<p><strong>ಚಾಮರಾಜನಗರ</strong>: ರಾಜೀವ್ಗಾಂಧಿ ಚೈತನ್ಯ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಗ್ರಾಮೀಣ ಯುವಜನರಿಗೆ ಸ್ವಉದ್ಯೋಗ ಮತ್ತು ವೃತ್ತಿ ಕೌಶಲ ಉದ್ಯೋಗ ಕಲ್ಪಿಸಲು ಜಿಲ್ಲಾ ಪಂಚಾಯಿತಿ ಮುಂದಾಗಿದೆ.<br /> <br /> ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಈ ಯೋಜನೆ ಪ್ರಸ್ತಾಪಿಸಿದ್ದಾರೆ. ಯೋಜನೆಯಡಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿ 40 ಮಂದಿಯನ್ನು ಆಯ್ಕೆ ಮಾಡಲಾಗುತ್ತದೆ. ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಗ್ರಾಮ ಸಭೆ ಮೂಲಕವೇ ಫಲಾನುಭವಿಗಳನ್ನು ಆಯ್ಕೆ ಮಾಡಬೇಕಿದೆ. ಈ ಸಂಬಂಧ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಸೂಚಿಸಲಾಗಿದೆ. ಡಿ. 10ರೊಳಗೆ ಫಲಾನುಭವಿಗಳ ಆಯ್ಕೆಪಟ್ಟಿ ಸಲ್ಲಿಸಲು ಸೂಚಿಸ ಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಡಾ.ಕೆ.ಎಚ್. ನರಸಿಂಹ ಮೂರ್ತಿ ಮಂಗಳವಾರ ತಿಳಿಸಿದರು.<br /> <br /> 18ರಿಂದ 35ವರ್ಷದವರು ಸೌಲಭ್ಯಕ್ಕೆ ಅರ್ಹರು. ಕನಿಷ್ಠ 8ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗೆ ಮಾತ್ರ ಯೋಜನೆ ಅನ್ವಯಿಸಲಿದೆ. ಆಯ್ಕೆಯಲ್ಲಿ ಮೀಸಲಾತಿ ಪಾಲಿಸಲಾಗುತ್ತದೆ. ಆಯ್ಕೆಯಾದ ಯುವಜನರು ತರಬೇತಿಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದರು.<br /> <br /> ಈಗಾಗಲೇ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ಕರೆದು ಸೂಚನೆ ನೀಡಲಾಗಿದೆ. ಗ್ರಾಮ ಪಂಚಾಯಿತಿಯಿಂದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಹೇಳಿದರು.<br /> <br /> <strong>25 ಸಾವಿರ ಮಂದಿಗೆ ತರಬೇತಿ</strong><br /> ಜಿಲ್ಲೆಯಲ್ಲಿ ಪ್ರತಿವರ್ಷ 5 ಸಾವಿರದಂತೆ ಮುಂದಿನ 5 ವರ್ಷದಲ್ಲಿ 25 ಸಾವಿರ ಯುವಜನರಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ. ಕೃಷಿ ಆಧಾರಿತ ಹಾಗೂ ಕೃಷಿ ಹೊರತಾದ ತರಬೇತಿ ನೀಡಲಾಗುವುದು. ತರಬೇತಿ ಪಡೆದವರಿಗೆ ಬ್ಯಾಂಕ್ಗಳ ಮೂಲಕ ₨ 1 ಲಕ್ಷದವರೆಗೆ ಸಾಲ ಸೌಲಭ್ಯ ಕಲ್ಪಿಸಲಾಗುವುದು. ಜತೆಗೆ, ₨ 10 ಸಾವಿರ ಸಹಾಯಧನ ಕೂಡ ನೀಡಲಾಗುತ್ತದೆ. ಈ ಸೌಲಭ್ಯ ಪಡೆಯಲು ತರಬೇತಿ ಪಡೆದ ಕನಿಷ್ಠ 5 ಫಲಾನುಭವಿಗಳು ಒಟ್ಟುಗೂಡಿ ಸ್ವಉದ್ಯೋಗ ಚಟುವಟಿಕೆ ನಡೆಸಬೇಕಿದೆ ಎಂದು ವಿವರಿಸಿದರು.<br /> <br /> ನರ್ಸರಿ, ಬೀಜೋತ್ಪಾದನೆ, ಬಾತುಕೋಳಿ ಸಾಕಣೆ, ಕೃಷಿ ಮೌಲ್ಯವರ್ಧನೆ, ಪುಷ್ಪೋದ್ಯಮ. ಅಡಿಕೆ ತಟ್ಟೆ ತಯಾರಿಕೆ, ಪಶು ಆಹಾರ ಉತ್ಪಾದನೆ, ಹೈನುಗಾರಿಕೆ, ಮೀನುಗಾರಿಕೆ, ಮಾವು– ತೆಂಗು ಕೋಯ್ಲು, ಟಿವಿ ದುರಸ್ತಿ ಸೇರಿದಂತೆ ವಿವಿಧ ಸ್ವಉದ್ಯೋಗದ ಬಗ್ಗೆ ತರಬೇತಿ ನೀಡಲಾಗುತ್ತದೆ ಎಂದು ತಿಳಿಸಿದರು.<br /> <br /> ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಮುನಿರಾಜಪ್ಪ, ಮುಖ್ಯ ಯೋಜನಾಧಿಕಾರಿ ಕೆ.