<p><strong>ದಾವಣಗೆರೆ:</strong> ಮುರುಘಾರಾಜೇಂದ್ರ ವಿರಕ್ತಮಠ ಹಾಗೂ ಮುರು ಘರಾಜೇಂದ್ರ ಶಿವಯೋಗಾಶ್ರಮ ಟ್ರಸ್ಟ್ ವತಿಯಿಂದ ಬಸವ ಜಯಂತಿ ಶತಮಾನೋತ್ಸವ ವರ್ಷಾಚರಣೆಯ ಅಂಗವಾಗಿ ಜುಲೈ 3ರ ಸಂಜೆ 6.30ಕ್ಕೆ ದೊಡ್ಡಪೇಟೆಯ ವಿರಕ್ತ ಮಠದಲ್ಲಿ `ಶರಣ ಸಂಗಮ~ ಕಾರ್ಯಕ್ರಮ ನಡೆಯಲಿದೆ.</p>.<p>ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರು ಅಧ್ಯಕ್ಷತೆ ವಹಿಸುವರು. ಬಸವಪ್ರಭು ಸ್ವಾಮಿ ಉಪಸ್ಥಿತರಿರುವರು. ಅತಿಥಿಗಳಾಗಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಎಂ. ಶಿವಕುಮಾರ್, ವೀರಪ್ಪ ಎಂ. ಬಾವಿ ಆಗಮಿಸುವರು. ಎಆರ್ಜಿ ಕಾಲೇಜಿನ ಉಪನ್ಯಾಸಕ ಮಲ್ಲಿಕಾರ್ಜುನ ಜವಳಿ `ಅಪಾಯ ಮತ್ತು ಜ್ಞಾನೋದಯ~ ವಿಷಯದ ಬಗ್ಗೆ ಉಪನ್ಯಾಸ ನೀಡುವರು. ರೇವಣಸಿದ್ದಪ್ಪ ಹಾಗೂ ತಂಡ ವಚನ ಗಾಯನ ನಡೆಸಿಕೊಡಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಮುರುಘಾರಾಜೇಂದ್ರ ವಿರಕ್ತಮಠ ಹಾಗೂ ಮುರು ಘರಾಜೇಂದ್ರ ಶಿವಯೋಗಾಶ್ರಮ ಟ್ರಸ್ಟ್ ವತಿಯಿಂದ ಬಸವ ಜಯಂತಿ ಶತಮಾನೋತ್ಸವ ವರ್ಷಾಚರಣೆಯ ಅಂಗವಾಗಿ ಜುಲೈ 3ರ ಸಂಜೆ 6.30ಕ್ಕೆ ದೊಡ್ಡಪೇಟೆಯ ವಿರಕ್ತ ಮಠದಲ್ಲಿ `ಶರಣ ಸಂಗಮ~ ಕಾರ್ಯಕ್ರಮ ನಡೆಯಲಿದೆ.</p>.<p>ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರು ಅಧ್ಯಕ್ಷತೆ ವಹಿಸುವರು. ಬಸವಪ್ರಭು ಸ್ವಾಮಿ ಉಪಸ್ಥಿತರಿರುವರು. ಅತಿಥಿಗಳಾಗಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಎಂ. ಶಿವಕುಮಾರ್, ವೀರಪ್ಪ ಎಂ. ಬಾವಿ ಆಗಮಿಸುವರು. ಎಆರ್ಜಿ ಕಾಲೇಜಿನ ಉಪನ್ಯಾಸಕ ಮಲ್ಲಿಕಾರ್ಜುನ ಜವಳಿ `ಅಪಾಯ ಮತ್ತು ಜ್ಞಾನೋದಯ~ ವಿಷಯದ ಬಗ್ಗೆ ಉಪನ್ಯಾಸ ನೀಡುವರು. ರೇವಣಸಿದ್ದಪ್ಪ ಹಾಗೂ ತಂಡ ವಚನ ಗಾಯನ ನಡೆಸಿಕೊಡಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>