<p><strong>ದಾವಣಗೆರೆ:</strong> ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ವೆಂಕಟೇಶ್ವರಪುರದಲ್ಲಿ ಸೆ. 25ರಂದು ಚನ್ನಗಿರಿ ತಾಲ್ಲೂಕುಮಟ್ಟದ 13ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸದಾಶಿವಪ್ಪ ಶ್ಯಾಗಲೆ ತಿಳಿಸಿದರು.<br /> <br /> ಅಂದು ಬೆಳಿಗ್ಗೆ 10.30ಕ್ಕೆ ಸಮ್ಮೇಳನವನ್ನು ಸಚಿವ ಎಸ್.ಎ. ರವೀಂದ್ರನಾಥ್ ಉದ್ಘಾಟಿಸುವರು. ಸಮ್ಮೇಳನದಲ್ಲಿ ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ, ಬಸವರಾಜ ನಾಯ್ಕ ಮತ್ತಿತರರ ಗಣ್ಯರುಪಾಲ್ಗೊಳ್ಳುವರು ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.<br /> <br /> ರಾಜ್ಯದಲ್ಲಿ ಉಡುಪಿ ಹಾಗೂ ಒಂದೆರೆಡು ಜಿಲ್ಲೆಗಳನ್ನು ಹೊರತುಪಡಿಸಿ, ದಾವಣಗೆರೆ ಜಿಲ್ಲಾ ಕಸಾಪ ಅದ್ಭುತವಾಗಿ ಕಾರ್ಯ ನಿರ್ವಹಿಸುತ್ತಿದೆ. ತಾಲ್ಲೂಕುಮಟ್ಟದಲ್ಲಿ 13ನೇ ಸಮ್ಮೇಳನ ನಡೆಸುತ್ತಿರುವುದು ಕಸಾಪಕ್ಕೆ ಹೆಮ್ಮೆಯ ಸಂಗತಿ ಎಂದರು.<br /> <br /> ಜಿಲ್ಲೆಯಲ್ಲಿ ನಿರ್ಮಿಸಲಾಗುತ್ತಿರುವ `ಕನ್ನಡಭವನ~ದ ಕೆಲ ಕಾಮಗಾರಿ ಮುಕ್ತಾಯಗೊಂಡಿದ್ದು, ನವೆಂಬರ್ ಮೊದಲ ವಾರದಲ್ಲಿ ಭವನದ ನೆಲಮಾಳಿಗೆ ಸಭಾಂಗಣ, ಕಚೇರಿ, ಗ್ರಂಥಾಲಯ, ವಾಚನಾಲಯ ಉದ್ಘಾಟಿಸಲಾಗುವುದು. ಭವನಕ್ಕೆ ಇದುವರೆಗೆ ರೂ90ಲಕ್ಷ ಖರ್ಚಾಗಿದೆ. ್ಙ 50ಲಕ್ಷ ಅನುದಾನ ಬರಬೇಕಾಗಿದೆ ಎಂದು ಸದಾಶಿವಪ್ಪ ವಿವರಿಸಿದರು.<br /> <br /> ಜಿಲ್ಲೆಯ ಹೊನ್ನಾಳಿ, ಜಗಳೂರು ಕಸಾಪ ಘಟಕಗಳು ಅಸಹಕಾರ ನೀಡುತ್ತಿದ್ದು, ಆ ಭಾಗದಲ್ಲಿ ಸಾಹಿತ್ಯಕ ಚಟುವಟಿಕೆ ಕೈಗೊಳ್ಳಲಾಗುತ್ತಿಲ್ಲ. ಆದರೆ, ಜಿಲ್ಲೆಯ ಇತರ ಕಸಾಪ ಘಟಕಗಳು ತಮಗೆ ಬೆಂಬಲ, ಸಹಕಾರ ನೀಡುತ್ತಿರುವುದರಿಂದ ಜಿಲ್ಲಾ ಕಸಾಪ ರಾಜ್ಯಮಟ್ಟದಲ್ಲಿ ಉತ್ತಮ ಹೆಸರು ಗಳಿಸಿದೆ ಎಂದು ಸ್ಪಷ್ಟಪಡಿಸಿದರು.<br /> <br /> ಚನ್ನಗಿರಿ ತಾಲ್ಲೂಕು ಕಸಾಪ ಅಧ್ಯಕ್ಷ ಎಸ್. ಶಂಕರಪ್ಪ ಮಾತನಾಡಿ, ಸುಮಾರು ರೂ5ಲಕ್ಷ ವೆಚ್ಚದಲ್ಲಿ ಸಮ್ಮೇಳನ ಆಯೋಜಿಸಲಾಗಿದೆ. ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಸಮ್ಮೇಳನ ಯಶಸ್ವಿಗೊಳಿಸಬೇಕು ಎಂದು ಕೋರಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಬಿ. ವಾಮದೇವಪ್ಪ, ಎಲ್. ನಾಗರಾಜು, ಸಾಲಿಗ್ರಾಮ ಗಣೇಶ ಶೆಣೈ, ರಾಮಚಂದ್ರಪ್ಪ, ಕೆ.