ನವದೆಹಲಿ (ಐಎಎನ್ಎಸ್): ಭಾರ್ತಿ ಏರ್ಟೆಲ್ ಮುಖ್ಯಸ್ಥ ಸುನಿಲ್ ಮಿತ್ತಲ್ ಹಾಗೂ ಎಸ್ಸಾರ್ ಗುಂಪಿನ ಪ್ರವರ್ತಕ ರವಿ ರೂಯಿ ಅವರಿಗೆ ಸಮನ್ಸ್ ನೀಡಲಾಗಿರುವ 2ಜಿ ಹಗರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಇಲ್ಲಿಯ ಕೋರ್ಟ್ ಇದೇ 29ಕ್ಕೆ ಮುಂದೂಡಿ ಸೋಮವಾರ ಆದೇಶ ಹೊರಡಿಸಿದೆ.
ಸಮನ್ಸ್ ಹಿನ್ನೆಲೆಯಲ್ಲಿ ಮಿತ್ತಲ್, ರೂಯಿ ಹಾಗೂ ಮಾಜಿ ದೂರಸಂಪರ್ಕ ಕಾರ್ಯದರ್ಶಿ ಶಮಲ್ ಘೋಷ್ ಸೋಮವಾರ ಕೋರ್ಟ್ಗೆ ಹಾಜರಾದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಿಂಗಳ 18ರಂದು ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ವಿಶೇಷ ಸಿಬಿಐ ಕೋರ್ಟ್ನ ನ್ಯಾಯಮೂರ್ತಿ ಒ.ಪಿ. ಸೈನಿ ವಿಚಾರಣೆಯನ್ನು 29ಕ್ಕೆ ಮುಂದೂಡಿದರು.