1994ರಿಂದಲೂ ದೂರಸಂಪರ್ಕ ಕ್ಷೇತ್ರದಲ್ಲಿ ತರಂಗಾಂತರ ಹಂಚಿಕೆ ಪ್ರಕ್ರಿಯೆ ನಡೆದಿದೆ. ಎಲ್ಲ ಸಂದರ್ಭಗಳಲ್ಲೂ ತರಂಗಾಂತರಕ್ಕೆ ದರ ನಿಗದಿ ಮಾಡುವ ಅಧಿಕಾರವನ್ನು ದೂರಸಂಪರ್ಕ ಖಾತೆ ಮತ್ತು ಹಣಕಾಸು ಖಾತೆ ಸಚಿವರಿಗೆ ಜಂಟಿಯಾಗಿ ನೀಡಲಾಗಿತ್ತು. ಈ ಬಗ್ಗೆ ಸಂಪುಟ ಸಭೆಯಲ್ಲೇ ನಿರ್ಣಯ ಕೈಗೊಳ್ಳಲಾಗುತ್ತಿತ್ತು. ಆದರೆ ಮಾರನ್ ಸಚಿವರಾದ ಬಳಿಕ ಹಣಕಾಸು ಸಚಿವರನ್ನು ದೂರ ಇಟ್ಟು, ತಾವೊಬ್ಬರೇ ನಿರ್ಧಾರ ಕೈಗೊಂಡರು. ಇದು ಅಕ್ರಮಗಳಿಗೆ ಕಾರಣವಾಯಿತು ಎಂದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಆರ್.ಅಶೋಕ, ಸಂಸದ ಡಿ.ವಿ.ಸದಾನಂದಗೌಡ, ಮೇಯರ್ ಪಿ.ಶಾರದಮ್ಮ, ಬಿಜೆಪಿ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಸುಬ್ಬನರಸಿಂಹ, ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಮತ್ತಿತರರು ವೇದಿಕೆಯಲ್ಲಿದ್ದರು.