ಬೆಂಗಳೂರು: ಕಾವೇರಿ ಮೊದಲನೇ ಹಾಗೂ ಎರಡನೇ ಹಂತದ ಯೋಜನೆಗಳ ವಿತರಣಾ ಮಾರ್ಗಗಳಲ್ಲಿ ಸೋರಿಕೆ ನಿಯಂತ್ರಿಸಲು ವಾಲ್ವ್ ಬದಲಾವಣೆಯ ಕಾಮಗಾರಿಗಳ ಹಿನ್ನೆಲೆಯಲ್ಲಿ ಇದೇ 28 ಹಾಗೂ 29ರಂದು ನಗರದ ಕೆಲವು ಭಾಗಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಟಿ.ಕೆ ಹಳ್ಳಿ, ಹಾರೋಹಳ್ಳಿ ಹಾಗೂ ತಾತಗುಣಿಗಳಲ್ಲಿ 28ರಂದು ಬೆಳಿಗ್ಗೆ 9ರಿಂದ ಸಂಜೆ 6 ಗಂಟೆವರೆಗೆ ಮೊದಲನೇ ಹಾಗೂ ಎರಡನೇ ಹಂತದ ಯೋಜನೆಗಳ ನೀರು ಪಂಪಿಂಗ್ ಸ್ಥಗಿತಗೊಳಿಸಲಾಗುವುದು. ಇದರಿಂದಾಗಿ ಕುಮಾರಸ್ವಾಮಿ ಲೇಔಟ್, ಬನಶಂಕರಿ, ಜಯನಗರ, ಬಸವನಗುಡಿ, ಚಾಮರಾಜಪೇಟೆ, ಪದ್ಮನಾಭನಗರ, ಬೈರಸಂದ್ರ, ಜಾನ್ಸನ್ ಮಾರ್ಕೆಟ್, ಬಾಪೂಜಿಗರ, ಮೈಸೂರು ರಸ್ತೆ, ಶಾಂತಿನಗರ, ಕೋರಮಂಗಲ, ವಿಜಯನಗರ, ಚೋಳರಪಾಳ್ಯ, ಚಿಕ್ಕಲಾಲ್ಬಾಗ್ ಸೇರಿದಂತೆ ನಗರದ ಕೆಲ ಭಾಗಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಶನಿವಾರ ಜಲಮಂಡಳಿ ಪ್ರಕಟಣೆ ತಿಳಿಸಿದೆ.