<p>ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನ ಇದೇ 30ರಂದು ನಡೆಯಲಿದ್ದು, ಅಂದು ಮಧ್ಯಾಹ್ನ 12.15ಕ್ಕೆ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.<br /> <br /> ವಿಧಾನ ಪರಿಷತ್ತಿನ ಸಭಾಪತಿ ಡಿ.ಎಚ್.ಶಂಕರಮೂರ್ತಿ ಮತ್ತು ವಿಧಾನಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಮಂಗಳವಾರ ಭಾರದ್ವಾಜ್ ಅವರನ್ನು ಭೇಟಿಯಾಗಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವಂತೆ ಆಹ್ವಾನ ನೀಡಿದ ನಂತರ ಪ್ರತ್ಯೇಕ ಪತ್ರಿಕಾಗೋಷ್ಠಿಯಲ್ಲಿ ಅಧಿವೇಶನ ಕುರಿತು ಮಾಹಿತಿ ನೀಡಿದರು.<br /> <br /> ಬೋಪಯ್ಯ ಮಾತನಾಡಿ, `ಜ.30ರಿಂದ ಫೆ.10ರವರೆಗೆ ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಈ ಸಂದರ್ಭದಲ್ಲಿ ಮೊದಲ ದಿನ ಹೊರತುಪಡಿಸಿ ಉಳಿದ ಎಲ್ಲ ದಿನಗಳಂದೂ ಪ್ರಶ್ನೋತ್ತರ, ಗಮನ ಸೆಳೆಯುವ ಸೂಚನೆ, ಶೂನ್ಯವೇಳೆ ನಡೆಯಲಿದೆ~ ಎಂದರು.<br /> <br /> ನಾಲ್ಕು ಮಸೂದೆ: ಈ ಸಲದ ಅಧಿವೇಶನದಲ್ಲಿ ನಾಲ್ಕು ಮಸೂದೆಗಳನ್ನು ಮಂಡಿಸಲಾಗುವುದು. ಪಂಚಾಯತ್ ರಾಜ್ (ತಿದ್ದುಪಡಿ) ಮಸೂದೆ-2007; ಸಹ್ಯಾದ್ರಿ ಅಭಿವೃದ್ಧಿ ಪ್ರಾಧಿಕಾರ ಮಸೂದೆ-2011; ಕರ್ನಾಟಕ ವಿಧಾನ ಪರಿಷತ್ತಿನಿಂದ ಅಂಗೀಕಾರವಾದ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಮಸೂದೆ-2011; ಕರ್ನಾಟಕ ಪುರಸಭೆಗಳು ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ಮಸೂದೆ-2011.<br /> <br /> ವಿಧಾನಸಭಾ ಸದಸ್ಯರಿಂದ ಒಟ್ಟು 674 ಪ್ರಶ್ನೆಗಳು ಬಂದಿದ್ದು, ಅವುಗಳಲ್ಲಿ 112 ಅನ್ನು ಚುಕ್ಕೆ ಗುರುತಿನ ಪ್ರಶ್ನೆಗಳಾಗಿ ಸ್ವೀಕರಿಸಲಾಗಿದೆ ಎಂದರು.<br /> <br /> ಹದಿನಾರು ಮಂದಿ ಶಾಸಕರ ಅನರ್ಹತೆ ಮತ್ತು ಅದನ್ನು ಸುಪ್ರೀಂಕೋರ್ಟ್ ರದ್ದು ಮಾಡಿದ ಪ್ರಕರಣದ ಬಗ್ಗೆ ಈ ಹಿಂದೆ ನಡೆದ ಸ್ಪೀಕರ್ಗಳ ಸಮ್ಮೇಳನದಲ್ಲಿ ಚರ್ಚಿಸಲು ಸಲಹೆ ಮಾಡಲಾಗಿತ್ತು. ಆದರೆ, ಆ ಸಂದರ್ಭದಲ್ಲಿ ಅದು ಚರ್ಚೆಗೆ ಬರಲಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.<br /> <br /> ಪರಿಷತ್ತಿನ ಸದಸ್ಯರಿಂದ ಈಗಾಗಲೇ 450 ಪ್ರಶ್ನೆಗಳು ಬಂದಿದ್ದು, ಇವುಗಳಲ್ಲಿ 386 ಚುಕ್ಕೆಗುರುತಿನ ಮತ್ತು 64 ಚುಕ್ಕೆಗುರುತಿಲ್ಲದ ಪ್ರಶ್ನೆಗಳಾಗಿವೆ. ಅಲ್ಲದೆ 16 ಗಮನ ಸೆಳೆಯುವ ಸೂಚನೆಗಳು ಬಂದಿವೆ ಎಂದು ಶಂಕರಮೂರ್ತಿ ತಿಳಿಸಿದರು.<br /> <br /> ಆಂಧ್ರಪ್ರದೇಶದ ಚಂಚಲಗೂಡ ಕಾರಾಗೃಹದಲ್ಲಿರುವ ಮಾಜಿ ಸಚಿವ ಜಿ.