<p><strong>ಬೆಂಗಳೂರು:</strong> ಕಾರ್ಯಕರ್ತರನ್ನು ಚುನಾವಣೆಗೆ ಸಜ್ಜುಗೊಳಿಸಲು ಪಕ್ಷದ ವಿವಿಧ ಮೋರ್ಚಾಗಳ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ. ಮೊದಲ ಹೆಜ್ಜೆಯಾಗಿ ಮಹಿಳಾ ಮೋರ್ಚಾ ವತಿಯಿಂದ `ನಾರಿ ಶಕ್ತಿ ಸಂಗಮ~ ಸಮಾವೇಶ ಇದೇ 31ರಂದು ನಗರದ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಹೇಳಿದರು.<br /> <br /> ಮಹಿಳಾ ಮೋರ್ಚಾ ಸಮಾವೇಶಕ್ಕೆ ಪೂರ್ವಭಾವಿಯಾಗಿ ಶನಿವಾರ ಆಯೋಜಿಸಲಾಗಿದ್ದ ಭೂಮಿ ಪೂಜೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, `31ರಂದು ನಡೆಯುವ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ ನಾಯಕರೂ ಪಾಲ್ಗೊಳ್ಳಲಿದ್ದಾರೆ. <br /> <br /> ವಿವಿಧ ಮೋರ್ಚಾಗಳು ಒಂದಾಗಿ ಮೇ 26ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಆಯೋಜಿಸಲಿವೆ. ಅದರಲ್ಲಿ ಅಂದಾಜು ಆರು ಲಕ್ಷ ಜನ ಪಾಲ್ಗೊಳ್ಳಲಿದ್ದಾರೆ~ ಎಂದು ತಿಳಿಸಿದರು.ಏಪ್ರಿಲ್ 7ರಂದು ಮೈಸೂರಿನಲ್ಲಿ ದಲಿತ ಮೋರ್ಚಾ ವತಿಯಿಂದ ಬೃಹತ್ ಸಮಾವೇಶ ನಡೆಯಲಿದೆ ಎಂದು ಅವರು ಹೇಳಿದರು.<br /> <br /> `ನಾರಿ ಶಕ್ತಿ ಸಂಗಮ~ ಸಮಾವೇಶದಲ್ಲಿ 30 ಸಾವಿರ ಮಹಿಳೆಯರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಮಹಿಳಾ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷೆ ರೀನಾ ಪ್ರಕಾಶ್ ತಿಳಿಸಿದರು. <br /> ಇಂಧನ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ತಿನ ಉಪಸಭಾಪತಿ ವಿಮಲಾ ಗೌಡ ಮತ್ತಿತರರು ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಾರ್ಯಕರ್ತರನ್ನು ಚುನಾವಣೆಗೆ ಸಜ್ಜುಗೊಳಿಸಲು ಪಕ್ಷದ ವಿವಿಧ ಮೋರ್ಚಾಗಳ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ. ಮೊದಲ ಹೆಜ್ಜೆಯಾಗಿ ಮಹಿಳಾ ಮೋರ್ಚಾ ವತಿಯಿಂದ `ನಾರಿ ಶಕ್ತಿ ಸಂಗಮ~ ಸಮಾವೇಶ ಇದೇ 31ರಂದು ನಗರದ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಹೇಳಿದರು.<br /> <br /> ಮಹಿಳಾ ಮೋರ್ಚಾ ಸಮಾವೇಶಕ್ಕೆ ಪೂರ್ವಭಾವಿಯಾಗಿ ಶನಿವಾರ ಆಯೋಜಿಸಲಾಗಿದ್ದ ಭೂಮಿ ಪೂಜೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, `31ರಂದು ನಡೆಯುವ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ ನಾಯಕರೂ ಪಾಲ್ಗೊಳ್ಳಲಿದ್ದಾರೆ. <br /> <br /> ವಿವಿಧ ಮೋರ್ಚಾಗಳು ಒಂದಾಗಿ ಮೇ 26ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಆಯೋಜಿಸಲಿವೆ. ಅದರಲ್ಲಿ ಅಂದಾಜು ಆರು ಲಕ್ಷ ಜನ ಪಾಲ್ಗೊಳ್ಳಲಿದ್ದಾರೆ~ ಎಂದು ತಿಳಿಸಿದರು.ಏಪ್ರಿಲ್ 7ರಂದು ಮೈಸೂರಿನಲ್ಲಿ ದಲಿತ ಮೋರ್ಚಾ ವತಿಯಿಂದ ಬೃಹತ್ ಸಮಾವೇಶ ನಡೆಯಲಿದೆ ಎಂದು ಅವರು ಹೇಳಿದರು.<br /> <br /> `ನಾರಿ ಶಕ್ತಿ ಸಂಗಮ~ ಸಮಾವೇಶದಲ್ಲಿ 30 ಸಾವಿರ ಮಹಿಳೆಯರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಮಹಿಳಾ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷೆ ರೀನಾ ಪ್ರಕಾಶ್ ತಿಳಿಸಿದರು. <br /> ಇಂಧನ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ತಿನ ಉಪಸಭಾಪತಿ ವಿಮಲಾ ಗೌಡ ಮತ್ತಿತರರು ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>