<p><strong>ಚನ್ನಪಟ್ಟಣ: </strong>ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳು 13ನೇ ಹಣಕಾಸು ಯೋಜನೆಯ ಹಣವನ್ನು ಬೇಸಿಗೆ ಮುಗಿಯುವವರೆಗೆ ತಾಲ್ಲೂಕಿನ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಉಪಯೋಗಿಸಿಕೊಳ್ಳುವಂತೆ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ರವಿಕುಮಾರ್ ಗ್ರಾ.ಪಂ.ಗಳ ಕಾರ್ಯದರ್ಶಿಗಳಿಗೆ ತಾಕೀತು ಮಾಡಿದರು.<br /> <br /> ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಬುಧವಾರ ಏರ್ಪಾಡಾಗಿದ್ದ ತಾಲ್ಲೂಕಿನ 32 ಗ್ರಾ.ಪಂ.ಗಳ ಕಾರ್ಯದರ್ಶಿ ಮತ್ತು ಎಲ್ಲಾ ಗ್ರಾಮಗಳ ವಾಟರ್ಮನ್ಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> <br /> ಮುಂಬರುವ ಬೇಸಿಗೆಯಲ್ಲಿ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ಹೆಚ್ಚಲಿದ್ದು, ಇದನ್ನು ಎದುರಿಸಲು ಗ್ರಾಮ ಪಂಚಾಯಿತಿಗಳು ಸಿದ್ಧಗೊಳ್ಳಬೇಕು. ಕುಡಿಯುವ ನೀರಿನ ವಿಷಯದಲ್ಲಿ ತಾತ್ಸಾರ ಮಾಡದಂತೆ ಕಿವಿಮಾತು ಹೇಳಿದರು.<br /> <br /> ಗ್ರಾಮೀಣ ಪ್ರದೇಶದಲ್ಲಿರುವ ನೀರಿನ ಸಮಸ್ಯೆ ಬಗ್ಗೆ ಪ್ರತಿ ಗ್ರಾಮದ ವಾಟರ್ಮನ್ಗಳಿಂದ ವಿವರ ಪಡೆದ ರವಿಕುಮಾರ್, ನೀರನ್ನು ವ್ಯರ್ಥಮಾಡದೆ ಸಮರ್ಪಕವಾಗಿ ಬಳಸಿಕೊಳ್ಳುವಂತೆ ಸೂಚಿಸಿದರು.<br /> <br /> ಪ್ರತಿ ಗ್ರಾಮಗಳಲ್ಲೂ ಕಂದಾಯ ವಸೂಲಿ ಮಾಡಿ, ಆ ಹಣವನ್ನು ಕುಡಿಯುವ ನೀರು ಕಾಮಗಾರಿಗಳಿಗೆ ಬಳಸುವಂತೆ ಸೂಚಿಸಿದ ಅವರು, ನೀರಿನ ಅವಶ್ಯಕತೆ ಇರುವ ಕಡೆ ಹಣವನ್ನು ಸಮರ್ಪಕವಾಗಿ ಖರ್ಚು ಮಾಡುವಂತೆ ತಿಳಿಸಿದರು.<br /> <br /> ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಪಿಡಿಓಗಳು, ಕಾರ್ಯದರ್ಶಿ, ವಾಟರ್ಮನ್ಗಳು ಮತ್ತು ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ: </strong>ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳು 13ನೇ ಹಣಕಾಸು ಯೋಜನೆಯ ಹಣವನ್ನು ಬೇಸಿಗೆ ಮುಗಿಯುವವರೆಗೆ ತಾಲ್ಲೂಕಿನ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಉಪಯೋಗಿಸಿಕೊಳ್ಳುವಂತೆ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ರವಿಕುಮಾರ್ ಗ್ರಾ.ಪಂ.ಗಳ ಕಾರ್ಯದರ್ಶಿಗಳಿಗೆ ತಾಕೀತು ಮಾಡಿದರು.<br /> <br /> ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಬುಧವಾರ ಏರ್ಪಾಡಾಗಿದ್ದ ತಾಲ್ಲೂಕಿನ 32 ಗ್ರಾ.ಪಂ.ಗಳ ಕಾರ್ಯದರ್ಶಿ ಮತ್ತು ಎಲ್ಲಾ ಗ್ರಾಮಗಳ ವಾಟರ್ಮನ್ಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> <br /> ಮುಂಬರುವ ಬೇಸಿಗೆಯಲ್ಲಿ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ಹೆಚ್ಚಲಿದ್ದು, ಇದನ್ನು ಎದುರಿಸಲು ಗ್ರಾಮ ಪಂಚಾಯಿತಿಗಳು ಸಿದ್ಧಗೊಳ್ಳಬೇಕು. ಕುಡಿಯುವ ನೀರಿನ ವಿಷಯದಲ್ಲಿ ತಾತ್ಸಾರ ಮಾಡದಂತೆ ಕಿವಿಮಾತು ಹೇಳಿದರು.<br /> <br /> ಗ್ರಾಮೀಣ ಪ್ರದೇಶದಲ್ಲಿರುವ ನೀರಿನ ಸಮಸ್ಯೆ ಬಗ್ಗೆ ಪ್ರತಿ ಗ್ರಾಮದ ವಾಟರ್ಮನ್ಗಳಿಂದ ವಿವರ ಪಡೆದ ರವಿಕುಮಾರ್, ನೀರನ್ನು ವ್ಯರ್ಥಮಾಡದೆ ಸಮರ್ಪಕವಾಗಿ ಬಳಸಿಕೊಳ್ಳುವಂತೆ ಸೂಚಿಸಿದರು.<br /> <br /> ಪ್ರತಿ ಗ್ರಾಮಗಳಲ್ಲೂ ಕಂದಾಯ ವಸೂಲಿ ಮಾಡಿ, ಆ ಹಣವನ್ನು ಕುಡಿಯುವ ನೀರು ಕಾಮಗಾರಿಗಳಿಗೆ ಬಳಸುವಂತೆ ಸೂಚಿಸಿದ ಅವರು, ನೀರಿನ ಅವಶ್ಯಕತೆ ಇರುವ ಕಡೆ ಹಣವನ್ನು ಸಮರ್ಪಕವಾಗಿ ಖರ್ಚು ಮಾಡುವಂತೆ ತಿಳಿಸಿದರು.<br /> <br /> ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಪಿಡಿಓಗಳು, ಕಾರ್ಯದರ್ಶಿ, ವಾಟರ್ಮನ್ಗಳು ಮತ್ತು ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>