ಸಿ. ರುದ್ರಪ್ಪ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ವೆಂಕಟೇಶ್ವರಪುರದಲ್ಲಿ ಸೆ. 25ರಂದು ಚನ್ನಗಿರಿ ತಾಲ್ಲೂಕುಮಟ್ಟದ 13ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸದಾಶಿವಪ್ಪ ಶ್ಯಾಗಲೆ ತಿಳಿಸಿದರು.<br /> <br /> ಅಂದು ಬೆಳಿಗ್ಗೆ 10.30ಕ್ಕೆ ಸಮ್ಮೇಳನವನ್ನು ಸಚಿವ ಎಸ್.ಎ. ರವೀಂದ್ರನಾಥ್ ಉದ್ಘಾಟಿಸುವರು. ಸಮ್ಮೇಳನದಲ್ಲಿ ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ, ಬಸವರಾಜ ನಾಯ್ಕ ಮತ್ತಿತರರ ಗಣ್ಯರುಪಾಲ್ಗೊಳ್ಳುವರು ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.<br /> <br /> ರಾಜ್ಯದಲ್ಲಿ ಉಡುಪಿ ಹಾಗೂ ಒಂದೆರೆಡು ಜಿಲ್ಲೆಗಳನ್ನು ಹೊರತುಪಡಿಸಿ, ದಾವಣಗೆರೆ ಜಿಲ್ಲಾ ಕಸಾಪ ಅದ್ಭುತವಾಗಿ ಕಾರ್ಯ ನಿರ್ವಹಿಸುತ್ತಿದೆ. ತಾಲ್ಲೂಕುಮಟ್ಟದಲ್ಲಿ 13ನೇ ಸಮ್ಮೇಳನ ನಡೆಸುತ್ತಿರುವುದು ಕಸಾಪಕ್ಕೆ ಹೆಮ್ಮೆಯ ಸಂಗತಿ ಎಂದರು.<br /> <br /> ಜಿಲ್ಲೆಯಲ್ಲಿ ನಿರ್ಮಿಸಲಾಗುತ್ತಿರುವ `ಕನ್ನಡಭವನ~ದ ಕೆಲ ಕಾಮಗಾರಿ ಮುಕ್ತಾಯಗೊಂಡಿದ್ದು, ನವೆಂಬರ್ ಮೊದಲ ವಾರದಲ್ಲಿ ಭವನದ ನೆಲಮಾಳಿಗೆ ಸಭಾಂಗಣ, ಕಚೇರಿ, ಗ್ರಂಥಾಲಯ, ವಾಚನಾಲಯ ಉದ್ಘಾಟಿಸಲಾಗುವುದು. ಭವನಕ್ಕೆ ಇದುವರೆಗೆ ರೂ90ಲಕ್ಷ ಖರ್ಚಾಗಿದೆ. ್ಙ 50ಲಕ್ಷ ಅನುದಾನ ಬರಬೇಕಾಗಿದೆ ಎಂದು ಸದಾಶಿವಪ್ಪ ವಿವರಿಸಿದರು.<br /> <br /> ಜಿಲ್ಲೆಯ ಹೊನ್ನಾಳಿ, ಜಗಳೂರು ಕಸಾಪ ಘಟಕಗಳು ಅಸಹಕಾರ ನೀಡುತ್ತಿದ್ದು, ಆ ಭಾಗದಲ್ಲಿ ಸಾಹಿತ್ಯಕ ಚಟುವಟಿಕೆ ಕೈಗೊಳ್ಳಲಾಗುತ್ತಿಲ್ಲ. ಆದರೆ, ಜಿಲ್ಲೆಯ ಇತರ ಕಸಾಪ ಘಟಕಗಳು ತಮಗೆ ಬೆಂಬಲ, ಸಹಕಾರ ನೀಡುತ್ತಿರುವುದರಿಂದ ಜಿಲ್ಲಾ ಕಸಾಪ ರಾಜ್ಯಮಟ್ಟದಲ್ಲಿ ಉತ್ತಮ ಹೆಸರು ಗಳಿಸಿದೆ ಎಂದು ಸ್ಪಷ್ಟಪಡಿಸಿದರು.<br /> <br /> ಚನ್ನಗಿರಿ ತಾಲ್ಲೂಕು ಕಸಾಪ ಅಧ್ಯಕ್ಷ ಎಸ್. ಶಂಕರಪ್ಪ ಮಾತನಾಡಿ, ಸುಮಾರು ರೂ5ಲಕ್ಷ ವೆಚ್ಚದಲ್ಲಿ ಸಮ್ಮೇಳನ ಆಯೋಜಿಸಲಾಗಿದೆ. ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಸಮ್ಮೇಳನ ಯಶಸ್ವಿಗೊಳಿಸಬೇಕು ಎಂದು ಕೋರಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಬಿ. ವಾಮದೇವಪ್ಪ, ಎಲ್. ನಾಗರಾಜು, ಸಾಲಿಗ್ರಾಮ ಗಣೇಶ ಶೆಣೈ, ರಾಮಚಂದ್ರಪ್ಪ, ಕೆ.ಸಿ. ರುದ್ರಪ್ಪ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>