<p><span style="font-size: 26px;"><strong>ಬೆಳಗಾವಿ</strong>: `ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣ ವಿಸ್ತರಣೆ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಅಭಿವೃದ್ಧಿಗೊಳಿಸಲು ಭಾರತೀಯ ವಾಯುಪಡೆ ಪ್ರಾಧಿಕಾರವು 33.22 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ' ಎಂದು ಸಕ್ಕರೆ, ಮುಜರಾಯಿ ಹಾಗೂ ಸಣ್ಣ ಕೈಗಾರಿಕೆ ಖಾತೆ ಸಚಿವ ಪ್ರಕಾಶ ಹುಕ್ಕೇರಿ ತಿಳಿಸಿದರು.</span><br /> <br /> ನಗರದಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, `ಈ ಕಾಮಗಾರಿಗಳಿಗೆ ಕುರಿತಂತೆ ಇ-ಟೆಂಡರ್ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ರನ್ವೇ ವಿಸ್ತರಣೆ, ಎಪ್ರಾನ್ ನಿರ್ಮಾಣ, ಟ್ಯಾಕ್ಸಿ ಮಾರ್ಗ ಸೇರಿದಂತೆ ಇತರ ಅವಶ್ಯಕ ಕಾಮಗಾರಿಗಳನ್ನು 33.22 ಕೋಟಿ ರೂಪಾಯಿ ಅನುದಾನದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಮುಂದಿನ 15 ತಿಂಗಳ ಅವಧಿಯಲ್ಲಿ ಈ ಕಾಮಗಾರಿಗಳು ಪೂರ್ಣಗೊಳ್ಳಲಿವೆ' ಎಂದು ಅವರು ತಿಳಿಸಿದರು.<br /> <br /> `ಆಗಸ್ಟ್ 15ರಂದು ಬೆಳಗಾವಿ- ಗೋವಾ ಹಾಗೂ ಮುಂಬೈ ನಡುವೆ ಸ್ಪೈಸ್ ಜೆಟ್ ವಿಮಾನ ಹಾರಾಟ ಪ್ರಾರಂಭವಾಗಲಿದೆ. ಇದರಿಂದ ಈ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ' ಎಂದು ಹುಕ್ಕೇರಿ ತಿಳಿಸಿದರು.<br /> <br /> `ಕಳೆದ ಅಕ್ಟೋಬರ್ 2ರಂದು ಆರಂಭಗೊಂಡಿದ್ದ ಮಿರಜ್- ಯಶವಂತಪುರ ರೈಲನ್ನು ಮೇ 30ರಿಂದ ಸ್ಥಗಿತಗೊಳಿಸಲಾಗಿತ್ತು. ಈ ಕುರಿತು ತಾವು ಕೇಂದ್ರ ರೈಲ್ವೆ ಖಾತೆ ಸಚಿವರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಜುಲೈ 4ರಂದು ಖುದ್ದಾಗಿ ಭೇಟಿಯಾಗಿ ಈ ರೈಲನ್ನು ಪ್ರಾರಂಭಿಸುವಂತೆ ಮನವಿ ಮಾಡಿಕೊಂಡಿದ್ದೆ. ಅವರು ಅದನ್ನು ಪುನಃ ಆರಂಭಿಸಲು ಆದೇಶಿಸಿದ್ದರು. ಹೀಗಾಗಿ ಜುಲೈ 6ರಿಂದ ಈ ರೈಲು ಪುನರ್ ಪ್ರಾರಂಭವಾಗಿದ್ದು, ವಾರದಲ್ಲಿ 5 ದಿನಗಳ ಕಾಲ ಸಂಚರಿಸಲಿದೆ' ಎಂದು ಸಚಿವರು ಮಾಹಿತಿ ನೀಡಿದರು.