ಬಿ. ಪ್ರಭುಸ್ವಾಮಿ, ಸಿದ್ದಲಿಂಗಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ರಾಜೀವ್ಗಾಂಧಿ ಚೈತನ್ಯ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಗ್ರಾಮೀಣ ಯುವಜನರಿಗೆ ಸ್ವಉದ್ಯೋಗ ಮತ್ತು ವೃತ್ತಿ ಕೌಶಲ ಉದ್ಯೋಗ ಕಲ್ಪಿಸಲು ಜಿಲ್ಲಾ ಪಂಚಾಯಿತಿ ಮುಂದಾಗಿದೆ.<br /> <br /> ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಈ ಯೋಜನೆ ಪ್ರಸ್ತಾಪಿಸಿದ್ದಾರೆ. ಯೋಜನೆಯಡಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿ 40 ಮಂದಿಯನ್ನು ಆಯ್ಕೆ ಮಾಡಲಾಗುತ್ತದೆ. ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಗ್ರಾಮ ಸಭೆ ಮೂಲಕವೇ ಫಲಾನುಭವಿಗಳನ್ನು ಆಯ್ಕೆ ಮಾಡಬೇಕಿದೆ. ಈ ಸಂಬಂಧ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಸೂಚಿಸಲಾಗಿದೆ. ಡಿ. 10ರೊಳಗೆ ಫಲಾನುಭವಿಗಳ ಆಯ್ಕೆಪಟ್ಟಿ ಸಲ್ಲಿಸಲು ಸೂಚಿಸ ಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಡಾ.ಕೆ.ಎಚ್. ನರಸಿಂಹ ಮೂರ್ತಿ ಮಂಗಳವಾರ ತಿಳಿಸಿದರು.<br /> <br /> 18ರಿಂದ 35ವರ್ಷದವರು ಸೌಲಭ್ಯಕ್ಕೆ ಅರ್ಹರು. ಕನಿಷ್ಠ 8ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗೆ ಮಾತ್ರ ಯೋಜನೆ ಅನ್ವಯಿಸಲಿದೆ. ಆಯ್ಕೆಯಲ್ಲಿ ಮೀಸಲಾತಿ ಪಾಲಿಸಲಾಗುತ್ತದೆ. ಆಯ್ಕೆಯಾದ ಯುವಜನರು ತರಬೇತಿಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದರು.<br /> <br /> ಈಗಾಗಲೇ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ಕರೆದು ಸೂಚನೆ ನೀಡಲಾಗಿದೆ. ಗ್ರಾಮ ಪಂಚಾಯಿತಿಯಿಂದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಹೇಳಿದರು.<br /> <br /> <strong>25 ಸಾವಿರ ಮಂದಿಗೆ ತರಬೇತಿ</strong><br /> ಜಿಲ್ಲೆಯಲ್ಲಿ ಪ್ರತಿವರ್ಷ 5 ಸಾವಿರದಂತೆ ಮುಂದಿನ 5 ವರ್ಷದಲ್ಲಿ 25 ಸಾವಿರ ಯುವಜನರಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ. ಕೃಷಿ ಆಧಾರಿತ ಹಾಗೂ ಕೃಷಿ ಹೊರತಾದ ತರಬೇತಿ ನೀಡಲಾಗುವುದು. ತರಬೇತಿ ಪಡೆದವರಿಗೆ ಬ್ಯಾಂಕ್ಗಳ ಮೂಲಕ ₨ 1 ಲಕ್ಷದವರೆಗೆ ಸಾಲ ಸೌಲಭ್ಯ ಕಲ್ಪಿಸಲಾಗುವುದು. ಜತೆಗೆ, ₨ 10 ಸಾವಿರ ಸಹಾಯಧನ ಕೂಡ ನೀಡಲಾಗುತ್ತದೆ. ಈ ಸೌಲಭ್ಯ ಪಡೆಯಲು ತರಬೇತಿ ಪಡೆದ ಕನಿಷ್ಠ 5 ಫಲಾನುಭವಿಗಳು ಒಟ್ಟುಗೂಡಿ ಸ್ವಉದ್ಯೋಗ ಚಟುವಟಿಕೆ ನಡೆಸಬೇಕಿದೆ ಎಂದು ವಿವರಿಸಿದರು.<br /> <br /> ನರ್ಸರಿ, ಬೀಜೋತ್ಪಾದನೆ, ಬಾತುಕೋಳಿ ಸಾಕಣೆ, ಕೃಷಿ ಮೌಲ್ಯವರ್ಧನೆ, ಪುಷ್ಪೋದ್ಯಮ. ಅಡಿಕೆ ತಟ್ಟೆ ತಯಾರಿಕೆ, ಪಶು ಆಹಾರ ಉತ್ಪಾದನೆ, ಹೈನುಗಾರಿಕೆ, ಮೀನುಗಾರಿಕೆ, ಮಾವು– ತೆಂಗು ಕೋಯ್ಲು, ಟಿವಿ ದುರಸ್ತಿ ಸೇರಿದಂತೆ ವಿವಿಧ ಸ್ವಉದ್ಯೋಗದ ಬಗ್ಗೆ ತರಬೇತಿ ನೀಡಲಾಗುತ್ತದೆ ಎಂದು ತಿಳಿಸಿದರು.<br /> <br /> ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಮುನಿರಾಜಪ್ಪ, ಮುಖ್ಯ ಯೋಜನಾಧಿಕಾರಿ ಕೆ.ಬಿ. ಪ್ರಭುಸ್ವಾಮಿ, ಸಿದ್ದಲಿಂಗಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>