<p><strong>ಶಿವಮೊಗ್ಗ:</strong> ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5 ಕೋಟಿ ರೂ ವೆಚ್ಚದಲ್ಲಿ 20 ರಿಂದ 25 ಕೆರೆಗಳ ಹೂಳು ತೆಗೆಯಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ಇಲ್ಲಿ ತಿಳಿಸಿದರು.<br /> <br /> ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆರೆಗಳ ಹೂಳೆತ್ತುವ ಕಾಮಗಾರಿ ತುರ್ತಾಗಿ ಆಗಬೇಕಾಗಿದ್ದರಿಂದ ಮಳೆಗಾಲ ಆರಂಭವಾಗುವ ಒಳಗೆ ಮುಗಿಸಬೇಕು. ಈ ಕಾಮಗಾರಿಯ ಸಂಪೂರ್ಣ ಉಸ್ತುವಾರಿಯನ್ನು ಆಯಾ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ ಎಂದು ಹೇಳಿದರು.<br /> <br /> ರೇಷ್ಮೆ ಬೆಳೆಗಾರರ ಸಂಕಷ್ಟಕ್ಕೆ ಕೇಂದ್ರ ಸರ್ಕಾರವೇ ಕಾರಣ. ಕೇಂದ್ರ ಸರ್ಕಾರ ತಕ್ಷಣ ರೇಷ್ಮೆ ಆಮದು ನಿಲ್ಲಿಸಬೇಕು ಎಂದು ಆಗ್ರಹಿಸಿದ ಯಡಿಯೂರಪ್ಪ, ಹೈದರಾಬಾದ್- ಕರ್ನಾಟಕ ಪ್ರದೇಶ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಲಂ 371 ತಿದ್ದುಪಡಿಗೆ ಒತ್ತಾಯಿಸುವುದರ ಜತೆಗೆ ಅಡಿಕೆಯೂ ಸೇರಿದಂತೆ ರೇಷ್ಮೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇಂದ್ರಕ್ಕೆ ಮನವರಿಕೆ ಮಾಡಲು ನವದೆಹಲಿಗೆ ಸರ್ವ ಪಕ್ಷದ ನಿಯೋಗ ತೆರಳುವುದಾಗಿ ತಿಳಿಸಿದರು.<br /> <br /> ಒಟ್ಟಾರೆ 10 ಲಕ್ಷ ಸಣ್ಣ, ಅತಿ ಸಣ್ಣ ರೈತರಿಗೆ ನೇರ ಹಣ ನೀಡುವ ಯೋಜನೆಯನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಶೀಘ್ರ ಚಾಲನೆಗೆ ತರಲಾಗುವುದು. ಇದರಲ್ಲಿ 2 ಲಕ್ಷ ಪರಿಶಿಷ್ಟ ಜಾತಿ, ಪಂಗಡದ ರೈತರನ್ನು ಆಯ್ಕೆ ಮಾಡಲಾಗುವುದು. ಇದು ಏಪ್ರಿಲ್ 1ರೊಳಗೆ ಮುಗಿಯಬೇಕೆದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5 ಕೋಟಿ ರೂ ವೆಚ್ಚದಲ್ಲಿ 20 ರಿಂದ 25 ಕೆರೆಗಳ ಹೂಳು ತೆಗೆಯಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ಇಲ್ಲಿ ತಿಳಿಸಿದರು.<br /> <br /> ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆರೆಗಳ ಹೂಳೆತ್ತುವ ಕಾಮಗಾರಿ ತುರ್ತಾಗಿ ಆಗಬೇಕಾಗಿದ್ದರಿಂದ ಮಳೆಗಾಲ ಆರಂಭವಾಗುವ ಒಳಗೆ ಮುಗಿಸಬೇಕು. ಈ ಕಾಮಗಾರಿಯ ಸಂಪೂರ್ಣ ಉಸ್ತುವಾರಿಯನ್ನು ಆಯಾ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ ಎಂದು ಹೇಳಿದರು.<br /> <br /> ರೇಷ್ಮೆ ಬೆಳೆಗಾರರ ಸಂಕಷ್ಟಕ್ಕೆ ಕೇಂದ್ರ ಸರ್ಕಾರವೇ ಕಾರಣ. ಕೇಂದ್ರ ಸರ್ಕಾರ ತಕ್ಷಣ ರೇಷ್ಮೆ ಆಮದು ನಿಲ್ಲಿಸಬೇಕು ಎಂದು ಆಗ್ರಹಿಸಿದ ಯಡಿಯೂರಪ್ಪ, ಹೈದರಾಬಾದ್- ಕರ್ನಾಟಕ ಪ್ರದೇಶ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಲಂ 371 ತಿದ್ದುಪಡಿಗೆ ಒತ್ತಾಯಿಸುವುದರ ಜತೆಗೆ ಅಡಿಕೆಯೂ ಸೇರಿದಂತೆ ರೇಷ್ಮೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇಂದ್ರಕ್ಕೆ ಮನವರಿಕೆ ಮಾಡಲು ನವದೆಹಲಿಗೆ ಸರ್ವ ಪಕ್ಷದ ನಿಯೋಗ ತೆರಳುವುದಾಗಿ ತಿಳಿಸಿದರು.<br /> <br /> ಒಟ್ಟಾರೆ 10 ಲಕ್ಷ ಸಣ್ಣ, ಅತಿ ಸಣ್ಣ ರೈತರಿಗೆ ನೇರ ಹಣ ನೀಡುವ ಯೋಜನೆಯನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಶೀಘ್ರ ಚಾಲನೆಗೆ ತರಲಾಗುವುದು. ಇದರಲ್ಲಿ 2 ಲಕ್ಷ ಪರಿಶಿಷ್ಟ ಜಾತಿ, ಪಂಗಡದ ರೈತರನ್ನು ಆಯ್ಕೆ ಮಾಡಲಾಗುವುದು. ಇದು ಏಪ್ರಿಲ್ 1ರೊಳಗೆ ಮುಗಿಯಬೇಕೆದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>