ಹೈದರಾಬಾದ್ (ಐಎಎನ್ಎಸ್): ಆಂಧ್ರಪ್ರದೇಶದಿಂದ ಬಿಡಿಸಿ ಪ್ರತ್ಯೇಕ ತೆಲಂಗಾಣ ರಾಜ್ಯವನ್ನು ರಚಿಸಬೇಕೆಂದು ಆಗ್ರಹಿಸಿ ತೆಲಂಗಾಣ ಪ್ರದೇಶದ ಜನತೆ ಆರಂಭಿಸಿರುವ ಅನಿರ್ದಿಷ್ಟ ಕಾಲದ ಹೋರಾಟ ಬುಧವಾರ 30 ದಿನಕ್ಕೆ ಕಾಲಿಟ್ಟಿದೆ. ಕೆಲವೆಡೆ ರಾಜ್ಯಸಾರಿಗೆ ಸಂಸ್ತೆ ಬಸ್ಸುಗಳು ರಸ್ತೆಗಿಳಿದಿದ್ದರೂ, ತೆಲಂಗಾಣದ ಬಹುತೇಕ ಜಿಲ್ಲೆಗಳಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ.