<p><strong>ಹೈದರಾಬಾದ್ (ಐಎಎನ್ಎಸ್):</strong> ಆಂಧ್ರಪ್ರದೇಶದಿಂದ ಬಿಡಿಸಿ ಪ್ರತ್ಯೇಕ ತೆಲಂಗಾಣ ರಾಜ್ಯವನ್ನು ರಚಿಸಬೇಕೆಂದು ಆಗ್ರಹಿಸಿ ತೆಲಂಗಾಣ ಪ್ರದೇಶದ ಜನತೆ ಆರಂಭಿಸಿರುವ ಅನಿರ್ದಿಷ್ಟ ಕಾಲದ ಹೋರಾಟ ಬುಧವಾರ 30 ದಿನಕ್ಕೆ ಕಾಲಿಟ್ಟಿದೆ. ಕೆಲವೆಡೆ ರಾಜ್ಯಸಾರಿಗೆ ಸಂಸ್ತೆ ಬಸ್ಸುಗಳು ರಸ್ತೆಗಿಳಿದಿದ್ದರೂ, ತೆಲಂಗಾಣದ ಬಹುತೇಕ ಜಿಲ್ಲೆಗಳಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ.</p>.<p>ತೆಲಂಗಾಣ ಪ್ರದೇಶದ ಸರ್ಕಾರಿ ಉದ್ಯೋಗಿಗಳು ಚಳವಳಿಯಲ್ಲಿ ನಿರತರಾಗಿರುವುದರಿಂದ ಆಡಳಿತ ವ್ಯವಸ್ಥೆ ಕುಸಿದಿದೆ, ಜೊತೆಗೆ ಸಾರ್ವಜನಿಕ ಸ್ವಾಮ್ಯದ ಸಿಂಗರೇಣಿ ಕಲ್ಲಿದ್ದಲು ಗಣಿ ಕಾರ್ಮಿಕರು ಪ್ರತ್ಯೇಕ ತೆಲಂಗಾಣ ಹೋರಾಟವನ್ನು ಬೆಂಬಲಿಸುತ್ತಿರುವುದರಿಂದ ಅಲ್ಲಿನ ಕಲ್ಲಿದ್ದಲಿನ ಉತ್ಪಾದನೆ ಸ್ಥಗಿತಗೊಂಡಿದೆ.</p>.<p>ಸರ್ಕಾರ ಚಳವಳಿ ನಿರತರೊಂದಿಗೆ ಮಾತುಕತೆ ನಡೆಸಲು ಮುಂದಾದರೂ, ಚಳವಳಿಯ ನೇತಾರರ ಮೇಲಿರುವ ಮೊಕದ್ದಮೆಗಳನ್ನು ವಾಪಾಸು ಪಡೆಯುವವರೆಗೆ ಮಾತುಕತೆಗೆ ತಾನು ಸಿದ್ಧವಿಲ್ಲ ಎಂದು ತೆಲಂಗಾಣ ಉದ್ಯೋಗಿಗಳ ಜಂಟಿ ಕ್ರಿಯಾ ಸಮಿತಿ ಪಟ್ಟು ಹಿಡಿದಿದೆ.</p>.<p>~ಒಂದು ಕಡೆ ನಮ್ಮನ್ನು ಮಾತುಕತೆಗೆ ಆಹ್ವಾನಿಸುವ ಸರ್ಕಾರ ಇನ್ನೊಂದು ಕಡೆ ನಮ್ಮ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತಿದೆ. ಸದ್ಯದ ಪರಿಸ್ಥಿತಿ ಮಾತುಕತೆಗೆ ಪುರಕವಾಗಿಲ್ಲ~ ಎಂದು ಜಂಟಿ ಕ್ರಿಯಾ ಸಮಿತಿಯ ನಾಯಕ ಸ್ವಾಮಿ ಗೌಡ ಅವರು ಬುಧವಾರ ಇಲ್ಲಿ ಹೇಳಿಕೊಂಡಿದ್ದಾರೆ.</p>.<p>ಬುಧವಾರ ಮಧ್ಯಾಹ್ನ 12 ಗಂಟೆಗೆ ಮಾತುಕತೆಗೆ ಬನ್ನಿ ಎಂದು ಸರ್ಕಾರವು ಆಹ್ವಾನಿ ನೀಡಿತ್ತು. ಆದರೆ, ಬುಧವಾರ ಬೆಳಿಗ್ಗೆಯೇ ಸಭೆ ಸೇರಿದ್ದ ಜಂಟಿ ಕ್ರಿಯಾ ಸಮಿತಿಯು ಸರ್ಕಾರದ ಆಹ್ವಾನವನ್ನು ಸಾರಾಸಗಟಾಗಿ ತಿರಸ್ಕರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್ (ಐಎಎನ್ಎಸ್):</strong> ಆಂಧ್ರಪ್ರದೇಶದಿಂದ ಬಿಡಿಸಿ ಪ್ರತ್ಯೇಕ ತೆಲಂಗಾಣ ರಾಜ್ಯವನ್ನು ರಚಿಸಬೇಕೆಂದು ಆಗ್ರಹಿಸಿ ತೆಲಂಗಾಣ ಪ್ರದೇಶದ ಜನತೆ ಆರಂಭಿಸಿರುವ ಅನಿರ್ದಿಷ್ಟ ಕಾಲದ ಹೋರಾಟ ಬುಧವಾರ 30 ದಿನಕ್ಕೆ ಕಾಲಿಟ್ಟಿದೆ. ಕೆಲವೆಡೆ ರಾಜ್ಯಸಾರಿಗೆ ಸಂಸ್ತೆ ಬಸ್ಸುಗಳು ರಸ್ತೆಗಿಳಿದಿದ್ದರೂ, ತೆಲಂಗಾಣದ ಬಹುತೇಕ ಜಿಲ್ಲೆಗಳಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ.</p>.<p>ತೆಲಂಗಾಣ ಪ್ರದೇಶದ ಸರ್ಕಾರಿ ಉದ್ಯೋಗಿಗಳು ಚಳವಳಿಯಲ್ಲಿ ನಿರತರಾಗಿರುವುದರಿಂದ ಆಡಳಿತ ವ್ಯವಸ್ಥೆ ಕುಸಿದಿದೆ, ಜೊತೆಗೆ ಸಾರ್ವಜನಿಕ ಸ್ವಾಮ್ಯದ ಸಿಂಗರೇಣಿ ಕಲ್ಲಿದ್ದಲು ಗಣಿ ಕಾರ್ಮಿಕರು ಪ್ರತ್ಯೇಕ ತೆಲಂಗಾಣ ಹೋರಾಟವನ್ನು ಬೆಂಬಲಿಸುತ್ತಿರುವುದರಿಂದ ಅಲ್ಲಿನ ಕಲ್ಲಿದ್ದಲಿನ ಉತ್ಪಾದನೆ ಸ್ಥಗಿತಗೊಂಡಿದೆ.</p>.<p>ಸರ್ಕಾರ ಚಳವಳಿ ನಿರತರೊಂದಿಗೆ ಮಾತುಕತೆ ನಡೆಸಲು ಮುಂದಾದರೂ, ಚಳವಳಿಯ ನೇತಾರರ ಮೇಲಿರುವ ಮೊಕದ್ದಮೆಗಳನ್ನು ವಾಪಾಸು ಪಡೆಯುವವರೆಗೆ ಮಾತುಕತೆಗೆ ತಾನು ಸಿದ್ಧವಿಲ್ಲ ಎಂದು ತೆಲಂಗಾಣ ಉದ್ಯೋಗಿಗಳ ಜಂಟಿ ಕ್ರಿಯಾ ಸಮಿತಿ ಪಟ್ಟು ಹಿಡಿದಿದೆ.</p>.<p>~ಒಂದು ಕಡೆ ನಮ್ಮನ್ನು ಮಾತುಕತೆಗೆ ಆಹ್ವಾನಿಸುವ ಸರ್ಕಾರ ಇನ್ನೊಂದು ಕಡೆ ನಮ್ಮ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತಿದೆ. ಸದ್ಯದ ಪರಿಸ್ಥಿತಿ ಮಾತುಕತೆಗೆ ಪುರಕವಾಗಿಲ್ಲ~ ಎಂದು ಜಂಟಿ ಕ್ರಿಯಾ ಸಮಿತಿಯ ನಾಯಕ ಸ್ವಾಮಿ ಗೌಡ ಅವರು ಬುಧವಾರ ಇಲ್ಲಿ ಹೇಳಿಕೊಂಡಿದ್ದಾರೆ.</p>.<p>ಬುಧವಾರ ಮಧ್ಯಾಹ್ನ 12 ಗಂಟೆಗೆ ಮಾತುಕತೆಗೆ ಬನ್ನಿ ಎಂದು ಸರ್ಕಾರವು ಆಹ್ವಾನಿ ನೀಡಿತ್ತು. ಆದರೆ, ಬುಧವಾರ ಬೆಳಿಗ್ಗೆಯೇ ಸಭೆ ಸೇರಿದ್ದ ಜಂಟಿ ಕ್ರಿಯಾ ಸಮಿತಿಯು ಸರ್ಕಾರದ ಆಹ್ವಾನವನ್ನು ಸಾರಾಸಗಟಾಗಿ ತಿರಸ್ಕರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>