<br /> <br /> `ಹೊಸಪೇಟೆ- ಹುಬ್ಬಳ್ಳಿ- ಲೋಂಡಾ ಹೊಸ ರೈಲ್ವೆ ಮಾರ್ಗಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ಜುಲೈ 13ರಂದು ಲೋಂಡಾದಲ್ಲಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ' ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;"><strong>ಬೆಳಗಾವಿ</strong>: `ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣ ವಿಸ್ತರಣೆ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಅಭಿವೃದ್ಧಿಗೊಳಿಸಲು ಭಾರತೀಯ ವಾಯುಪಡೆ ಪ್ರಾಧಿಕಾರವು 33.22 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ' ಎಂದು ಸಕ್ಕರೆ, ಮುಜರಾಯಿ ಹಾಗೂ ಸಣ್ಣ ಕೈಗಾರಿಕೆ ಖಾತೆ ಸಚಿವ ಪ್ರಕಾಶ ಹುಕ್ಕೇರಿ ತಿಳಿಸಿದರು.</span><br /> <br /> ನಗರದಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, `ಈ ಕಾಮಗಾರಿಗಳಿಗೆ ಕುರಿತಂತೆ ಇ-ಟೆಂಡರ್ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ರನ್ವೇ ವಿಸ್ತರಣೆ, ಎಪ್ರಾನ್ ನಿರ್ಮಾಣ, ಟ್ಯಾಕ್ಸಿ ಮಾರ್ಗ ಸೇರಿದಂತೆ ಇತರ ಅವಶ್ಯಕ ಕಾಮಗಾರಿಗಳನ್ನು 33.22 ಕೋಟಿ ರೂಪಾಯಿ ಅನುದಾನದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಮುಂದಿನ 15 ತಿಂಗಳ ಅವಧಿಯಲ್ಲಿ ಈ ಕಾಮಗಾರಿಗಳು ಪೂರ್ಣಗೊಳ್ಳಲಿವೆ' ಎಂದು ಅವರು ತಿಳಿಸಿದರು.<br /> <br /> `ಆಗಸ್ಟ್ 15ರಂದು ಬೆಳಗಾವಿ- ಗೋವಾ ಹಾಗೂ ಮುಂಬೈ ನಡುವೆ ಸ್ಪೈಸ್ ಜೆಟ್ ವಿಮಾನ ಹಾರಾಟ ಪ್ರಾರಂಭವಾಗಲಿದೆ. ಇದರಿಂದ ಈ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ' ಎಂದು ಹುಕ್ಕೇರಿ ತಿಳಿಸಿದರು.<br /> <br /> `ಕಳೆದ ಅಕ್ಟೋಬರ್ 2ರಂದು ಆರಂಭಗೊಂಡಿದ್ದ ಮಿರಜ್- ಯಶವಂತಪುರ ರೈಲನ್ನು ಮೇ 30ರಿಂದ ಸ್ಥಗಿತಗೊಳಿಸಲಾಗಿತ್ತು. ಈ ಕುರಿತು ತಾವು ಕೇಂದ್ರ ರೈಲ್ವೆ ಖಾತೆ ಸಚಿವರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಜುಲೈ 4ರಂದು ಖುದ್ದಾಗಿ ಭೇಟಿಯಾಗಿ ಈ ರೈಲನ್ನು ಪ್ರಾರಂಭಿಸುವಂತೆ ಮನವಿ ಮಾಡಿಕೊಂಡಿದ್ದೆ. ಅವರು ಅದನ್ನು ಪುನಃ ಆರಂಭಿಸಲು ಆದೇಶಿಸಿದ್ದರು. ಹೀಗಾಗಿ ಜುಲೈ 6ರಿಂದ ಈ ರೈಲು ಪುನರ್ ಪ್ರಾರಂಭವಾಗಿದ್ದು, ವಾರದಲ್ಲಿ 5 ದಿನಗಳ ಕಾಲ ಸಂಚರಿಸಲಿದೆ' ಎಂದು ಸಚಿವರು ಮಾಹಿತಿ ನೀಡಿದರು.<br /> <br /> `ಹೊಸಪೇಟೆ- ಹುಬ್ಬಳ್ಳಿ- ಲೋಂಡಾ ಹೊಸ ರೈಲ್ವೆ ಮಾರ್ಗಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ಜುಲೈ 13ರಂದು ಲೋಂಡಾದಲ್ಲಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ' ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>