<p><strong>ಕೊಪ್ಪಳ: </strong>ಸಂವಿಧಾನದ 371ನೇ ವಿಧಿಗೆ ಸೂಕ್ತ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವ ಸಲುವಾಗಿ ಏ. 30ರಂದು ಗುಲ್ಬರ್ಗದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಹೈದರಾಬಾದ್ ಕರ್ನಾಟಕ ಜನಾಂದೋಲನ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ರಾಘವೇಂದ್ರ ಕುಷ್ಟಗಿ ಹೇಳಿದರು.<br /> <br /> ಏಪ್ರಿಲ್ ಮೂರನೇ ವಾರದಿಂದ ಈ ಸಂಬಂಧ ಕೊಪ್ಪಳದಿಂದ ಬೃಹತ್ ಜಾಥಾ ಆರಂಭಿಸಲಾಗುವುದು. ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಪ್ರಮುಖ ಪಟ್ಟಣ- ಗ್ರಾಮಗಳ ಮೂಲಕ ಹಾಯ್ದು ಹೋಗುವ ಈ ಜಾಥಾ ಏ. 30ರ ಹೊತ್ತಿಗೆ ಗುಲ್ಬರ್ಗ ತಲುಪಲಿದೆ ಎಂದು ಅವರು ಭಾನುವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.<br /> <br /> <br /> ಇದೇ ಮಾದರಿಯಲ್ಲಿ ಮತ್ತೊಂದು ಜಾಥಾ ಬೀದರ್ನಿಂದ ಹೊರಡಲಿದ್ದು, ಅದು ಸಹ ಏ. 30ರ ಹೊತ್ತಿಗೆ ಗುಲ್ಬರ್ಗ ತಲುಪಲಿದೆ. ಜಾಥಾ ಸಂಚರಿಸುವ ಮಾರ್ಗದಲ್ಲಿ ಬರುವ ಪಟ್ಟಣ- ಗ್ರಾಮಗಳಲ್ಲಿ ಬಹಿರಂಗ ಸಭೆ ನಡೆಸಲಾಗುವುದು. ಈ ತಿದ್ದುಪಡಿಯಿಂದ ಹೈ.ಕ ಪ್ರದೇಶದ ವಿದ್ಯಾರ್ಥಿಗಳಿಗೆ ಹಾಗೂ ಯುವ ಜನತೆಗೆ ಶೈಕ್ಷಣಿಕ ಮತ್ತು ಔದ್ಯೋಗಿಕವಾಗಿ ಯಾವ ರೀತಿ ಅನುಕೂಲವಾಗಲಿದೆ ಎಂಬುದನ್ನು ಮನವರಿಕೆ ಮಾಡಿಕೊಡಲಾಗುವುದು ಎಂದು ಅವರು ಹೇಳಿದರು.<br /> <br /> ತಿದ್ದುಪಡಿಯಿಂದ ಆಗುವ ಲಾಭದ ಜೊತೆಗೆ, ಈ ವರೆಗೆ ವಿವಿಧ ಕ್ಷೇತ್ರಗಳಲ್ಲಿ ಈ ಭಾಗಕ್ಕೆ ಆಗಿರುವ ಅನ್ಯಾಯವನ್ನು ಅಂಕಿ-ಅಂಶ ಸಮೇತ ಜನರ ಮುಂದಿಡಲಾಗುವುದು. ಸಂವಿಧಾನದ 371ನೇ ವಿಧಿಗೆ ತಿದ್ದುಪಡಿ ತರುವುದು ನಮ್ಮ ಹಕ್ಕು ಹೊರತಾಗಿ ಕೇಂದ್ರವು ನೀಡುವ ಭಿಕ್ಷೆಯಲ್ಲ ಎಂಬುದನ್ನು ಮನದಟ್ಟು ಮಾಡುವ ಈ ಸಮಾವೇಶದಲ್ಲಿ 10 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು.<br /> <br /> ಇದೇ ಬೇಡಿಕೆಯನ್ನು ಮುಂದಿಟ್ಟುಕೊಂಡು ಕಳೆದ ದಶಕಗಳಲ್ಲಿ ಹೋರಾಟ ಆರಂಭಿಸಲಾಯಿತು. ಆಗ ನಮ್ಮ ಹೋರಾಟವನ್ನು ಉಪೇಕ್ಷೆ ಮಾಡಿದ ಹಲವು ನಾಯಕರು ವಿರೋಧವನ್ನು ಸಹ ವ್ಯಕ್ತಪಡಿಸಿದ್ದರು. ಆದರೆ, ಈ ಅದೇ ನಾಯಕರು ನಮ್ಮ ಬೇಡಿಕೆ ನ್ಯಾಯಯುತವಾಗಿದೆ ಎಂಬುದಾಗಿ ಹೇಳುತ್ತಿದ್ದಾರಲ್ಲದೇ, ಈ ಬಗ್ಗೆ ಸಂಸತ್ತಿನಲ್ಲಿ ಪ್ರಸ್ತಾಪಿಸುವ ಭರವಸೆ ನೀಡುತ್ತಿದ್ದಾರೆ ಎಂದು ಅವರು ಹೇಳಿದರು. ಅದರಲ್ಲೂ, ಈ ಭಾಗದ ಪ್ರಮುಖ ನಾಯಕರಾದ ಮಾಜಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್, ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೇಂದ್ರ ಕಾನೂನು ಸಚಿವ ವೀರಪ್ಪ ಮೊಯ್ಲಿ ಸಹ ಈ ಬಾರಿ ಆಸಕ್ತಿ ತೋರುತ್ತಿದ್ದಾರೆ ಎಂದು ಅವರು ಹೇಳಿದರು.