ನವದೆಹಲಿ (ಪಿಟಿಐ): 2ಜಿ ಹಗರಣದಲ್ಲಿ ಗೃಹ ಸಚಿವ ಪಿ. ಚಿದಂಬರಂ ಅವರನ್ನು ಆರೋಪಿಯನ್ನಾಗಿ ಪರಿಗಣಿಸಬೇಕೆಂಬ ಮನವಿ ತಿರಸ್ಕರಿಸಿದ ಸಿಬಿಐ ವಿಶೇಷ ಕೋರ್ಟ್ ಆದೇಶ ಪ್ರಶ್ನಿಸಿ ಜನತಾ ಪಕ್ಷದ ಅಧ್ಯಕ್ಷ ಸುಬ್ರಹ್ಮಣಿಯನ್ ಸ್ವಾಮಿ ಅವರು ಗುರುವಾರ ಸುಪ್ರೀಂಕೋರ್ಟ್ಗೆ ಮೇಲ್ಮನವಿ ದಾಖಲಿಸಿದ್ದಾರೆ.
ಟೆಲಿಕಾಂ ಕಂಪೆನಿಗಳಿಗೆ ತರಂಗಾಂತರ ಬೆಲೆ ನಿಗದಿ ಮತ್ತು ಹಂಚಿಕೆಯಲ್ಲಿ ದೂರಸಂಪರ್ಕ ಖಾತೆ ಮಾಜಿ ಸಚಿವ ಎ. ರಾಜಾ ಅವರಂತೆ ಪಿ.ಚಿದಂಬರಂ ಸಹ ಶಿಕ್ಷಾರ್ಹ ಪಾತ್ರ ಹೊಂದಿದ್ದಾರೆ ಎಂದು ಸ್ವಾಮಿ ಸುಬ್ರಹ್ಮಣಿಯನ್ ಸ್ವಾಮಿ ಅರ್ಜಿಯಲ್ಲಿ ಆರೋಪಿಸಿದ್ದಾರೆ.