ನವದೆಹಲಿ (ಪಿಟಿಐ): ಹಣಕಾಸು ಸಚಿವ ಪಿ. ಚಿದಂಬರಂ ಅವರನ್ನು ಸಾಕ್ಷಿ ಹೇಳಲು ಕರೆಯಿಸಬೇಕು ಎಂಬ ಬಿಜೆಪಿ ಸದಸ್ಯರ ಬೇಡಿಕೆಯ ವಿಚಾರವನ್ನು ಸ್ಪೀಕರ್ ಗಮನಕ್ಕೆ ತರಲು 2ಜಿ ಹಗರಣದ ತನಿಖೆ ನಡೆಸುತ್ತಿರುವ ಸಂಸತ್ತಿನ ಜಂಟಿ ಸಮಿತಿಯ ಅಧ್ಯಕ್ಷ ಪಿ. ಸಿ. ಚಾಕೊ ನಿರ್ಧರಿಸಿದ್ದಾರೆ.
ಆದರೆ ಪ್ರಧಾನಿ ಅವರನ್ನು ಸಾಕ್ಷಿ ಹೇಳಲು ಕರೆಯಿಸಬೇಕು ಎಂಬ ಬೇಡಿಕೆಯನ್ನು ಅವರು ತಳ್ಳಿಹಾಕಿದ್ದಾರೆ.
ತಮ್ಮ ಬೇಡಿಕೆಗೆ ಅಧ್ಯಕ್ಷರು ಸ್ಪಂದಿಸಿಲ್ಲ ಎಂಬ ಕಾರಣಕ್ಕೆ ಕಳೆದ ಬಾರಿ ಸಭಾತ್ಯಾಗ ಮಾಡಿದ್ದ ಬಿಜೆಪಿ ಸದಸ್ಯರು ಗುರುವಾರವೂ ಸಭೆಯನ್ನು ಬಹಿಷ್ಕರಿಸಿದ್ದಾರೆ