<br /> <br /> ಈ ತಿದ್ದುಪಡಿಗೆ ಆಗ್ರಹಿಸಿ ಶೀಘ್ರವೇ ಸರ್ವಪಕ್ಷಗಳ ನಿಯೋಗವೊಂದನ್ನು ನವದೆಹಲಿಗೆ ಒಯ್ಯುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ನಿಯೋಗಕ್ಕೆ ಕೇಂದ್ರವು ಹೇಗೆ ಸ್ಪಂದಿಸುತ್ತದೆ ಎಂಬುದನ್ನು ಪರಾಮರ್ಶಿಸಿ, ಹೋರಾಟದ ಮುಂದಿನ ರೂಪುರೇಷೆ ನಿರ್ಧರಿಸಲಾಗುವುದು ಎಂದೂ ಅವರು ಸ್ಪಷ್ಟಪಡಿಸಿದರು.<br /> <br /> ಮತ್ತೊಂದು ಸುತ್ತಿನ ಸಭೆ: ಕೊಪ್ಪಳದಿಂದ ಮುಂದಿನ ತಿಂಗಳು ಹೊರಡಲಿರುವ ಜಾಥಾ ಕುರಿತಂತೆ ಚರ್ಚಿಸಲು ಶೀಘ್ರವೇ ಇಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲಾಗುವುದು. ಈ ಸಭೆಯಲ್ಲಿ ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಅಧ್ಯಕ್ಷ ವೈಜನಾಥ ಪಾಟೀಲ ಹಾಗೂ ಇತರ ಪ್ರಮುಖರು ಸಹ ಪಾಲ್ಗೊಳ್ಳುವರು ಎಂದು ಅವರು ಹೇಳಿದರು.<br /> ಕೇಂದ್ರದ ಕಾರ್ಯಕರ್ತ ಐ.ಜಿ.ಪುಲಿ ಸಹ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ: </strong>ಸಂವಿಧಾನದ 371ನೇ ವಿಧಿಗೆ ಸೂಕ್ತ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವ ಸಲುವಾಗಿ ಏ. 30ರಂದು ಗುಲ್ಬರ್ಗದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಹೈದರಾಬಾದ್ ಕರ್ನಾಟಕ ಜನಾಂದೋಲನ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ರಾಘವೇಂದ್ರ ಕುಷ್ಟಗಿ ಹೇಳಿದರು.<br /> <br /> ಏಪ್ರಿಲ್ ಮೂರನೇ ವಾರದಿಂದ ಈ ಸಂಬಂಧ ಕೊಪ್ಪಳದಿಂದ ಬೃಹತ್ ಜಾಥಾ ಆರಂಭಿಸಲಾಗುವುದು. ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಪ್ರಮುಖ ಪಟ್ಟಣ- ಗ್ರಾಮಗಳ ಮೂಲಕ ಹಾಯ್ದು ಹೋಗುವ ಈ ಜಾಥಾ ಏ. 30ರ ಹೊತ್ತಿಗೆ ಗುಲ್ಬರ್ಗ ತಲುಪಲಿದೆ ಎಂದು ಅವರು ಭಾನುವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.<br /> <br /> <br /> ಇದೇ ಮಾದರಿಯಲ್ಲಿ ಮತ್ತೊಂದು ಜಾಥಾ ಬೀದರ್ನಿಂದ ಹೊರಡಲಿದ್ದು, ಅದು ಸಹ ಏ. 30ರ ಹೊತ್ತಿಗೆ ಗುಲ್ಬರ್ಗ ತಲುಪಲಿದೆ. ಜಾಥಾ ಸಂಚರಿಸುವ ಮಾರ್ಗದಲ್ಲಿ ಬರುವ ಪಟ್ಟಣ- ಗ್ರಾಮಗಳಲ್ಲಿ ಬಹಿರಂಗ ಸಭೆ ನಡೆಸಲಾಗುವುದು. ಈ ತಿದ್ದುಪಡಿಯಿಂದ ಹೈ.