ಹೈದರಾಬಾದ್ ಕರ್ನಾಟಕದ ಜನರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ, ಅಭಿವೃದ್ಧಿ ಮಂಡಳಿಯ ಮೂಲಕ ಕೈಗೆತ್ತಿಕೊಳ್ಳುವ ಯೋಜನೆಗಳ ಅನುಷ್ಠಾನ ಮತ್ತಿತರ ಸಂದರ್ಭಗಳಲ್ಲಿ ಅನುಸರಿಸಬೇಕಾದ ನೀತಿ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಜುಲೈ 10ರೊಳಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಲು ಸಮಿತಿ ನಿರ್ಧರಿಸಿತ್ತು. ಆದರೆ, ಇನ್ನೂ ಕೆಲ ವಿಷಯಗಳ ಕುರಿತು ಚರ್ಚೆ ಪೂರ್ಣಗೊಂಡಿಲ್ಲ. ಈ ಕಾರಣದಿಂದ ಮಂಗಳವಾರ ಮತ್ತೊಂದು ಸಭೆ ನಡೆಸಿ ನಿಯಮಗಳನ್ನು ರೂಪಿಸುವ ಕೆಲಸವನ್ನು ಅಂತಿಮಗೊಳಿಸಲು ನಿರ್ಧರಿಸಲಾಗಿದೆ.