<p><strong>ಕೋಲ್ಕತ್ತ (ಪಿಟಿಐ): </strong>ಪಶ್ಚಿಮ ಬಂಗಾಳದಲ್ಲಿ ಮಂಗಳವಾರ ನಡೆದ ನಾಲ್ಕನೇ ಹಂತದ ವಿಧಾನಸಭಾ ಚುನಾವಣೆಯಲ್ಲಿ ಶೇ 84.8ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.<br /> ‘ಈ ಹಿಂದೆ ನಡೆದ 3 ಹಂತದ ಚುನಾವಣೆಯಂತೆ ನಾಲ್ಕನೇ ಹಂತವೂ ಶಾಂತಿಯುತವಾಗಿ ನಡೆಯಿತು’ ಎಂದು ಉಪ ಚುನಾವಣಾ ಆಯುಕ್ತ ವಿನೋದ್ ಜುಟ್ಶಿ ತಿಳಿಸಿದ್ದಾರೆ.<br /> <br /> ಹೌರಾ, ಹೂಗ್ಲಿ, ಪಶ್ಚಿಮ ಮಿಡ್ನಾಪುರ ಮತ್ತು ಭುರ್ದ್ವಾನ್ ಜಿಲ್ಲೆಯ ಕೆಲವು ಭಾಗಗಳ ಒಟ್ಟು 63 ವಿಧಾನಸಭಾ ಕ್ಷೇತ್ರಗಳಲ್ಲಿ ಮಂಗಳವಾರ ಚುನಾವಣೆ ನಡೆದಿದೆ.2006ರಲ್ಲಿ ನಡೆದ ಚುನಾವಣೆಯಲ್ಲಿ ಈ ಕ್ಷೇತ್ರಗಳಲ್ಲಿ ಶೇ 83.19ರಷ್ಟು ಮತದಾನವಾಗಿತ್ತು. ಚುನಾವಣೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಚುನಾವಣಾ ಆಯೋಗವು ಬಿಹಾರ ಮತ್ತು ಒಡಿಶಾದ ಮುಖ್ಯ ಚುನಾವಣಾ ಆಯುಕ್ತರನ್ನು ವೀಕ್ಷಕರನ್ನಾಗಿ ನೇಮಿಸಿತ್ತು.<br /> <br /> ಅಭಿವೃದ್ಧಿ ವಿಚಾರ ಮುಂದಿಟ್ಟು ನಾಲ್ಕು ಮತಗಟ್ಟೆಗಳಲ್ಲಿ ಜನರು ಚುನಾ ವಣೆ ಬಹಿಷ್ಕರಿಸಿದ್ದಾರೆ. ಚುನಾವಣಾ ವೀಕ್ಷಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಇಬ್ಬರು ಮತಗಟ್ಟೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಈ ಕರ್ತವ್ಯದಿಂದ ತೆಗೆದುಹಾಕಿದೆ.<br /> <br /> <strong>ಎಡರಂಗ ನಿರ್ನಾಮ:</strong> ಮಮತಾ ಭವಿಷ್ಯ- (ನಾರಾಯಣಗಡ ವರದಿ): ಚುನಾವಣೆ ಬಳಿಕ ರಾಜ್ಯದಲ್ಲಿ ಎಡರಂಗ ಸಂಪೂರ್ಣವಾಗಿ ನಿರ್ನಾಮವಾಗಲಿದೆ ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಭವಿಷ್ಯ ನುಡಿದಿದ್ದಾರೆ.<br /> <br /> ಪಶ್ಚಿಮ ಮಿಡ್ನಾಪುರ ಜಿಲ್ಲೆಯ ನಾರಾಯಣಗಡದಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ ಅವರು, ಮಂಗಳವಾರ ಚುನಾವಣೆ ನಡೆದ ಒಟ್ಟು 63 ಕ್ಷೇತ್ರಗಳಲ್ಲಿ ತಮ್ಮ ಪಕ್ಷ ಎಷ್ಟು ಸ್ಥಾನ ಗೆಲ್ಲಬಹುದು ಎಂದು ಹೇಳಲಿಲ್ಲ.<br /> <br /> ಈ ಮೊದಲು ಒಟ್ಟು 179 ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ನಡೆದಿದ್ದ ಚುನಾವಣೆಯಲ್ಲಿ ತೃಣಮೂಲ ಮೈತ್ರಿ ಕೂಟ ಒಟ್ಟು 170 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಮತಾ ಭವಿಷ್ಯ ನುಡಿದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ (ಪಿಟಿಐ): </strong>ಪಶ್ಚಿಮ ಬಂಗಾಳದಲ್ಲಿ ಮಂಗಳವಾರ ನಡೆದ ನಾಲ್ಕನೇ ಹಂತದ ವಿಧಾನಸಭಾ ಚುನಾವಣೆಯಲ್ಲಿ ಶೇ 84.8ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.