರಕ್ತ ಮಾತ್ರ ಕುಡಿಯುತ್ತೀರಿ’ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಚಾವ್ಲಾ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.<br /> <br /> ‘ಸ್ಥಳೀಯ ಸಂಸ್ಥೆಗಳು ನೀರಿನ ದರವನ್ನು ಪರಿಷ್ಕರಿಸಬೇಕು ಮತ್ತು ಪೋಲು ತಡೆಯಲು ನೀರಿನ ಲೆಕ್ಕಪತ್ರ ಮಾಡಿಸಬೇಕು. ಅಪಾರ ಪ್ರಮಾಣದಲ್ಲಿ ನೀರು ಬಳಕೆ ಮಾಡುವವರಿಗೆ ಪ್ರೋತ್ಸಾಹ ನೀಡಬಾರದು’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>