ಜನಾರ್ದನರೆಡ್ಡಿ ಅವರಿಗೂ ಜೈಲು ಅಧೀಕ್ಷಕರ ಮೂಲಕ ಕಲಾಪದ ನೋಟಿಸ್ ಕಳುಹಿಸಲಾಗಿದೆ. ಉಳಿದ ವಿಚಾರ ಅವರಿಗೆ ಬಿಟ್ಟಿದ್ದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನ ಇದೇ 30ರಂದು ನಡೆಯಲಿದ್ದು, ಅಂದು ಮಧ್ಯಾಹ್ನ 12.15ಕ್ಕೆ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.<br /> <br /> ವಿಧಾನ ಪರಿಷತ್ತಿನ ಸಭಾಪತಿ ಡಿ.ಎಚ್.ಶಂಕರಮೂರ್ತಿ ಮತ್ತು ವಿಧಾನಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಮಂಗಳವಾರ ಭಾರದ್ವಾಜ್ ಅವರನ್ನು ಭೇಟಿಯಾಗಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವಂತೆ ಆಹ್ವಾನ ನೀಡಿದ ನಂತರ ಪ್ರತ್ಯೇಕ ಪತ್ರಿಕಾಗೋಷ್ಠಿಯಲ್ಲಿ ಅಧಿವೇಶನ ಕುರಿತು ಮಾಹಿತಿ ನೀಡಿದರು.<br /> <br /> ಬೋಪಯ್ಯ ಮಾತನಾಡಿ, `ಜ.30ರಿಂದ ಫೆ.10ರವರೆಗೆ ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಈ ಸಂದರ್ಭದಲ್ಲಿ ಮೊದಲ ದಿನ ಹೊರತುಪಡಿಸಿ ಉಳಿದ ಎಲ್ಲ ದಿನಗಳಂದೂ ಪ್ರಶ್ನೋತ್ತರ, ಗಮನ ಸೆಳೆಯುವ ಸೂಚನೆ, ಶೂನ್ಯವೇಳೆ ನಡೆಯಲಿದೆ~ ಎಂದರು.<br /> <br /> ನಾಲ್ಕು ಮಸೂದೆ: ಈ ಸಲದ ಅಧಿವೇಶನದಲ್ಲಿ ನಾಲ್ಕು ಮಸೂದೆಗಳನ್ನು ಮಂಡಿಸಲಾಗುವುದು. ಪಂಚಾಯತ್ ರಾಜ್ (ತಿದ್ದುಪಡಿ) ಮಸೂದೆ-2007; ಸಹ್ಯಾದ್ರಿ ಅಭಿವೃದ್ಧಿ ಪ್ರಾಧಿಕಾರ ಮಸೂದೆ-2011; ಕರ್ನಾಟಕ ವಿಧಾನ ಪರಿಷತ್ತಿನಿಂದ ಅಂಗೀಕಾರವಾದ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಮಸೂದೆ-2011; ಕರ್ನಾಟಕ ಪುರಸಭೆಗಳು ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ಮಸೂದೆ-2011.<br /> <br /> ವಿಧಾನಸಭಾ ಸದಸ್ಯರಿಂದ ಒಟ್ಟು 674 ಪ್ರಶ್ನೆಗಳು ಬಂದಿದ್ದು, ಅವುಗಳಲ್ಲಿ 112 ಅನ್ನು ಚುಕ್ಕೆ ಗುರುತಿನ ಪ್ರಶ್ನೆಗಳಾಗಿ ಸ್ವೀಕರಿಸಲಾಗಿದೆ ಎಂದರು.<br /> <br /> ಹದಿನಾರು ಮಂದಿ ಶಾಸಕರ ಅನರ್ಹತೆ ಮತ್ತು ಅದನ್ನು ಸುಪ್ರೀಂಕೋರ್ಟ್ ರದ್ದು ಮಾಡಿದ ಪ್ರಕರಣದ ಬಗ್ಗೆ ಈ ಹಿಂದೆ ನಡೆದ ಸ್ಪೀಕರ್ಗಳ ಸಮ್ಮೇಳನದಲ್ಲಿ ಚರ್ಚಿಸಲು ಸಲಹೆ ಮಾಡಲಾಗಿತ್ತು. ಆದರೆ, ಆ ಸಂದರ್ಭದಲ್ಲಿ ಅದು ಚರ್ಚೆಗೆ ಬರಲಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.<br /> <br /> ಪರಿಷತ್ತಿನ ಸದಸ್ಯರಿಂದ ಈಗಾಗಲೇ 450 ಪ್ರಶ್ನೆಗಳು ಬಂದಿದ್ದು, ಇವುಗಳಲ್ಲಿ 386 ಚುಕ್ಕೆಗುರುತಿನ ಮತ್ತು 64 ಚುಕ್ಕೆಗುರುತಿಲ್ಲದ ಪ್ರಶ್ನೆಗಳಾಗಿವೆ. ಅಲ್ಲದೆ 16 ಗಮನ ಸೆಳೆಯುವ ಸೂಚನೆಗಳು ಬಂದಿವೆ ಎಂದು ಶಂಕರಮೂರ್ತಿ ತಿಳಿಸಿದರು.<br /> <br /> ಆಂಧ್ರಪ್ರದೇಶದ ಚಂಚಲಗೂಡ ಕಾರಾಗೃಹದಲ್ಲಿರುವ ಮಾಜಿ ಸಚಿವ ಜಿ.ಜನಾರ್ದನರೆಡ್ಡಿ ಅವರಿಗೂ ಜೈಲು ಅಧೀಕ್ಷಕರ ಮೂಲಕ ಕಲಾಪದ ನೋಟಿಸ್ ಕಳುಹಿಸಲಾಗಿದೆ. ಉಳಿದ ವಿಚಾರ ಅವರಿಗೆ ಬಿಟ್ಟಿದ್ದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>