<p>ಚಳ್ಳಕೆರೆ: ಸಮಾಜ ಕಲ್ಯಾಣ ಸಚಿವ ಎ. ನಾರಾಯಣ ಸ್ವಾಮಿ ಅವರನ್ನು ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕ ತಿಪ್ಪೇಸ್ವಾಮಿ ಅವರ ವಿರುದ್ಧ ಆ. 25ರಂದು ಮಾದಿಗ ಸಮುದಾಯ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.<br /> <br /> ತಾಲ್ಲೂಕು ಪತ್ರಕರ್ತರ ಸಂಘದಿಂದ ಈಚೆಗೆ ಹಮ್ಮಿಕೊಂಡಿದ್ದ ಜಿಲ್ಲಾ ಪತ್ರಕರ್ತರ ಸಮ್ಮೇಳನಕ್ಕೆ ಆಗಮಿಸಿದ ವೇಳೆ ಶಾಸಕರು, ಸಚಿವರನ್ನು ನಿಂದಿಸಿದ್ದರು ಎಂದು ಮುಖಂಡ ಎಂ. ಶಿವಮೂರ್ತಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. <br /> <br /> ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕರು ಇಡೀ ಪರಿಶಿಷ್ಟ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಆದ್ದರಿಂದ, ಶಾಸಕರ ನಿಂದನೆ ಖಂಡಿಸಿ ಪ್ರತಿಭಟನೆ ಮಾಡಲು ತೀರ್ಮಾನಿಸಲಾಗಿದೆ. ಇದು ಯಾವುದೇ ಜಾತಿಯ ವಿರುದ್ಧದ ಪ್ರತಿಭಟನೆ ಅಲ್ಲ ಎಂದು ಅವರು ಸ್ಪಷ್ಟಪಡಿಸಿದರು.<br /> <br /> ಶಾಸಕರು ಈ ಕೂಡಲೇ ಸಮುದಾಯದ ಕ್ಷಮೆ ಕೇಳಬೇಕು. ಇಲ್ಲವಾದರೆ, ರಾಜ್ಯದಾದ್ಯಂತ ಮತ್ತು ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.<br /> <br /> ಸೂರನಹಳ್ಳಿ ಶ್ರೀನಿವಾಸ್, ದಲಿತ ಸಂಘರ್ಷ ಸಮಿತಿಯ ಸಂಚಾಲಕ ವಿಜಯ್ಕುಮಾರ್, ಮುಖಂಡರಾದ ಮಾರಣ್ಣ, ಆರ್.ಡಿ. ಮಂಜುನಾಥ್, ಸಿ.ಜೆ. ಜಯಕುಮಾರ್, ಮೊರಾರ್ಜಿ, ರುದ್ರಮುನಿ, ನಾಗರಾಜ್, ದೊಡ್ಡೇರಿ ಮಲ್ಲಿಕಾರ್ಜುನ, ಪಾಪಣ್ಣ, ಬೆಳಗೆರೆ ರಮೇಶ್, ಶ್ರೀನಿವಾಸ ಮೂರ್ತಿ, ಹೊನ್ನೂರಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಳ್ಳಕೆರೆ: ಸಮಾಜ ಕಲ್ಯಾಣ ಸಚಿವ ಎ. ನಾರಾಯಣ ಸ್ವಾಮಿ ಅವರನ್ನು ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕ ತಿಪ್ಪೇಸ್ವಾಮಿ ಅವರ ವಿರುದ್ಧ ಆ. 25ರಂದು ಮಾದಿಗ ಸಮುದಾಯ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.<br /> <br /> ತಾಲ್ಲೂಕು ಪತ್ರಕರ್ತರ ಸಂಘದಿಂದ ಈಚೆಗೆ ಹಮ್ಮಿಕೊಂಡಿದ್ದ ಜಿಲ್ಲಾ ಪತ್ರಕರ್ತರ ಸಮ್ಮೇಳನಕ್ಕೆ ಆಗಮಿಸಿದ ವೇಳೆ ಶಾಸಕರು, ಸಚಿವರನ್ನು ನಿಂದಿಸಿದ್ದರು ಎಂದು ಮುಖಂಡ ಎಂ. ಶಿವಮೂರ್ತಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. <br /> <br /> ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕರು ಇಡೀ ಪರಿಶಿಷ್ಟ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಆದ್ದರಿಂದ, ಶಾಸಕರ ನಿಂದನೆ ಖಂಡಿಸಿ ಪ್ರತಿಭಟನೆ ಮಾಡಲು ತೀರ್ಮಾನಿಸಲಾಗಿದೆ. ಇದು ಯಾವುದೇ ಜಾತಿಯ ವಿರುದ್ಧದ ಪ್ರತಿಭಟನೆ ಅಲ್ಲ ಎಂದು ಅವರು ಸ್ಪಷ್ಟಪಡಿಸಿದರು.<br /> <br /> ಶಾಸಕರು ಈ ಕೂಡಲೇ ಸಮುದಾಯದ ಕ್ಷಮೆ ಕೇಳಬೇಕು. ಇಲ್ಲವಾದರೆ, ರಾಜ್ಯದಾದ್ಯಂತ ಮತ್ತು ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.<br /> <br /> ಸೂರನಹಳ್ಳಿ ಶ್ರೀನಿವಾಸ್, ದಲಿತ ಸಂಘರ್ಷ ಸಮಿತಿಯ ಸಂಚಾಲಕ ವಿಜಯ್ಕುಮಾರ್, ಮುಖಂಡರಾದ ಮಾರಣ್ಣ, ಆರ್.ಡಿ. ಮಂಜುನಾಥ್, ಸಿ.ಜೆ. ಜಯಕುಮಾರ್, ಮೊರಾರ್ಜಿ, ರುದ್ರಮುನಿ, ನಾಗರಾಜ್, ದೊಡ್ಡೇರಿ ಮಲ್ಲಿಕಾರ್ಜುನ, ಪಾಪಣ್ಣ, ಬೆಳಗೆರೆ ರಮೇಶ್, ಶ್ರೀನಿವಾಸ ಮೂರ್ತಿ, ಹೊನ್ನೂರಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>