ಬೆಂಗಳೂರು: ಬಂಗಾರಪ್ಪ ವಿಚಾರ ವೇದಿಕೆಯು ಹಿಂದುಳಿದ ವರ್ಗಗಳ ಮುಖಂಡ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರ 80 ನೇ ಹುಟ್ಟುಹಬ್ಬವನ್ನು ನಗರದ ಅರಮನೆ ಮೈದಾನದಲ್ಲಿ ಅ. 26 ರಂದು ಆಚರಿಸಲಿದೆ.
ಈ ಕುರಿತು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಗೌರವಾಧ್ಯಕ್ಷ ಚಂದ್ರಶೇಖರ ಕಂಬಾರ ಅವರು, `ಬಂಗಾರಪ್ಪನವರ ಅಭಿವೃದ್ಧಿ ಕಾರ್ಯಗಳನ್ನು ನೆನಪಿಸಿಕೊಳ್ಳುವ ಹಾಗೂ ಅವರು ಮಾಡಿದ ಉದಾತ್ತ ಕಾರ್ಯಗಳನ್ನು ಪ್ರಚಾರಗೊಳಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ~ ಎಂದರು.
`ಬಂಗಾರಪ್ಪನವರ ಜನ್ಮ ದಿನಾಚರಣೆಯು ಪಕ್ಷಾತೀತವಾಗಿದೆ. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಉದ್ಘಾಟನೆ ಮಾಡಲಿದ್ದು, ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್.ಡಿ. ದೇವೇಗೌಡ, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ರೈಲ್ವೆ ಸಚಿವ ಕೆ.ಮುನಿಯಪ್ಪ ಭಾಗವಹಿಸಲಿದ್ದಾರೆ~ ಎಂದರು.