<br /> ‘ಈ ಹಿಂದೆ ನಡೆದ 3 ಹಂತದ ಚುನಾವಣೆಯಂತೆ ನಾಲ್ಕನೇ ಹಂತವೂ ಶಾಂತಿಯುತವಾಗಿ ನಡೆಯಿತು’ ಎಂದು ಉಪ ಚುನಾವಣಾ ಆಯುಕ್ತ ವಿನೋದ್ ಜುಟ್ಶಿ ತಿಳಿಸಿದ್ದಾರೆ.<br /> <br /> ಹೌರಾ, ಹೂಗ್ಲಿ, ಪಶ್ಚಿಮ ಮಿಡ್ನಾಪುರ ಮತ್ತು ಭುರ್ದ್ವಾನ್ ಜಿಲ್ಲೆಯ ಕೆಲವು ಭಾಗಗಳ ಒಟ್ಟು 63 ವಿಧಾನಸಭಾ ಕ್ಷೇತ್ರಗಳಲ್ಲಿ ಮಂಗಳವಾರ ಚುನಾವಣೆ ನಡೆದಿದೆ.2006ರಲ್ಲಿ ನಡೆದ ಚುನಾವಣೆಯಲ್ಲಿ ಈ ಕ್ಷೇತ್ರಗಳಲ್ಲಿ ಶೇ 83.19ರಷ್ಟು ಮತದಾನವಾಗಿತ್ತು. ಚುನಾವಣೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಚುನಾವಣಾ ಆಯೋಗವು ಬಿಹಾರ ಮತ್ತು ಒಡಿಶಾದ ಮುಖ್ಯ ಚುನಾವಣಾ ಆಯುಕ್ತರನ್ನು ವೀಕ್ಷಕರನ್ನಾಗಿ ನೇಮಿಸಿತ್ತು.<br /> <br /> ಅಭಿವೃದ್ಧಿ ವಿಚಾರ ಮುಂದಿಟ್ಟು ನಾಲ್ಕು ಮತಗಟ್ಟೆಗಳಲ್ಲಿ ಜನರು ಚುನಾ ವಣೆ ಬಹಿಷ್ಕರಿಸಿದ್ದಾರೆ. ಚುನಾವಣಾ ವೀಕ್ಷಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಇಬ್ಬರು ಮತಗಟ್ಟೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಈ ಕರ್ತವ್ಯದಿಂದ ತೆಗೆದುಹಾಕಿದೆ.<br /> <br /> <strong>ಎಡರಂಗ ನಿರ್ನಾಮ:</strong> ಮಮತಾ ಭವಿಷ್ಯ- (ನಾರಾಯಣಗಡ ವರದಿ): ಚುನಾವಣೆ ಬಳಿಕ ರಾಜ್ಯದಲ್ಲಿ ಎಡರಂಗ ಸಂಪೂರ್ಣವಾಗಿ ನಿರ್ನಾಮವಾಗಲಿದೆ ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಭವಿಷ್ಯ ನುಡಿದಿದ್ದಾರೆ.<br /> <br /> ಪಶ್ಚಿಮ ಮಿಡ್ನಾಪುರ ಜಿಲ್ಲೆಯ ನಾರಾಯಣಗಡದಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ ಅವರು, ಮಂಗಳವಾರ ಚುನಾವಣೆ ನಡೆದ ಒಟ್ಟು 63 ಕ್ಷೇತ್ರಗಳಲ್ಲಿ ತಮ್ಮ ಪಕ್ಷ ಎಷ್ಟು ಸ್ಥಾನ ಗೆಲ್ಲಬಹುದು ಎಂದು ಹೇಳಲಿಲ್ಲ.<br /> <br /> ಈ ಮೊದಲು ಒಟ್ಟು 179 ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ನಡೆದಿದ್ದ ಚುನಾವಣೆಯಲ್ಲಿ ತೃಣಮೂಲ ಮೈತ್ರಿ ಕೂಟ ಒಟ್ಟು 170 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಮತಾ ಭವಿಷ್ಯ ನುಡಿದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>