<p><strong>ಬಳ್ಳಾರಿ: </strong>ರಾಜ್ಯದ ಮೂರು ನಗರಸಭೆಗಳು ಹಾಗೂ 25 ಪುರಸಭೆಗಳನ್ನು ಮೇಲ್ದರ್ಜೆಗೆ ಏರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ನಗರಾಭಿವೃದ್ಧಿ ಮತ್ತು ಕಾನೂನು ಸಚಿವ ಎಸ್. ಸುರೇಶಕುಮಾರ್ ಅವರು ಶನಿವಾರ ತಿಳಿಸಿದರು.<br /> <br /> ತುಮಕೂರು, ವಿಜಾಪುರ ಮತ್ತು ಶಿವಮೊಗ್ಗ ನಗರಸಭೆಗಳನ್ನು ಜನಸಂಖ್ಯೆ ಆಧಾರದಲ್ಲಿ ಮಹಾನಗರಪಾಲಿಕೆ ಮಾಡುವ ಚಿಂತನೆ ನಡೆದಿದೆ. 2011ರ ಜನಗಣತಿ ಮಾಹಿತಿ ಬಹಿರಂಗಗೊಂಡ ನಂತರ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಜತೆಗೆ 25 ಪುರಸಭೆಗಳನ್ನು ನಗರಸಭೆಗಳನ್ನಾಗಿಸುವ ಪ್ರಸ್ತಾವವೂ ಇದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದೊಂದಿಗೆ ಸರ್ಕಾರ ಚರ್ಚೆ ನಡೆಸಿದೆ. ಕ್ಷೇತ್ರಗಳ ಪುನರ್ ವಿಂಗಡಣೆ ಪ್ರಕ್ರಿಯೆ, ಮೀಸಲಾತಿ ನಿಗದಿಗೆ ಸಂಬಂಧಿಸಿದ ಪ್ರಕ್ರಿಯೆಯಿಂದಾಗಿ ಚುನಾವಣೆ ಘೋಷಣೆ ವಿಳಂಬವಾಗುವ ಸಾಧ್ಯತೆ ಇದೆ ಎಂದರು.<br /> <br /> ಸಚಿವಾಲಯಗಳನ್ನು `ಸಕಾಲ~ ವ್ಯಾಪ್ತಿಗೆ ತರಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು. ಆಫ್ಘಾನಿಸ್ತಾನದ ನಿಯೋಗವೊಂದು ಈ ಯೋಜನೆಯನ್ನು ತಮ್ಮ ದೇಶದಲ್ಲಿ ಜಾರಿಗೊಳಿಸುವ ನಿಟ್ಟಿನಲ್ಲಿ ಅಧ್ಯಯನ ನಡೆಸುತ್ತಿದೆ. ಬಾಂಗ್ಲಾದೇಶ ಕೂಡ ಯೋಜನೆಯ ಪಡೆದಿದೆ. ಒಟ್ಟು 265 ಸೇವೆಗಳನ್ನು ಯೋಜನೆಗೆ ಸೇರಿಸಲಾಗುವುದು ಎಂದು ಸುರೇಶಕುಮಾರ್ ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>ರಾಜ್ಯದ ಮೂರು ನಗರಸಭೆಗಳು ಹಾಗೂ 25 ಪುರಸಭೆಗಳನ್ನು ಮೇಲ್ದರ್ಜೆಗೆ ಏರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ನಗರಾಭಿವೃದ್ಧಿ ಮತ್ತು ಕಾನೂನು ಸಚಿವ ಎಸ್. ಸುರೇಶಕುಮಾರ್ ಅವರು ಶನಿವಾರ ತಿಳಿಸಿದರು.<br /> <br /> ತುಮಕೂರು, ವಿಜಾಪುರ ಮತ್ತು ಶಿವಮೊಗ್ಗ ನಗರಸಭೆಗಳನ್ನು ಜನಸಂಖ್ಯೆ ಆಧಾರದಲ್ಲಿ ಮಹಾನಗರಪಾಲಿಕೆ ಮಾಡುವ ಚಿಂತನೆ ನಡೆದಿದೆ. 2011ರ ಜನಗಣತಿ ಮಾಹಿತಿ ಬಹಿರಂಗಗೊಂಡ ನಂತರ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಜತೆಗೆ 25 ಪುರಸಭೆಗಳನ್ನು ನಗರಸಭೆಗಳನ್ನಾಗಿಸುವ ಪ್ರಸ್ತಾವವೂ ಇದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದೊಂದಿಗೆ ಸರ್ಕಾರ ಚರ್ಚೆ ನಡೆಸಿದೆ. ಕ್ಷೇತ್ರಗಳ ಪುನರ್ ವಿಂಗಡಣೆ ಪ್ರಕ್ರಿಯೆ, ಮೀಸಲಾತಿ ನಿಗದಿಗೆ ಸಂಬಂಧಿಸಿದ ಪ್ರಕ್ರಿಯೆಯಿಂದಾಗಿ ಚುನಾವಣೆ ಘೋಷಣೆ ವಿಳಂಬವಾಗುವ ಸಾಧ್ಯತೆ ಇದೆ ಎಂದರು.<br /> <br /> ಸಚಿವಾಲಯಗಳನ್ನು `ಸಕಾಲ~ ವ್ಯಾಪ್ತಿಗೆ ತರಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು. ಆಫ್ಘಾನಿಸ್ತಾನದ ನಿಯೋಗವೊಂದು ಈ ಯೋಜನೆಯನ್ನು ತಮ್ಮ ದೇಶದಲ್ಲಿ ಜಾರಿಗೊಳಿಸುವ ನಿಟ್ಟಿನಲ್ಲಿ ಅಧ್ಯಯನ ನಡೆಸುತ್ತಿದೆ. ಬಾಂಗ್ಲಾದೇಶ ಕೂಡ ಯೋಜನೆಯ ಪಡೆದಿದೆ. ಒಟ್ಟು 265 ಸೇವೆಗಳನ್ನು ಯೋಜನೆಗೆ ಸೇರಿಸಲಾಗುವುದು ಎಂದು ಸುರೇಶಕುಮಾರ್ ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>