<p><strong>ಹುಣಸಗಿ: </strong>ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರ ಎರಡನೇ (ಹಿಂಗಾರು) ಅವಧಿಗಾಗಿ ಮಾ.31ರ ವರೆಗೆ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಬೇಕು ಎಂದು ಸುರಪುರ ಶಾಸಕ ರಾಜಾ ವೆಂಕಟಪ್ಪನಾಯಕ ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.<br /> <br /> ಸೋಮವಾರ ಸಂಜೆ ಸಮೀಪದ ನಾರಾಯಣಪುರದ ಮುಖ್ಯ ಎಂಜಿನಿಯರ್ ಕಚೇರಿಗೆ ರೈತ ಮುಖಂಡರೊಂದಿಗೆ ತೆರಳಿದ ಶಾಸಕರು, ಅಧೀಕ್ಷಕ ಎಂಜಿನಿಯರ್ ಡಿ.ಆರ್.ಕೃಷ್ಣಮೂರ್ತಿ ಅವರಿಗೆ ಮನವಿ ಸಲ್ಲಿಸಿ, ರೈತರ ಸಮಸ್ಯೆಯ ಕುರಿತು ಮಾತನಾಡಿದರು.<br /> ಕಾಲುವೆಯಲ್ಲಿ ಬೇಡಿಕೆಗಿಂತ ಹೆಚ್ಚು ನೀರು ಹರಿಯುತ್ತಿರುವುದು ತಿಳಿದು ಬಂದಿದ್ದು, ವ್ಯರ್ಥವಾಗಿ ಹಳ್ಳಗಳಿಗೆ ಹರಿಸುವುದನ್ನು ಬಿಟ್ಟು, ಅದೇ ನೀರನ್ನು ರೈತರಿಗೆ ನೀಡಬೇಕು. ಮಾ.14ರಂದು ರಾತ್ರಿ ಜಲಾಶಯದಿಂದ ನದಿಗೆ ಅಗತ್ಯಕ್ಕಿಂತ ಹೆಚ್ಚಿನ ನೀರನ್ನು ಹರಿಸಿದ್ದೇಕೆ? ಎಂದು ಪ್ರಶ್ನಿಸಿದರು.<br /> <br /> ಶಾಸಕರಿಂದ ಮನವಿ ಪತ್ರ ಸ್ವೀಕರಿಸಿದ ಕೃಷ್ಣಮೂರ್ತಿ ಮಾತನಾಡಿ, ನಾವು ಕೂಡ ರೈತರ ಮಕ್ಕಳಾಗಿ ಜನಿಸಿದ್ದೇವೆ. ರೈತರ ಸಮಸ್ಯೆ ನಮಗೂ ತಿಳಿದಿದೆ. ಮೇಲಧಿಕಾರಿಗಳ ಆದೇಶದಂತೆ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಶಾಸಕರಿಗೆ ಭರವಸೆ ನೀಡಿದರು.<br /> ಜಲಾಶಯದ ವಿಭಾಗೀಯ ಕಾರ್ಯ ನಿರ್ವಾಹಕ ಎಂಜಿನಿಯರ್ ರಂಗಾರಾಮ್, ನದಿಗೆ ನೀರು ಹರಿಸಿರುವ ಕುರಿತು ಮಾಹಿತಿ ನೀಡಿದರು.<br /> ಮುಖಂಡರಾದ ರಾಜಶೇಖರಗೌಡ ವಜ್ಜಲ್, ಸೂಲಪ್ಪ ಕಮತಗಿ, ನಿಂಗಣ್ಣ ಬಳಿ, ಪ್ರಭುಗೌಡ ಪಾಟೀಲ, ಆರ್.ಎಂ.ರೇವಡಿ, ಮುದಿಗೌಡ ಕುಪ್ಪಿ, ಗುಂಡಪ್ಪ ಸೊಲ್ಲಾಪುರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ: </strong>ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರ ಎರಡನೇ (ಹಿಂಗಾರು) ಅವಧಿಗಾಗಿ ಮಾ.31ರ ವರೆಗೆ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಬೇಕು ಎಂದು ಸುರಪುರ ಶಾಸಕ ರಾಜಾ ವೆಂಕಟಪ್ಪನಾಯಕ ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.<br /> <br /> ಸೋಮವಾರ ಸಂಜೆ ಸಮೀಪದ ನಾರಾಯಣಪುರದ ಮುಖ್ಯ ಎಂಜಿನಿಯರ್ ಕಚೇರಿಗೆ ರೈತ ಮುಖಂಡರೊಂದಿಗೆ ತೆರಳಿದ ಶಾಸಕರು, ಅಧೀಕ್ಷಕ ಎಂಜಿನಿಯರ್ ಡಿ.ಆರ್.ಕೃಷ್ಣಮೂರ್ತಿ ಅವರಿಗೆ ಮನವಿ ಸಲ್ಲಿಸಿ, ರೈತರ ಸಮಸ್ಯೆಯ ಕುರಿತು ಮಾತನಾಡಿದರು.<br /> ಕಾಲುವೆಯಲ್ಲಿ ಬೇಡಿಕೆಗಿಂತ ಹೆಚ್ಚು ನೀರು ಹರಿಯುತ್ತಿರುವುದು ತಿಳಿದು ಬಂದಿದ್ದು, ವ್ಯರ್ಥವಾಗಿ ಹಳ್ಳಗಳಿಗೆ ಹರಿಸುವುದನ್ನು ಬಿಟ್ಟು, ಅದೇ ನೀರನ್ನು ರೈತರಿಗೆ ನೀಡಬೇಕು. ಮಾ.14ರಂದು ರಾತ್ರಿ ಜಲಾಶಯದಿಂದ ನದಿಗೆ ಅಗತ್ಯಕ್ಕಿಂತ ಹೆಚ್ಚಿನ ನೀರನ್ನು ಹರಿಸಿದ್ದೇಕೆ? ಎಂದು ಪ್ರಶ್ನಿಸಿದರು.<br /> <br /> ಶಾಸಕರಿಂದ ಮನವಿ ಪತ್ರ ಸ್ವೀಕರಿಸಿದ ಕೃಷ್ಣಮೂರ್ತಿ ಮಾತನಾಡಿ, ನಾವು ಕೂಡ ರೈತರ ಮಕ್ಕಳಾಗಿ ಜನಿಸಿದ್ದೇವೆ. ರೈತರ ಸಮಸ್ಯೆ ನಮಗೂ ತಿಳಿದಿದೆ. ಮೇಲಧಿಕಾರಿಗಳ ಆದೇಶದಂತೆ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಶಾಸಕರಿಗೆ ಭರವಸೆ ನೀಡಿದರು.<br /> ಜಲಾಶಯದ ವಿಭಾಗೀಯ ಕಾರ್ಯ ನಿರ್ವಾಹಕ ಎಂಜಿನಿಯರ್ ರಂಗಾರಾಮ್, ನದಿಗೆ ನೀರು ಹರಿಸಿರುವ ಕುರಿತು ಮಾಹಿತಿ ನೀಡಿದರು.<br /> ಮುಖಂಡರಾದ ರಾಜಶೇಖರಗೌಡ ವಜ್ಜಲ್, ಸೂಲಪ್ಪ ಕಮತಗಿ, ನಿಂಗಣ್ಣ ಬಳಿ, ಪ್ರಭುಗೌಡ ಪಾಟೀಲ, ಆರ್.ಎಂ.ರೇವಡಿ, ಮುದಿಗೌಡ ಕುಪ್ಪಿ, ಗುಂಡಪ್ಪ ಸೊಲ್ಲಾಪುರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>