ಜಮ್ಮು (ಪಿಟಿಐ): ರಾಜ್ಯಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ಕಲಂ ಅಗತ್ಯತೆ ಕುರಿತು ಸಂಸತ್ತಿನಲ್ಲಿ ವಿಸ್ತೃತ ಚರ್ಚೆ ನಡೆಯಬೇಕೆಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಮೂಲಕ ಬಿಜೆಪಿ ಸಂವಿಧಾನದ 370ನೇ ಕಲಂಗೆ ಸಂಬಂಧಿಸಿದಂತೆ ತನ್ನ ಈ ಹಿಂದಿನ ಧೋರಣೆ ಸಡಿಲಿಸಿದೆ.
ಭಾನುವಾರ ನಡೆದ ‘ಲಲ್ಕಾರ್’ ರ್ಯಾಲಿಯಲ್ಲಿ ಮಾತನಾಡಿದ ಅವರು, 370ನೇ ಕಲಂನ ವಿವಿಧ ಮಗ್ಗಲು ಕುರಿತು ಚರ್ಚೆ ನಡೆಯಬೇಕು ಎಂದರು. ಇದಕ್ಕೂ ಮುನ್ನ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜ್ನಾಥ್ ಸಿಂಗ್ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ಒದಗಿಸುವ 370ನೇ ಕಲಂನಿಂದ ನಿಜಕ್ಕೂ ಲಾಭವಿದೆಯೇ ಎಂದು ಪ್ರಶ್ನಿಸಿದ್ದರು. ಬಳಿಕ ಮೋದಿ ಅವರು ಇದೇ ವಿಷಯವನ್ನು ಮತ್ತೆ ತಮ್ಮ ಭಾಷಣದಲ್ಲಿ ಪ್ರಸ್ತಾಪ ಮಾಡಿದರು.
‘ದೇಶದ ಇತರ ಭಾಗಗಳಲ್ಲಿ ಇರುವಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮಹಿಳೆಯರಿಗೆ ಸಮಾನ ಸ್ಥಾನಮಾನ ಇಲ್ಲ. ರಾಜ್ಯದಲ್ಲಿ ಪ್ರವಾಸೋದ್ಯಮ ಸಂಪೂರ್ಣ ನೆಲಕಚ್ಚಿದೆ’ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ‘ಮೋದಿ ಸುಳ್ಳುಗಾರ’: ರಾಜ್ಯದಲ್ಲಿ ಮಹಿಳೆಯರಿಗೆ ಸಮಾನ ಹಕ್ಕುಗಳಿಲ್ಲ ಎಂದಿರುವ ಮೋದಿ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ‘ಮೋದಿ ಸುಳ್ಳು ಹೇಳುತ್ತಿದ್ದಾರೆ.