ಕ ಪ್ರದೇಶದ ವಿದ್ಯಾರ್ಥಿಗಳಿಗೆ ಹಾಗೂ ಯುವ ಜನತೆಗೆ ಶೈಕ್ಷಣಿಕ ಮತ್ತು ಔದ್ಯೋಗಿಕವಾಗಿ ಯಾವ ರೀತಿ ಅನುಕೂಲವಾಗಲಿದೆ ಎಂಬುದನ್ನು ಮನವರಿಕೆ ಮಾಡಿಕೊಡಲಾಗುವುದು ಎಂದು ಅವರು ಹೇಳಿದರು.<br /> <br /> ತಿದ್ದುಪಡಿಯಿಂದ ಆಗುವ ಲಾಭದ ಜೊತೆಗೆ, ಈ ವರೆಗೆ ವಿವಿಧ ಕ್ಷೇತ್ರಗಳಲ್ಲಿ ಈ ಭಾಗಕ್ಕೆ ಆಗಿರುವ ಅನ್ಯಾಯವನ್ನು ಅಂಕಿ-ಅಂಶ ಸಮೇತ ಜನರ ಮುಂದಿಡಲಾಗುವುದು. ಸಂವಿಧಾನದ 371ನೇ ವಿಧಿಗೆ ತಿದ್ದುಪಡಿ ತರುವುದು ನಮ್ಮ ಹಕ್ಕು ಹೊರತಾಗಿ ಕೇಂದ್ರವು ನೀಡುವ ಭಿಕ್ಷೆಯಲ್ಲ ಎಂಬುದನ್ನು ಮನದಟ್ಟು ಮಾಡುವ ಈ ಸಮಾವೇಶದಲ್ಲಿ 10 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು.<br /> <br /> ಇದೇ ಬೇಡಿಕೆಯನ್ನು ಮುಂದಿಟ್ಟುಕೊಂಡು ಕಳೆದ ದಶಕಗಳಲ್ಲಿ ಹೋರಾಟ ಆರಂಭಿಸಲಾಯಿತು. ಆಗ ನಮ್ಮ ಹೋರಾಟವನ್ನು ಉಪೇಕ್ಷೆ ಮಾಡಿದ ಹಲವು ನಾಯಕರು ವಿರೋಧವನ್ನು ಸಹ ವ್ಯಕ್ತಪಡಿಸಿದ್ದರು. ಆದರೆ, ಈ ಅದೇ ನಾಯಕರು ನಮ್ಮ ಬೇಡಿಕೆ ನ್ಯಾಯಯುತವಾಗಿದೆ ಎಂಬುದಾಗಿ ಹೇಳುತ್ತಿದ್ದಾರಲ್ಲದೇ, ಈ ಬಗ್ಗೆ ಸಂಸತ್ತಿನಲ್ಲಿ ಪ್ರಸ್ತಾಪಿಸುವ ಭರವಸೆ ನೀಡುತ್ತಿದ್ದಾರೆ ಎಂದು ಅವರು ಹೇಳಿದರು. ಅದರಲ್ಲೂ, ಈ ಭಾಗದ ಪ್ರಮುಖ ನಾಯಕರಾದ ಮಾಜಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್, ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೇಂದ್ರ ಕಾನೂನು ಸಚಿವ ವೀರಪ್ಪ ಮೊಯ್ಲಿ ಸಹ ಈ ಬಾರಿ ಆಸಕ್ತಿ ತೋರುತ್ತಿದ್ದಾರೆ ಎಂದು ಅವರು ಹೇಳಿದರು.<br /> <br /> ಈ ತಿದ್ದುಪಡಿಗೆ ಆಗ್ರಹಿಸಿ ಶೀಘ್ರವೇ ಸರ್ವಪಕ್ಷಗಳ ನಿಯೋಗವೊಂದನ್ನು ನವದೆಹಲಿಗೆ ಒಯ್ಯುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ನಿಯೋಗಕ್ಕೆ ಕೇಂದ್ರವು ಹೇಗೆ ಸ್ಪಂದಿಸುತ್ತದೆ ಎಂಬುದನ್ನು ಪರಾಮರ್ಶಿಸಿ, ಹೋರಾಟದ ಮುಂದಿನ ರೂಪುರೇಷೆ ನಿರ್ಧರಿಸಲಾಗುವುದು ಎಂದೂ ಅವರು ಸ್ಪಷ್ಟಪಡಿಸಿದರು.<br /> <br /> ಮತ್ತೊಂದು ಸುತ್ತಿನ ಸಭೆ: ಕೊಪ್ಪಳದಿಂದ ಮುಂದಿನ ತಿಂಗಳು ಹೊರಡಲಿರುವ ಜಾಥಾ ಕುರಿತಂತೆ ಚರ್ಚಿಸಲು ಶೀಘ್ರವೇ ಇಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲಾಗುವುದು. ಈ ಸಭೆಯಲ್ಲಿ ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಅಧ್ಯಕ್ಷ ವೈಜನಾಥ ಪಾಟೀಲ ಹಾಗೂ ಇತರ ಪ್ರಮುಖರು ಸಹ ಪಾಲ್ಗೊಳ್ಳುವರು ಎಂದು ಅವರು ಹೇಳಿದರು.<br /> ಕೇಂದ್ರದ ಕಾರ್ಯಕರ್ತ ಐ.ಜಿ.ಪುಲಿ ಸಹ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>